ಕುಟುಂಬದ ಭೇಟಿಗೆ ಕೊನೆಯ ಅವಕಾಶ : ನಿರ್ಭಯಾ ಹಂತಕರಿಗೆ ಅಧಿಕಾರಿಗಳಿಂದ ಸೂಚನೆ


Team Udayavani, Feb 23, 2020, 6:51 AM IST

nirbhaya

ಹೊಸದಿಲ್ಲಿ: ನಿರ್ಭಯಾ ಹಂತಕರ ಗಲ್ಲು ಶಿಕ್ಷೆ ಜಾರಿಗೆ ಇನ್ನು ಕೆಲವೇ ದಿನಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಅವರಿಗೆ ತಮ್ಮ ಸಂಬಂಧಿಗಳನ್ನು ಕೊನೆಯ ಬಾರಿ ನೋಡುವ ಅವಕಾಶ ನೀಡಲಾಗಿದೆ. ಸದ್ಯಕ್ಕೆ ಚಾಲ್ತಿಯಲ್ಲಿರುವ ಡೆತ್‌ ವಾರಂಟ್‌ನಂತೆ, ಮಾ. 3ರಂದು ಬೆಳಗಿನ ಜಾವ 6 ಗಂಟೆಗೆ ಗಲ್ಲು ಶಿಕ್ಷೆ ಜಾರಿಯಾಗುವ ನಿರೀಕ್ಷೆಯಿದೆ.

ಪ್ರಕರಣದ ಅಪರಾಧಿಗಳಾದ ಮುಕೇಶ್‌ ಹಾಗೂ ಪವನ್‌ ಅವರು ಫೆ. 1ರಂದು ಜಾರಿ ಗೊಂಡ ಡೆತ್‌ ವಾರಂಟ್‌ಗೂ ಮುನ್ನವೇ ತಮ್ಮ ಕುಟುಂಬಸ್ಥರನ್ನು ಭೇಟಿ ಮಾಡಿದ್ದರು. ಹಾಗಾಗಿ, ಇನ್ನಿಬ್ಬರಾದ ಅಕ್ಷಯ್‌ ಹಾಗೂ ವಿನಯ್‌ ಕುಮಾರ್‌ ಅವರಿಗೆ ತಮ್ಮ ಕುಟುಂಬ ಸದಸ್ಯರನ್ನು ಭೇಟಿ ಮಾಡುವಂತೆ ಸೂಚನೆ ನೀಡಲಾಗಿದೆ ಎಂದು ತಿಹಾರ್‌ ಜೈಲಾಧಿಕಾರಿಗಳು ತಿಳಿಸಿದ್ದಾರೆ.

ಮುಖಾಮುಖೀ ಭೇಟಿ: ಸಾಮಾನ್ಯವಾಗಿ, ಜೈಲಿನಲ್ಲಿರುವ ಅಪರಾಧಿಗಳಿಗೆ ತಮ್ಮ ಸಂಬಂಧಿಕರನ್ನು ಭೇಟಿಯಾಗಲು ಅವಕಾಶ ವಿರುತ್ತದೆ. ಆದರೆ ಪುಟ್ಟ ಕಿಟಕಿಯ ಮೂಲಕ ಮಾತ್ರ ಅವರೊಂದಿಗೆ ಮಾತ ನಾಡಲು ಅವಕಾಶ ಕಲ್ಪಿಸಲಾಗುತ್ತದೆ.

ಈ ಪ್ರಕರಣದಲ್ಲಿ ಅಪರಾಧಿಗಳು ಗಲ್ಲಿಗೇರಲಿ ರುವ ಕಾರಣ ಕೊನೆಯ ಬಾರಿಗೆ ಕುಟುಂಬ ಸದಸ್ಯರನ್ನು ಭೇಟಿಯಾಗುವಾಗ ಮುಖಾ ಮುಖೀಯಾಗಿ ಮಾತನಾಡಲು ಅವಕಾಶ ನೀಡಲಾಗುತ್ತದೆ.

ಫಾಸಿದಾರನ ರವಾನೆಗೆ ಮನವಿ: ಉತ್ತರ ಪ್ರದೇಶದ ಬಂದೀಖಾನೆ ಇಲಾಖೆಗೆ ಪತ್ರ ಬರೆದಿರುವ ತಿಹಾರ್‌ ಜೈಲಧಿಕಾರಿಗಳು, ಗಲ್ಲು ಶಿಕ್ಷೆ ಜಾರಿಗೂ ಎರಡು ದಿನ ಮುಂಚಿತವಾಗಿ ವಧಾಕಾರನನ್ನು ತಿಹಾರ್‌ ಜೈಲಿಗೆ ರವಾನಿಸುವಂತೆ ಕೋರಿದ್ದಾರೆ.

ವಿನಯ್‌ನದ್ದು ಸುಳ್ಳಿನ ಕಂತೆ
ಅಪರಾಧಿ ವಿನಯ್‌ ಶರ್ಮಾ, ಸ್ಕ್ರಿಝೋಫ್ರೀನಿಯಾ ಎಂಬ ಮಾನಸಿಕ ಕಾಯಿಲೆಯಿಂದ ನರಳುತ್ತಿದ್ದು ಆತನಿಗೆ ಹೆಚ್ಚಿನ ಮಟ್ಟದ ಚಿಕಿತ್ಸೆ ನೀಡಬೇಕು. ಸದ್ಯಕ್ಕೆ ಆತನನ್ನು ಗಲ್ಲಿಗೇರಿಸಬಾರದು ಎಂದು ಆತನ ಪರ ವಕೀಲರು ಸಲ್ಲಿಸಿದ್ದ ಮನವಿಯನ್ನು ದಿಲ್ಲಿಯ ಹೆಚ್ಚುವರಿ ಸೆಷನ್ಸ್‌ ನ್ಯಾಯಾಲಯ ತಳ್ಳಿಹಾಕಿದೆ. ವಕೀಲರ ಮನವಿಗೆ ವಿವರಣೆ ಸಲ್ಲಿಸಿದ್ದ ತಿಹಾರ್‌ ಜೈಲಾಧಿಕಾರಿಗಳು ವಿನಯ್‌ ಆರೋಗ್ಯವಾಗಿದ್ದಾನೆಂದು ಹೇಳಿದ್ದರಲ್ಲದೆ, ಅದಕ್ಕೆ ಪೂರಕವಾದ ವೈದ್ಯಕೀಯ ದಾಖಲೆಗಳನ್ನೂ ಸಲ್ಲಿಸಿದ್ದರು. ಅಲ್ಲದೆ ಆತನಿಗೆ ಯಾವ ಮಾನಸಿಕ ಕಾಯಿಲೆಯೂ ಇಲ್ಲ. ಅವನು ಹೇಳುತ್ತಿರುವುದೆಲ್ಲ ಸುಳ್ಳಿನ ಕಂತೆ ಎಂದಿದ್ದರು.

ಟಾಪ್ ನ್ಯೂಸ್

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.