ಯುಪಿ; ಕಾರು ತಡೆದು ನಾಲ್ವರು ಮಹಿಳೆಯರ ಮೇಲೆ ಗ್ಯಾಂಗ್ರೇಪ್! ಹತ್ಯೆ
Team Udayavani, May 25, 2017, 10:52 AM IST
ನೋಯ್ಡಾ: ಉತ್ತರಪ್ರದೇಶದಲ್ಲಿ ದುಷ್ಕರ್ಮಿಗಳು ಅಟ್ಟಹಾಸಗೈದಿದ್ದು, ಬುಲಂದ್ಶಹರ್ನಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಕುಟುಂಬವೊಂದನ್ನು ಅಡ್ಡಗಟ್ಟಿದ ಕಿರಾತಕರು ಗನ್ಪಾಯಿಂಟ್ನಲ್ಲಿ ನಾಲ್ವರು ಮಹಿಳೆಯರ ಮೇಲೆ ಬರ್ಬರವಾಗಿ ಗ್ಯಾಂಗ್ ರೇಪ್ ನಡೆಸಿ, ವ್ಯಕ್ತಿಯೊಬ್ಬನನ್ನು ಗುಂಡಿಟ್ಟು ಹತ್ಯೆಗೈದು ನಗ-ನಗದಿನೊಂದಿಗೆ ಪರಾರಿಯಾದ ಕಳವಳಕಾರಿ ಘಟನೆ ಬುಧವಾರ ರಾತ್ರಿ ನಡೆದಿದೆ.
ಬುಲಂದ್ಶಹರ್ನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಗುವೊಂದನ್ನು ನೋಡಲೆಂದು ಕಾರಿನಲ್ಲಿ ನಾಲ್ವರು ಮಹಿಳೆಯರು,ಇಬ್ಬರು ಮಕ್ಕಳು ಮತ್ತು ಇಬ್ಬರು ಪುರುಷರು ತೆರಳುತ್ತಿದ್ದರು. ಈ ವೇಳೆ 6 ರಿಂದ 7 ಮಂದಿ ದುಷ್ಕರ್ಮಿಗಳು ಕಾರಿನ ಚಕ್ರಕ್ಕೆ ಗುಂಡಿಕ್ಕಿ ನಿಲ್ಲಿಸಿ ಅಟ್ಟಹಾಸ ಗೈದಿದ್ದಾರೆ.
ದುಷ್ಕರ್ಮಿಗಳು ಕೈಯಲ್ಲಿ ಗನ್ ಹಿಡಿದು ಬೆದರಿಸಿ ನಾಲ್ವರು ಮಹಿಳೆಯರ ಮೇಲೆ ಗ್ಯಾಂಗ್ ರೇಪ್ ನಡೆಸಿ
ದ್ದಾರೆ. ಈ ವೇಳೆ ತಡೆಯಲು ಮುಂದಾದ ಪುರುಷನನ್ನು ಗುಂಡಿಟ್ಟು ಬರ್ಬರವಾಗಿ ಹತ್ಯೆಗೈದಿದ್ದಾರೆ. ವ್ಯಕ್ತಿ ಸಾವನ್ನಪ್ಪು ತ್ತಿದ್ದಂತೆ 14 ಸಾವಿರ ರೂಪಾಯಿ ಹಣ ಮತ್ತು ಚಿನ್ನಾಭರಣಗಳೊಂದಿಗೆ ಸ್ಥಳದಿಂದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ನೂತನ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬಂದ ಬಳಿಕ ನಡೆದ ಈ ದುಷ್ಕರ್ಮಿಗಳ ಅಟ್ಟಹಾಸ ಕಾನೂನು ಸುವ್ಯವಸ್ಥೆಗೆ ಸವಾಲಾಗಿ ಪರಿಣಮಿಸಿದೆ.
ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತಂಡಗಳನ್ನು ರಚಿಸಿ ದುಷ್ಕರ್ಮಿಗಳಿಗಾಗಿ ವ್ಯಾಪಕ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸಂತ್ರಸ್ಥ ಮಹಿಳೆಯರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ.
ಕಳೆದ ವರ್ಷ ದೆಹಲಿ -ಕಾನ್ಪುರ ಹೆದ್ದಾರಿಯ ದೋಸ್ತ್ಪುರ್ ಎಂಬಲ್ಲಿ ಇದೇ ರೀತಿಯಲ್ಲಿ ಕಾರು ಅಡ್ಡಗಟ್ಟಿ ತಾಯಿ ಮಗಳ ಮೇಲೆ ದುಷ್ಕರ್ಮಿಗಳು ಗ್ಯಾಂಗ್ ರೇಪ್ ನಡೆಸಿದ ಪ್ರಕರಣ ದೇಶವನ್ನೇ ಬೆಚ್ಚಿ ಬೀಳಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ