ಮಾರಾಮಾರಿ ಆಯ್ತು, ದೆಹಲಿ ಮತ್ತೊಂದು ಕೋರ್ಟ್ ನಲ್ಲಿ ವಕೀಲರಿಂದ ಪೊಲೀಸ್ ಮೇಲೆ ಹಲ್ಲೆ
Team Udayavani, Nov 4, 2019, 5:57 PM IST
ನವದೆಹಲಿ: ದೆಹಲಿಯ ತೀಸ್ ಹಜಾರಿ ಕೋರ್ಟ್ ಆವರಣದಲ್ಲಿ ಪೊಲೀಸರು, ವಕೀಲರ ನಡುವೆ ಘರ್ಷಣೆ ನಡೆದ ಎರಡು ದಿನದ ನಂತರ ಸೋಮವಾರ ದೆಹಲಿ ಸಾಕೇತ್ ಕೋರ್ಟ್ ಆವರಣದ ಹೊರಗೆ ವಕೀಲರ ಗುಂಪೊಂದು ಕರ್ತವ್ಯ ನಿರತ ಪೊಲೀಸ್ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಈ ಘಟನೆ ನಡೆಯುತ್ತಿದ್ದಾಗ ಹೊರ ಭಾಗದಲ್ಲಿ ನಿಂತಿದ್ದವರು ತಮ್ಮ ಮೊಬೈಲ್ ಫೋನ್ ಗಳಲ್ಲಿ ಚಿತ್ರೀಕರಣ ಮಾಡಿದ್ದರು. ಆ ವೀಡಿಯೋ ಇದೀಗ ಎಲ್ಲೆಡೆ ಹರಿದಾಡುತ್ತಿದೆ. ಬೈಕ್ ನಲ್ಲಿ ಕುಳಿತಿದ್ದ ಪೊಲೀಸ್ ಒಬ್ಬರನ್ನು ಆರು ಮಂದಿ ವಕೀಲರು ಸುತ್ತುವರಿದಿದ್ದರು. ಈ ವೇಳೆ ವಕೀಲರು ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದರು. ಹೇಗೋ ಬೈಕ್ ಅನ್ನು ತಿರುಗಿಸಿಕೊಂಡು ಪೊಲೀಸ್ ಹೊರಟಾಗ ವಕೀಲರೊಬ್ಬರು ಹೆಲ್ಮೆಟ್ ಅನ್ನು ಬೈಕ್ ನತ್ತ ಎಸೆದಿರುವುದು ವೀಡಿಯೋದಲ್ಲಿ ದಾಖಲಾಗಿದೆ ಎಂದು ವರದಿ ವಿವರಿಸಿದೆ.
ಇತ್ತೀಚೆಗಷ್ಟೇ ದೆಹಲಿಯ ತೀಸ್ ಹಜಾರಿ ಕೋರ್ಟ್ ಸಂಕೀರ್ಣದಲ್ಲಿ ವಕೀಲರು ಮತ್ತು ಪೊಲೀಸರ ನಡುವೆ ಮಾರಾಮಾರಿ ನಡೆದಿದ್ದು, 28 ಮಂದಿ ಗಾಯಗೊಂಡಿದ್ದರು. 20 ವಾಹನಗಳನ್ನು ಜಖಂಗೊಳಿಸಲಾಗಿತ್ತು. ಕೆಲವು ವಾಹನಕ್ಕೆ ಬೆಂಕಿ ಹಚ್ಚಿದ್ದ ಘಟನೆ ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ