ತರಕಾರಿ, ಬೇಳೆ-ಕಾಳುಗಳಿಗೆ ಈ ತಿಂಗಳು ಹೆಚ್ಚು ವೆಚ್ಚ :ಸಮೀಕ್ಷೆಯೊಂದರಲ್ಲಿ ದೇಶವಾಸಿಗಳ ಆತಂಕ
Team Udayavani, Apr 15, 2022, 6:30 AM IST
ನವದೆಹಲಿ: “ತರಕಾರಿ, ಬೇಳೆ-ಕಾಳುಗಳಿಗೆ ಮಾರ್ಚ್ನಲ್ಲಿ ನೀಡಿದ್ದಕ್ಕಿಂತ ಹೆಚ್ಚಿನ ಮೊತ್ತವನ್ನು ಏಪ್ರಿಲ್ನಲ್ಲಿ ಕೊಡುತ್ತಿದ್ದೇವೆ’ ಹೀಗೆಂದು ದೇಶವಾಸಿಗಳು ಅಭಿಪ್ರಾಯಪಟ್ಟಿದ್ದಾರೆ.
ಅಗತ್ಯ ವಸ್ತುಗಳ ಬೆಲೆ ಏರಿಕೆ ಬಗ್ಗೆ “ಲೋಕಲ್ ಸರ್ಕಲ್’ ಎಂಬ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ಈ ಅಂಶ ವ್ಯಕ್ತವಾಗಿದೆ. ದೇಶದ 311 ಜಿಲ್ಲೆಗಳಲ್ಲಿನ 11,800 ಮಂದಿಯನ್ನು ಸಂಪರ್ಕಿಸಿದ ಸಂದರ್ಭದಲ್ಲಿ ಶೇ.37 ಮಂದಿ ಮಾರ್ಚ್ಗಿಂತ ಹಾಲಿ ತಿಂಗಳಲ್ಲಿಯೇ ಅಗತ್ಯ ವಸ್ತುಗಳಿಗೆ ಹೆಚ್ಚಿನ ಮೊತ್ತ ವೆಚ್ಚ ಮಾಡುವಂತಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇದೇ ಸಂಸ್ಥೆ ದೇಶದ 359 ಜಿಲ್ಲೆಗಳ 36 ಸಾವಿರ ಮಂದಿಯನ್ನು ಉಲ್ಲೇಖೀಸಿ ನಡೆದ ಮತ್ತೂಂದು ಸಮೀಕ್ಷೆಯಲ್ಲಿ ಶೇ.24ರಷ್ಟು ಮಂದಿಯ ಮನೆಗಳಲ್ಲಿ ಬೆಲೆ ಏರಿಕೆಯ ಕಾರಣದಿಂದ ಅಡುಗೆ ಎಣ್ಣೆಯ ಬಳಕೆಯನ್ನೇ ಗಣನೀಯ ಪ್ರಮಾಣದಲ್ಲಿ ತಗ್ಗಿಸಿದ್ದೇವೆ ಎಂದಿದ್ದಾರೆ. ಶೇ.29 ಮಂದಿ ಅಗ್ಗದ ದರದಲ್ಲಿ ಸಿಗುವ ಅಡುಗೆ ಎಣ್ಣೆಯನ್ನು ಬಳಕೆ ಮಾಡಿಕೊಳ್ಳುತ್ತಿರುವುದಾಗಿ ಸಮೀಕ್ಷೆಯ ವೇಳೆ ತಿಳಿಸಿದ್ದಾರೆ.
ಕೆಲ ದಿನಗಳ ಹಿಂದೆ ಪ್ರಕಟಗೊಂಡಿರುವ ಗ್ರಾಹಕ ಆಧಾರಿತ ಹಣದುಬ್ಬರ ಮಾರ್ಚ್ನಲ್ಲಿ ಶೇ.7.68 ಆಗಿತ್ತು. ಹದಿನೇಳು ತಿಂಗಳುಗಳಿಗೆ ಹೋಲಿಕೆ ಮಾಡಿದರೆ ಅದು ಗರಿಷ್ಠ ಪ್ರಮಾಣದ್ದಾಗಿದೆ. ಆಹಾರ ಹಣದುಬ್ಬರ ಮಾರ್ಚ್ನಲ್ಲಿ ಶೇ.7.68 ಆಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ