ತಾಯಿ ಮಡಿಲಲ್ಲಿದ್ದ ಮಗುವನ್ನು ಹೊತ್ತೊಯ್ದು ತಿಂದ ನರಭಕ್ಷಕ ಚಿರತೆ!
Team Udayavani, Jan 16, 2019, 1:18 PM IST
ಕೋಲ್ಕತಾ: ಚಹಾ ತೋಟದಲ್ಲಿ ಕೆಲಸ ಮಾಡುತ್ತಿದ್ದ ತಾಯಿಯ ಮಡಿಲಲ್ಲಿದ್ದ ಮೂರು ವರ್ಷದ ಹೆಣ್ಣು ಮಗುವನ್ನು ನರಭಕ್ಷಕ ಚಿರತೆ ಹೊತ್ತೊಯ್ದು ಕೊಂದು ಹಾಕಿರುವ ಘಟನೆ ಪಶ್ಚಿಮಬಂಗಾಳದ ಅಲಿಪುರ್ ದೌರ್ ಜಿಲ್ಲೆಯಲ್ಲಿ ನಡೆದಿದೆ. ಕಳೆದ ಡಿಸೆಂಬರ್ 12ರಿಂದ ಇದುವರೆಗೆ ಈ ನರಭಕ್ಷಕ ಚಿರತೆ ದಾಳಿಗೆ ಮೂರು ಮಕ್ಕಳು ಬಲಿಯಾದಂತಾಗಿದೆ.
ಚಹಾ ತೋಟದ ತಂತಿ ಬೇಲಿಯಿಂದ ನುಸುಳಿ ಬಂದಿದ್ದ ಚಿರತೆ ತಾಯಿ ತೊಡೆಯ ಮೇಲೆ ಕುಳಿತಿದ್ದ ಪ್ರಣೀತಾ ಓರಾವೊನ್ (3ವರ್ಷ)ಳ ಮೇಲೆ ದಾಳಿ ನಡೆಸಿ ಹೊತ್ತೊಯ್ದಿತ್ತು. ಬುಧವಾರ ಬೆಳಗ್ಗೆ ಮಗುವಿನ ಶವ ಮನೆಯಿಂದ ಸುಮಾರು ಮೂರು ಕಿಲೋ ಮೀಟರ್ ದೂರದಲ್ಲಿ ದೊರಕಿತ್ತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಮಗುವಿನ ತಾಯಿ ಪೂಜಾ ಮಗುವಿನ ರಕ್ಷಣೆಗಾಗಿ ಕೂಗಾಡಿದ್ದರು ಕೂಡಾ ಚಿರತೆ ಅಷ್ಟರಲ್ಲಿ ಮಗುವನ್ನು ಹೊತ್ತೊಯ್ದಿತ್ತು. ಮಗುವಿನ ತಂದೆ ಕೆಲಸ ಹುಡುಕಿಕೊಂಡು ಕೇರಳಕ್ಕೆ ಹೋಗಿದ್ದರು.
ಚಿರತೆ ಮಗುವಿನ ಕೈ, ಕಾಲು, ತಲೆ ಭಾಗವನ್ನು ತಿಂದು ಹಾಕಿರುವುದಾಗಿ ಹೆಸರು ಹೇಳಲು ಇಚ್ಚಿಸದ ಅರಣ್ಯಾಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆಯಿಂದ ಚಹಾ ಎಸ್ಟೇಟ್ ಸುತ್ತಮುತ್ತ ಇದ್ದ ನೂರಾರು ಸ್ಥಳೀಯರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಮಗುವಿನ ಕುಟುಂಬಕ್ಕೆ ಉದ್ಯೋಗದ ಭರವಸೆಯನ್ನು ನೀಡಿದ ಮೇಲೆ ಶವವನ್ನು ತೆಗೆಯಲು ಅವಕಾಶ ಮಾಡಿಕೊಟ್ಟಿದ್ದರು ಎಂದು ವರದಿ ತಿಳಿಸಿದೆ.
ಡಿಸೆಂಬರ್ ತಿಂಗಳಿನಲ್ಲಿ 6 ಮತ್ತು 12 ವರ್ಷದ ಬಾಲಕನನ್ನು ಚಿರತೆ ರಾಮ್ ಜೊಹ್ರಾ ಮತ್ತು ಅಲಿಪುರ್ ದೌರ್ ದಲ್ಲಿ ಕೊಂದು ಹಾಕಿತ್ತು ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?