ಮಧ್ಯಪ್ರದೇಶ: ವಸತಿ ಗೃಹಕ್ಕೆ ಚಿರತೆ ದಾಳಿ ; ಐವರಿಗೆ ಗಾಯ
ಚಿರತೆಯನ್ನು ಹಿಡಿಯುವ ಕಾರ್ಯಾಚರಣೆಯ ದೃಶ್ಯಗಳನ್ನು ಜನರು ವೀಕ್ಷಿಸುವಂತೆ ಪ್ರದರ್ಶನವನ್ನು ಮಾಡಲಾಗಿದೆ
Team Udayavani, Mar 12, 2021, 2:07 PM IST
Representative Image
ಮಧ್ಯಪ್ರದೇಶ: ಚಿರತೆಯೊಂದು ವಸತಿಗೃಹಕ್ಕೆ ನುಗ್ಗಿ ಒಂದೇ ಕುಟುಂಬದ ಮೂವರನ್ನು ಒಳಗೊಂಡಂತೆ ಐದು ಜನರ ಮೇಲೆ ಭೀಕರವಾಗಿ ದಾಳಿ ನಡೆಸಿದ ಘಟನೆ ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದಿದ್ದು, ರಕ್ಷಣೆಗೆಂದು ತೆರಳಿದ್ದ ಪೊಲೀಸರನ್ನೂ ಗಾಯಗೊಳಿಸಿದೆ.
ಈ ಕುರಿತಾದ ವಿಡೀಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದ್ದು, ಪೊಲೀಸ್ ಅಧಿಕಾರಿಯನ್ನು ಒಳಗೊಂಡಂತೆ ಐವರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.
ಇಲ್ಲಿನ ಖಾಸಗಿ ವಸತಿಗೃಹದ ಒಳಗೆ ಬಂದ ಚಿರತೆ ತಕ್ಷಣವೇ ಅಲ್ಲಿದ್ದ ಜನರ ಮೇಲೆ ದಾಳಿ ಮಾಡಿದೆ. ಈ ಸಮಯದಲ್ಲಿ ಅಸಹಾಯಕ ಜನರನ್ನು ರಕ್ಷಣೆ ಮಾಡಲು ಮುಂದಾದ ಪೊಲೀಸರು ಚಿರತೆಯ ಗಮನವನ್ನು ಬೇರೆಡೆಗೆ ಸೆಳೆಯಲು ಯತ್ನಿಸಿದಾಗ ಪೊಲೀಸರ ಪ್ರಯತ್ನ ವಿಫಲವಾಗಿ ಚಿರತೆ ಪೊಲೀಸರ ಮೇಲೆ ದಾಳಿ ನಡೆಸಿದೆ ಎನ್ನಲಾಗಿದೆ.
ಇದನ್ನೂ ಓದಿ:ಕಾರ್ಯತಂತ್ರದ ಸಹಯೋಗವನ್ನು 5 ವರ್ಷಗಳ ತನಕ ವಿಸ್ತರಿಸಿಕೊಂಡ ನ್ಯೂಮಾಂಟ್, ಇನ್ಫೋಸಿಸ್ ..!
ಈ ನಡುವೆ ಅರಣ್ಯ ಇಲಾಖೆ ಅಧಿಕಾರಿಗಳನ್ನು ಒಳಗೊಂಡಂತೆ ಸಿಬಂದಿ ವರ್ಗ ಹಾಗೂ ಟೈಗರ್ ಫೋರ್ಸ್ ಮತ್ತು ವೃಗಾಲಯದ ಸಿಬಂದಿಗಳೂ ಕೂಡಾ ಪೊಲೀಸರ ಜೊತೆ ಕೈ ಜೋಡಿಸಿದ್ದು, ಅರವಳಿಕೆ ಮದ್ದು ಹಾಗೂ ಬಲೆಗಳನ್ನು ಬಳಸಿ ಸತತ ಐದು ಘಂಟೆಗಳ ಕಾರ್ಯಾಚರಣೆಯ ಬಳಿಕ ಚಿರತೆಯನ್ನು ಸೆರೆ ಹಿಡಿದಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Indore: #leopard enetred in residential area, attacked on locals, three injured pic.twitter.com/ReZV8cl4mz
— Afroz Alam?☠️ (@AfrozJournalist) March 11, 2021
ಘಟನೆಯ ಬಳಿಕ ಸುತ್ತಮುತ್ತಲಿನ ಪ್ರದೇಶದ ಜನರಲ್ಲಿ ಭಯದ ವಾತಾವರಣ ಮನೆಮಾಡಿದ್ದು, ಈ ಹಿನ್ನೆಲೆಯಲ್ಲಿ ಚಿರತೆಯನ್ನು ಹಿಡಿಯುವ ಕಾರ್ಯಾಚರಣೆಯ ದೃಶ್ಯಗಳನ್ನು ಜನರು ವೀಕ್ಷಿಸುವಂತೆ ಪ್ರದರ್ಶನವನ್ನು ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ