ಬಿಹಾರ, ಜಾರ್ಖಂಡ್, ಉತ್ತರಪ್ರದೇಶ; ಒಂದೇ ದಿನ ಸಿಡಿಲು ಬಡಿದು 70ಕ್ಕೂ ಅಧಿಕ ಸಾವು
Team Udayavani, Jul 25, 2019, 10:52 AM IST
ಪಾಟ್ನಾ: ಬಿಹಾರ, ಜಾರ್ಖಂಡ್ ಹಾಗೂ ಉತ್ತರಪ್ರದೇಶದಲ್ಲಿ ಕಳೆದ 24ಗಂಟೆಗಳಲ್ಲಿ ಸಿಡಿಲು ಬಡಿದು 73 ಮಂದಿ ಬಲಿಯಾಗಿದ್ದು, ಹಲವಾರು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
ಸಿಡಿಲು ಬಡಿದು ಬಿಹಾರದಲ್ಲಿ 39 ಮಂದಿ, ಜಾರ್ಖಂಡ್ ನಲ್ಲಿ 28 ಹಾಗೂ ಉತ್ತರಪ್ರದೇಶದಲ್ಲಿ ಆರು ಮಂದಿ ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ.
ಜಾರ್ಖಂಡ್ ನ ಜಾಮಾತ್ರಾ ಮತ್ತು ಲಾಟೇಹಾರ್ ನಲ್ಲಿ ತಲಾ ಆರು ಮಂದಿ, ಚಾತ್ರಾದಲ್ಲಿ ನಾಲ್ಕು, ಗ್ರಾವಾದಲ್ಲಿ ಮೂರು, ಡುಮ್ಕಾದಲ್ಲಿ ಮೂರು ಮಂದಿ, ಗಿರಿಧಿಹ್ ನಲ್ಲಿ ಇಬ್ಬರು, ಪಾಕುರ್ ನಲ್ಲಿ ಇಬ್ಬರು, ಧನ್ಬಾದ್ ನಲ್ಲಿ ಒಬ್ಬರು, ದಿಯೋಗಢ್ ನಲ್ಲಿ ಒಬ್ಬರು ಸಾವನ್ನಪ್ಪಿರುವುದಾಗಿ ವರದಿ ವಿವರಿಸಿದೆ.
ಅಧಿಕಾರಿಗಳ ಮಾಹಿತಿ ಪ್ರಕಾರ, ಸಿಡಿಲಾಘಾತಕ್ಕೆ ಬಲಿಯಾದವರ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇರುವುದಾಗಿ ತಿಳಿಸಿದ್ದಾರೆ. ಸಿಡಿಲು ಬಡಿದು ಸಾವನ್ನಪ್ಪಿದ ಕುಟುಂಬಸ್ಥರಿಗೆ ತಲಾ ನಾಲ್ಕು ಲಕ್ಷ ರೂಪಾಯಿ ಪರಿಹಾರವನ್ನು ಜಾರ್ಖಂಡ್ ಮತ್ತು ಉತ್ತರಪ್ರದೇಶ ಸರ್ಕಾರ ಘೋಷಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು