ಬಿಹಾರ ಮತ್ತು ಉತ್ತರಪ್ರದೇಶದಲ್ಲಿ ಸಿಡಿಲಿನ ಹೊಡೆತ: ಒಂದೇ ದಿನ 107 ಜನರು ಬಲಿ
Team Udayavani, Jun 26, 2020, 8:09 AM IST
ಬಿಹಾರ: ಬಿಹಾರದಲ್ಲಿ ಗುರುವಾರ ಸಿಡಿಲಿನ ಹೊಡೆತಕ್ಕೆ ಸಿಲುಕಿ 83 ಜನರು ಸಾವನ್ನಪ್ಪಿದ್ದು, ಉತ್ತರಪ್ರದೇಶದಲ್ಲಿ 24 ಜನರು ಮೃತಪಟ್ಟಿದ್ದಾರೆ. ಹಾಗಾಗಿ ಒಂದೇ ದಿನ 107 ಜನರು ಬಲಿಯಾಗಿದ್ದು ಪ್ರಧಾನಿ ಮೋದಿ ಘಟನೆಯ ಕುರಿತು ದಿಗ್ಬ್ರಮೆ ವ್ಯಕ್ತಪಡಿಸಿದ್ದಾರೆ.
ಉತ್ತರ ಭಾರತದ ರಾಜ್ಯಗಳಲ್ಲಿ ಮುಂಗಾರು ಬಲಗೊಂಡಿದ್ದು, ಭಾರೀ ಮಳೆಯಾಗುತ್ತಿದೆ. .ಗುರುವಾರ ಸಂಜೆ, ಬಿಹಾರ ಸರ್ಕಾರವು ಸಿಡಿಲಿನ ಹೊಡೆತಕ್ಕೆ ಸಿಲುಕಿ 83 ಜನರು ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದೆ. ಗೋಪಾಲಗಂಜ್ ಜಿಲ್ಲೆಯಿಂದ (13) ಹೆಚ್ಚಿನ ಸಾವುಗಳು ಸಂಭವಿಸಿವೆ. ಮೃತಪಟ್ಟವರ ಕುಟುಂಬಗಳಿಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತಲಾ 4 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಉತ್ತರ ಪ್ರದೇಶದಲ್ಲೂ ಕೂಡ ಸಿಡಿಲು ಬಡಿದು 24 ಜನರು ಸಾವನ್ನಪ್ಪಿದ್ದಾರೆ ಎಂದು ಅಲ್ಲಿನ ಸರ್ಕಾರ ವರದಿ ಮಾಡಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕೂಡ ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂ.ಪರಿಹಾರ ಘೋಷಿಸಿ ಸಂತಾಪ ಸೂಚಿಸಿದ್ದಾರೆ.
बिहार और उत्तर प्रदेश में कई स्थानों पर भारी बारिश और बिजली गिरने के कारण हुए जान-माल के नुक़सान के बारे में जानकर मुझे अत्यंत दुख पहुंचा है। इस दुर्घटना में कई लोगों को अपनी जान गंवानी पड़ी है।मैं मृतकों के परिजनों के प्रति अपनी हार्दिक संवेदनाएं व्यक्त करता हूँ।
— Rajnath Singh (@rajnathsingh) June 25, 2020
ಬಿಹಾರದಲ್ಲಿ 32 ಮತ್ತು ಉತ್ತರ ಪ್ರದೇಶದಲ್ಲಿ 12 ಜನರು ಸಿಡಿಲಿನ ಹೊಡತಕ್ಕೆ ಸಿಲುಕಿ ಗಂಭೀರ ಗಾಯಗೊಂಡಿದ್ದಾರೆ. ಮಾತ್ರವಲ್ಲದೆ ಹಲವಾರು ಆಸ್ತಿಪಾಸ್ಥಿಗಳು ಹಾನಿಗೊಮಡಿದ್ದು ಬಿಹಾರದಲ್ಲಿ 40 ಕ್ಕ ಹೆಚ್ಚು ಪ್ರಾಣಿಗಳು ಅಸುನೀಗಿವೆ.
ಘಟನೆಯ ಕುರಿತು ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದು, ಬಿಹಾರ ಮತ್ತು ಉತ್ತರ ಪ್ರದೇಶದ ರಾಜ್ಯ ಸರ್ಕಾರಗಳು ಪರಿಸ್ಥಿತಿಗೆ ಸೂಕ್ತವಾಗಿ ಸ್ಪಂದಿಸಲು ಕರೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು