ಭಾರತ-ಪಾಕ್ ನಂತೆ ನಾವು ಒಂದು ಪಂದ್ಯ ಆಡಿದ್ದೇವೆ…’, ಠಾಕ್ರೆ ಲೇವಡಿ ಮಾಡಿದ ಏಕನಾಥ್ ಶಿಂಧೆ
Team Udayavani, Oct 24, 2022, 4:19 PM IST
ಮುಂಬೈ: ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಬಣವು ಥಾಣೆಯಲ್ಲಿ ‘ದೀಪಾವಳಿ ಪಹತ್’ ಕಾರ್ಯಕ್ರಮವನ್ನು ಆಯೋಜಿಸಿದೆ. ಇಂದು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮುಖ್ಯಮಂತ್ರಿ ಏಕನಾಥ್ ಶಿಂಧೆ, ‘ಭಾರತ-ಪಾಕಿಸ್ತಾನದಂತೆಯೇ ನಾವು ಕೂಡ ಮೂರೂವರೆ ತಿಂಗಳ ಹಿಂದೆ ಪಂದ್ಯವನ್ನು ಆಡಿದ್ದೇವೆ. ಅದರಲ್ಲಿ ನಾವು ಗೆದ್ದಿದ್ದೇವೆ ಎಂದರು.
ದೀಪಾವಳಿಯ ದಿನದಂದು ಭಾರತವು ಪಾಕಿಸ್ತಾನದ ವಿರುದ್ಧ ಗೆದ್ದ ಪಂದ್ಯವನ್ನು ನಾವು ಇಂದು ಆಚರಿಸುತ್ತಿದ್ದೇವೆ. ನಿನ್ನೆ ಮ್ಯಾಚ್ ಗೆದ್ದಂತೆ ನಮ್ಮ ‘ಬಾಳಾಸಾಹೇಬರ ಶಿವಸೇನೆ’ ಮೂರೂವರೆ ತಿಂಗಳ ಹಿಂದೆ ಇದೇ ಮ್ಯಾಚ್ ಆಡಿ ಗೆದ್ದಿತ್ತು. ಆ ಪಂದ್ಯವನ್ನು ಮಹಾರಾಷ್ಟ್ರ ಮಾತ್ರವಲ್ಲದೇ ಇಡೀ ದೇಶ ನೋಡಿದೆ. ಜನರನ್ನು ಒಗ್ಗೂಡಿಸುವ ಸಣ್ಣ ಪ್ರಯತ್ನ ಮಾಡಿದ್ದೇವೆ. ಹಾಗಾಗಿ ನಾವು ಅಧಿಕಾರಕ್ಕೆ ಬಂದ ತಕ್ಷಣ ಮೊದಲು ನಮ್ಮ ಸಂಪ್ರದಾಯ, ಸಂಸ್ಕೃತಿ, ಹಬ್ಬ ಹರಿದಿನಗಳನ್ನು ಆಚರಿಸಲು ಅನುಮತಿ ನೀಡುತ್ತಿದ್ದೇವೆ ಎಂದರು.
ಇದನ್ನೂ ಓದಿ:ಕೊರಗಜ್ಜನ ಮಹಿಮೆಯಿಂದ ಜೀವ ಹೋಗುವ ಸ್ಥಿತಿಯಲ್ಲಿದ್ದ ಮಗು ಬದುಕಿ ಬಂತು; ಉಡುಪಿಯಲ್ಲೊಂದು ಪವಾಡ
ಸ್ಪಷ್ಟವಾಗಿ ಹೇಳುವುದಾದರೆ, ಅಭಿವೃದ್ಧಿಯ ಜೊತೆಗೆ ಈ ವಿಷಯಗಳು ಅವಶ್ಯಕ. ಮನುಷ್ಯನ ಮನಸ್ಸು ಖುಷಿಯಾಗಿದ್ದರೆ ಮುಂದೆ ಸಾಗಬಹುದು. ಈ ರಾಜ್ಯದಲ್ಲಿ ಈಗ ಪರಿವರ್ತನೆಯ ಪರ್ವ ಆರಂಭವಾಗಿದೆ. ಇಂದು ನಾನು ಹೋದಲ್ಲೆಲ್ಲಾ ನಮಗೆ ಉತ್ತಮ ಪ್ರತಿಕ್ರಿಯೆ ಸಿಗುತ್ತದೆ. ಈ ವಿಷಯಗಳು ನನಗೆ ತೃಪ್ತಿ ಮತ್ತು ಸಂತೋಷವನ್ನು ಉಂಟು ಮಾಡುತ್ತವೆ. ಇದರ ಫಲಿತಾಂಶ ಗ್ರಾಮ ಪಂಚಾಯಿತಿ ಚುನಾವಣೆಯಲ್ಲೂ ಕಂಡುಬಂದಿದೆ ಎಂದು ಮಹಾ ಸಿಎಂ ಶಿಂಧೆ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್