ಚಿನ್ನದ ಕೆಲವೇ ತುಂಡುಗಳಿಗಾಗಿ ಎಲ್ ಡಿ ಎಫ್ ಕೇರಳದ ಜನರಿಗೆ ಮೋಸ ಮಾಡಿದೆ : ನರೇಂದ್ರ ಮೋದಿ
Team Udayavani, Mar 30, 2021, 1:13 PM IST
ಪಾಲಿಕ್ಕಡ್ : ಕೇರಳ ರಾಜಕೀಯದಲ್ಲಿ ಎಲ್ ಡಿ ಎಫ್ ಹಾಗೂ ಯು ಡಿ ಎಫ್ ಸೌಹಾರ್ಧ ಒಪ್ಪಂದ ಮಾಡಿಕೊಂಡಿವೆ ಎನ್ನುವುದು ಹಲವಾರು ವರ್ಷಗಳಿಂದ ಕಾಪಾಡಿಕೊಂಡಿರುವ ಗೌಪ್ಯವಾದ ಗುಟ್ಟು , ಇದೇ ಮೊದಲ ಬಾರಿಗೆ ಕೇರಳದ ಮತದಾರರು ಏನಿದು ಮ್ಯಾಚ್ ಫಿಕ್ಸಿಂಗ್ ಎಂದು ಕೇಳುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಓದಿ : ಸಿಖ್ಖರ ಮೆರವಣಿಗೆಗೆ ಅನುಮತಿ ನಕಾರ, ಖಡ್ಗದಿಂದ ದಾಳಿ, ನಾಲ್ವರು ಪೊಲೀಸರಿಗೆ ಗಾಯ
ಕೇರಳದ ಪಾಲಿಕ್ಕಡ್ ನಲ್ಲಿ ಮೆಟ್ರೋ ಮ್ಯಾನ್ ಇ ಶ್ರೀಧರನ್ ಪರವಾಗಿ ಮತ ಪ್ರಚಾರ ಸಭೆಯಲ್ಲಿ ಶ್ರೀಧರನ್ ಅವರನ್ನು ಸನ್ಮಾನಿಸಿ ಮಾತನಾಡಿದ ಪ್ರಧಾನಿ, ಮೆಟ್ರೋಮ್ಯಾನ್ ಇ ಶ್ರೀಧರನ್ ಭಾರತವನ್ನು ಆಧುನೀಕರಣಗೊಳಿಸಲು ಹಾಗೂ ಸಂಪರ್ಕ ವ್ಯವಸ್ತೆಯನ್ನು ಸುಗಮಗೊಳಿಸಲು ಮಹತ್ತರ ಪಾತ್ರವನ್ನು ವಹಿಸಿದ್ದಾರೆ. ಸಮಾಜದ ಎಲ್ಲಾ ವಿಭಾಗದ ಜನರು ಅವರನ್ನು ಗೌರವಿಸುತ್ತಾರೆ. ಕೇರಳದ ಅಭಿವೃದ್ಧಿಗಾಗಿ ಅವರು ಬದ್ಧರಾಗಿದ್ದಾರೆ ಎಂದಿದ್ದಾರೆ.
ಇನ್ನು, ಕೆಲವೇ ಕೆಲವು ಬೆಳ್ಳಿ ತುಂಡುಗಳಿಗಾಗಿ ಜೂಡಸ್ ಯೇಸು ಕ್ರಿಸ್ತನನ್ನು ಮೋಸ ಮಾಡಿದ್ದನು. ಅದೇ ರೀತಿ ಚಿನ್ನದ ಕೆಲವೇ ತುಂಡುಗಳಿಗಾಗಿ ಎಲ್ ಡಿ ಎಫ್ ಕೇರಳದ ಜನರಿಗೆ ಮೋಸ ಮಾಡಿದೆ ಎಂದು ಪಿಣರಾಯಿ ವಿಜಯನ್ ಸರ್ಕಾರದ ವಿರುದ್ಧ ಸಿಡಿದಿದ್ದಲ್ಲದೇ, ಮುಂಬರುವ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿ, ಆಶೀರ್ವಾದ ಮಾಡಿ, ಕೇರಳದ ಈಗಿನ ಸ್ಥಿತಿಯಿಂದ ಭಿನ್ನವಾದ ಕನಸುಗಳನ್ನು ನಾನು ಹೊಂದಿದ್ದೇನೆ ಎಂದು ಹೇಳಿದ್ದಾರೆ.
ಓದಿ : ಕೋವಿಡ್ ಆತಂಕ : ಚಂಡಿಗಡದ 25 ಪ್ರದೇಶಗಳು ಕಂಟೈನ್ ಮೆಂಟ್ ಜ್ಹೋನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
MUST WATCH
ಹೊಸ ಸೇರ್ಪಡೆ
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ