ಆಯುರ್ವೇದ ಮತ್ತು ಯೋಗವನ್ನು ಒಂದು ಧರ್ಮಕ್ಕೆ ತಳುಕು ಹಾಕುವುದು ದುರದೃಷ್ಟಕರ: ರಾಷ್ಟ್ರಪತಿ
ಪ್ರತಿಯೊಂದು ಕುಟುಂಬವೂ ಆರೋಗ್ಯವಾಗಿದ್ದರೆ, ಬಳಿಕ ಪ್ರತಿ ಹಳ್ಳಿ ಮತ್ತು ಪ್ರತಿ ನಗರ ಆರೋಗ್ಯವಂತವಾಗಿರುತ್ತದೆ
Team Udayavani, May 28, 2022, 4:38 PM IST
ಭೋಪಾಲ್: ಆಯುರ್ವೇದ ಮತ್ತು ಯೋಗವನ್ನು ನಿರ್ದಿಷ್ಟ ಧರ್ಮ ಅಥವಾ ಸಮುದಾಯದ ಜತೆ ತಳುಕುಹಾಕುತ್ತಿರುವುದು ದುರದೃಷ್ಟಕರ ಸಂಗತಿಯಾಗಿದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶನಿವಾರ (ಮೇ 28) ತಿಳಿಸಿದ್ದಾರೆ.
ಇದನ್ನೂ ಓದಿ:ಆರ್ಯನ್ ಖಾನ್ ಗೆ ಕ್ಲೀನ್ ಚಿಟ್ : ಕಾರ್ಯ ವಿಧಾನದ ವಿಕೃತಿ ಎಂದ ಚಿದಂಬರಂ
ಆರೋಗ್ಯ ಭಾರತಿ ಆಯೋಜಿಸಿದ್ದ “ಒಂದು ರಾಷ್ಟ್ರ-ಒಂದು ಆರೋಗ್ಯ ವ್ಯವಸ್ಥೆ”ಯ ಆರೋಗ್ಯ ಮಂಥನ ಕಾರ್ಯಕ್ರಮವನ್ನು ಉದ್ಘಾಟಿಸಿ ರಾಷ್ಟ್ರಪತಿ ಕೋವಿಡ್ ಈ ಅಭಿಪ್ರಾಯವ್ಯಕ್ತಪಡಿಸಿರುವುದಾಗಿ ವರದಿ ಹೇಳಿದೆ.
ದೇಶದ ನಾಗರಿಕರನ್ನು ಆರೋಗ್ಯವಂತರನ್ನಾಗಿ ಮಾಡುವ ಸಮಗ್ರ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆರೋಗ್ಯ ಭಾರತಿ ಕೆಲಸವನ್ನು ರಾಷ್ಟ್ರಪತಿ ಕೋವಿಂದ್ ಈ ಸಂದರ್ಭದಲ್ಲಿ ಶ್ಲಾಘಿಸಿದರು. ಅಷ್ಟೇ ಅಲ್ಲ ಸಂಸ್ಥೆ ರಾಷ್ಟ್ರಮಟ್ಟದಲ್ಲಿಯೂ ತನ್ನ ಕಾರ್ಯಚಟುವಟಿಕೆಯನ್ನು ವಿಸ್ತರಿಸುತ್ತಿರುವುದು ಉತ್ತಮವಾದ ಕೆಲಸವಾಗಿದೆ ಎಂದು ಹೇಳಿದರು.
“ಯಾವಾಗ ಪ್ರತಿಯೊಬ್ಬರು ವೈಯಕ್ತಿಕಾಗಿ ಆರೋಗ್ಯವಾಗಿರುತ್ತಾರೋ, ಆಗ ಎಲ್ಲಾ ಕುಟುಂಬವೂ ಆರೋಗ್ಯವಂತವಾಗಿರುತ್ತದೆ. ಒಂದು ವೇಳೆ ಪ್ರತಿಯೊಂದು ಕುಟುಂಬವೂ ಆರೋಗ್ಯವಾಗಿದ್ದರೆ, ಬಳಿಕ ಪ್ರತಿ ಹಳ್ಳಿ ಮತ್ತು ಪ್ರತಿ ನಗರ ಆರೋಗ್ಯವಂತವಾಗಿರುತ್ತದೆ…ಇದರ ಪರಿಣಾಮ ಇಡೀ ದೇಶವು ಆರೋಗ್ಯವಂತವಾಗಿರುತ್ತದೆ ಎಂದು ರಾಷ್ಟ್ರಪತಿ ಕೋವಿಂದ್ ತಿಳಿಸಿದರು.
2017ರಲ್ಲಿ ರಾಷ್ಟ್ರೀಯ ಆರೋಗ್ಯ ನೀತಿಯನ್ನು ಘೋಷಿಸುವ ಮೂಲಕ ದೇಶದ ಪ್ರತಿಯೊಬ್ಬರಿಗೂ ಕೈಗೆಟಕುವ ದರದಲ್ಲಿ ಉತ್ತಮ ಆರೋಗ್ಯ ಸೇವೆ ಲಭ್ಯವಾಗಬೇಕೆಂಬುದು ಕೇಂದ್ರ ಸರ್ಕಾರದ ಗುರಿಯಾಗಿತ್ತು. ಎಲ್ಲರಿಗೂ ಉತ್ತಮ ದರ್ಜೆಯ ಆರೋಗ್ಯ ಸೇವೆಯನ್ನು ಒದಗಿಸುವುದು ಈ ಯೋಜನೆಯ ಉದ್ದೇಶವಾಗಿದೆ ಎಂದು ರಾಷ್ಟ್ರಪತಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ