ಅಮ್ರೇಲಿ : ಕೃಷಿ ಕಾರ್ಮಿಕನನ್ನು ಕೊಂದು ಹಾಕಿದ ನರಭಕ್ಷಕ ಸಿಂಹ ಸೆರೆ
Team Udayavani, Jul 24, 2022, 2:57 PM IST
ಸಾಂದರ್ಭಿಕ ಚಿತ್ರ ಮಾತ್ರ
ಅಮ್ರೇಲಿ : ಗುಜರಾತ್ನ ಅಮ್ರೇಲಿ ಜಿಲ್ಲೆಯಲ್ಲಿ ಶನಿವಾರ ಸಂಜೆ 18 ವರ್ಷದ ಕೃಷಿ ಕಾರ್ಮಿಕನನ್ನು ಸಿಂಹವೊಂದು ಕೊಂದು ಹಾಕಿದೆ ಎಂದು ಅರಣ್ಯ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ನರಭಕ್ಷಕ, ಸುಮಾರು ಎಂಟು ವರ್ಷ ವಯಸ್ಸಿನ ಏಷ್ಯಾಟಿಕ್ ಸಿಂಹವನ್ನು ವ್ಯಾಪಕ ಪ್ರಯತ್ನಗಳ ನಂತರ ಭಾನುವಾರ ನಸುಕಿನಲ್ಲಿ ಹಿಡಿಯಲಾಯಿತು ಮತ್ತು ರಕ್ಷಣಾ ಕೇಂದ್ರಕ್ಕೆ ಕೊಂಡೊಯ್ಯಲಾಯಿತು ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ರಾಜ್ದೀಪ್ಸಿಂಗ್ ಝಾಲಾ ಹೇಳಿದರು.
ಮಧ್ಯಪ್ರದೇಶ ಮೂಲದ ಭೈದೇಶ್ ಪಯರ್ ಅವರು ಕೆಲಸದಿಂದ ತುಳಸಿಶ್ಯಾಮ್ ವ್ಯಾಪ್ತಿಯ ಅರಣ್ಯ ಪ್ರದೇಶದ ನಾನಿಧಾರಿ ಗ್ರಾಮಕ್ಕೆ ಹಿಂತಿರುಗುತ್ತಿದ್ದಾಗ ಸಿಂಹ ದಾಳಿ ಮಾಡಿ ಎಳೆದೊಯ್ದಿದೆ. ಸ್ಥಳೀಯರು ವಿಷಯವನ್ನು ಅರಣ್ಯ ಇಲಾಖೆಗೆ ತಿಳಿಸಿದ್ದಾರೆ. ತಂಡವು ಧಾವಿಸಿ ಬಲಿಪಶುವಿನ ಅವಶೇಷಗಳನ್ನು ಪತ್ತೆ ಮಾಡಿದೆ. ಕೂಡಲೇ ಸಿಂಹವನ್ನು ಹಿಡಿಯಲು ಪ್ರಯತ್ನಿಸಲಾಯಿತು ಎಂದು ಅಧಿಕಾರಿ ಹೇಳಿದರು.
ಟ್ರ್ಯಾಂಕ್ವಿಲೈಸರ್ ಗನ್ ಬಳಸಿ ಸಿಂಹವನ್ನು ಸೆರೆಹಿಡಿದು ಧಾರಿ ಪ್ರದೇಶದಲ್ಲಿರುವ ರಕ್ಷಣಾ ಕೇಂದ್ರಕ್ಕೆ ಕೊಂಡೊಯ್ಯಲಾಯಿತು ಎಂದು ಅವರು ಹೇಳಿದರು.
ಏಷ್ಯಾಟಿಕ್ ಸಿಂಹಗಳು ಗಿರ್ ಅರಣ್ಯ ಸೇರಿದಂತೆ ಗುಜರಾತ್ನ ಸೌರಾಷ್ಟ್ರ ಪ್ರದೇಶದ ಭಾಗಗಳಲ್ಲಿ ಕಂಡುಬರುತ್ತವೆ.ಜೂನ್ 2020 ರ ಜನಗಣತಿಯ ಪ್ರಕಾರ, ಗಿರ್ ಅರಣ್ಯ ಪ್ರದೇಶದಲ್ಲಿ 674 ಸಿಂಹಗಳಿವೆ, ಇದು 2015 ರಲ್ಲಿ ದಾಖಲಾದ 523 ರ ಸಂಖ್ಯೆಗಿಂತ ಹೆಚ್ಚಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Mangaluru; ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿದ ಆರೋಪ: ಕೋರ್ಟ್ಗೆ ಮೊರೆ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ