ಉತ್ತರಪ್ರದೇಶ: ಲಿಕ್ಕರ್ ಮಾಫಿಯಾ ಗೂಂಡಾಗಳಿಂದ ಕಾನ್ಸ್ ಟೇಬಲ್ ಹತ್ಯೆ, ಎಸ್ ಐ ಗಂಭೀರ
ಮೃತ ಪೊಲೀಸ್ ಕಾನ್ಸ್ ಟೇಬಲ್ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ
Team Udayavani, Feb 10, 2021, 11:14 AM IST
ಲಕ್ನೋ: ಉತ್ತರಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ಕಾನ್ಸ್ ಟೇಬಲ್ ಅವರನ್ನು ಕೊಂದ ಪ್ರಮುಖ ಆರೋಪಿ ಎನ್ ಕೌಂಟರ್ ಗೆ ಬಲಿಯಾಗಿರುವ ಘಟನೆ ಬುಧವಾರ(ಫೆ.10, 2021) ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ಹತ್ತು ಸಾವಿರ ಕಾರುಗಳು ಬಂದರೆ ಆಕಾಶದಲ್ಲೇ ನಿಲ್ಲಿಸಬೇಕು!
ಲಿಕ್ಕರ್ ಮಾಫಿಯಾದಿಂದ ದಾಳಿ:
ಕಾಸ್ಗಂಜ್ ಗ್ರಾಮಕ್ಕೆ ಲಿಕ್ಕರ್ ಮಾಫಿಯಾ ಕಿಂಗ್ ಪಿನ್ ಗೆ ವಾರಂಟ್ ನೀಡಲು ತೆರಳುತ್ತಿದ್ದ ಪೊಲೀಸ್ ತಂಡದ ಮೇಲೆ ಏಕಾಏಕಿ ದಾಳಿ ನಡೆಸಿದ್ದು, ಘಟನೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಗಂಭೀರವಾಗಿ ಗಾಯಗೊಂಡಿದ್ದರು. ಕಾನ್ಸ್ ಟೇಬಲ್ ಅವರನ್ನು ಹೊಡೆದು ಕೊಂದು ಹಾಕಿರುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ಸೋನ್ಕಾರ್ ತಿಳಿಸಿದ್ದಾರೆ. ಪ್ರಮುಖ ಆರೋಪಿ ಪೊಲೀಸ್ ಎನ್ ಕೌಂಟರ್ ಗೆ ಬಲಿಯಾಗಿರುವುದಾಗಿ ತಿಳಿಸಿದ್ದಾರೆ. ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿದ್ದು, ಶೋಧ ಕಾರ್ಯ ನಡೆಯುತ್ತಿದೆ ಎಂದು ವರದಿ ಹೇಳಿದೆ.
ಕಾಸ್ಗಂಜ್ ನಲ್ಲಿ ನಡೆದಿದ್ದೇನು?
ಮಂಗಳವಾರ ರಾತ್ರಿ ಕಾಸ್ಗಂಜ್ ಪ್ರದೇಶದಲ್ಲಿರುವ ಅಕ್ರಮ ಮದ್ಯ ತಯಾರಿಕಾ ಘಟದ ಮೇಲೆ ದಾಳಿ ನಡೆಸಿ, ವಾರಂಟ್ ಜಾರಿಗೊಳಿಸಲು ಪೊಲೀಸ್ ತಂಡ ತೆರಳಿತ್ತು. ಈ ಸಂದರ್ಭದಲ್ಲಿ ಕಳ್ಳಭಟ್ಟಿ ತಯಾರಿಕೆಯ ಗೂಂಡಾಗಳು ಪೊಲೀಸ್ ಕಾನ್ಸ್ ಟೇಲಬ್, ಎಸ್ ಐ ಮೇಲೆ ಹಲ್ಲೆ ನಡೆಸಿದ್ದರು. ಎಸ್ ಐ ಗಂಭೀರವಾಗಿ ಗಾಯಗೊಂಡಿದ್ದರು.
ಮೃತ ಕಾನ್ಸ್ ಟೇಬಲ್ ದೇವೇಂದ್ರ ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಎಸ್ ಐ ಆಶೋಕ್ ಕುಮಾರ್ ಎಂದು ಗುರುತಿಸಲಾಗಿದೆ. ಪೊಲೀಸರನ್ನು ಮತ್ತು ಎಸ್ ಐ ಅವರ ಬಟ್ಟೆ ಕಳಚಿ ದೊಣ್ಣೆ ಮತ್ತು ಆಯುಧದಿಂದ ಥಳಿಸಿರುವುದಾಗಿ ವರದಿ ತಿಳಿಸಿದೆ.
ಘಟನೆಗೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಮೃತ ಪೊಲೀಸ್ ಕಾನ್ಸ್ ಟೇಬಲ್ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ಮತ್ತು ಕುಟುಂಬದ ಸದಸ್ಯರೊಬ್ಬರಿಗೆ ಉದ್ಯೋಗ ನೀಡುವುದಾಗಿ ಸಿಎಂ ಯೋಗಿ ಆದಿತ್ಯನಾಥ್ ಘೋಷಿಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಎಸ್ ಐಗೆ ಸೂಕ್ತ ಚಿಕಿತ್ಸೆ ನೀಡಲು ಸಿಎಂ ಅಧಿಕಾರಿಗಳಿಗೆ ನಿರ್ದೇಶನ ನೀಡಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ