ದೇಶದಲ್ಲಿ ಮದ್ಯ ಮಾರಾಟ ಇಳಿಕೆ
Team Udayavani, Dec 11, 2019, 3:59 PM IST
ಹೊಸದಿಲ್ಲಿ: ದಿಢೀರ್ ಗಗನಮುಖೀಯಾದ ಈರುಳ್ಳಿ ಸೇವನೆಯಿಂದ ಜನರು ದೂರ ಉಳಿದಿರುವ ಸಂಗತಿ ಎಲ್ಲರಿಗೂ ತಿಳಿದೆ ಇದೆ. ಆದರೆ ನಿರೀಕ್ಷೆಗೂ ಮೀರಿದ ಒಂದು ಬೆಳವಣಿಗೆ ನಡೆದಿದ್ದು, ದೇಶಾದ್ಯಾಂತ ಮದ್ಯ ಮಾರಾಟದಲ್ಲಿಯೂ ಇಳಿಕೆಯಾಗಿದೆ ಎಂದು ವರದಿಯೊಂದು ತಿಳಿಸಿದೆ.
ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ಬಿಡುಗಡೆ ಮಾಡಿರುವ ತ್ರೈಮಾಸಿಕ ವರದಿ ಮದ್ಯ ಮಾರಾಟ ಕುಸಿತಗೊಂಡಿರುವ ಬಗ್ಗೆ ಉಲ್ಲೇಖ ಮಾಡಿದೆ. ಕಳೆದ ವರ್ಷ ಆದಾಯ ಮಟ್ಟದಲ್ಲಿ ಶೇ.10.3ರಷ್ಟು ಏರಿಕೆಯಾಗುವ ಮೂಲಕ ಉತ್ತಮ ಆದಾಯಗಳಿಸಿದ್ದು, ಪ್ರಸಕ್ತ ಸಾಲಿನ ವಾರ್ಷಿಕ ಆದಾಯದಲ್ಲಿ ಕೇವಲ ಶೇ.2.2ರಷ್ಟು ಏರಿಕೆ ಅಷ್ಟೇ ದಾಖಲಾಗಿದೆ. ಈ ಮೂಲಕ 7,296 ಕೋಟಿ ರೂ. ಆದಾಯಗಳಿಸಿದೆ ಎಂದು ಹೇಳಿದೆ.
ಏರಿಕೆಯಾಗುತ್ತಿರುವ ದಿನಪಯೋಗಿ ವಸ್ತುಗಳಿಂದ ಜನರು ಕಂಗಾಲಾಗಿದ್ದು, ದುಬಾರಿ ಬೆಲೆಯಿಂದ ಮನೆಯ ನಿರ್ವಹಣೆ ಕಷ್ಟವಾಗುತ್ತಿದೆ. ಈ ಹಿನ್ನಲೆ ಜನರು ಹಣ ವ್ಯಯಿಸುವುದಕ್ಕೂ ಮುನ್ನ ನೂರಾರಿ ಬಾರಿ ಯೋಚಿಸುತ್ತಿದ್ದು, ತೀರಾ ಅಗತ್ಯ ವಸ್ತುಗಳನ್ನು ಮಾತ್ರ ಖರೀದಿ ಮಾಡುತ್ತಿದ್ದಾರೆ ವರದಿ ಹೇಳಿದೆ.
ಈ ತ್ರೈಮಾಸಿಕದಲ್ಲಿ ಕಂಪನಿಯ ಆದಾಯ ಪ್ರಮಾಣ ಕುಸಿತ ಕಂಡಿದ್ದು, ಮದ್ಯ ಕೊಳ್ಳುವವರ ಪ್ರಮಾಣ ಇಳಿಕೆಯಾಗಿದೆ. ಕೆಲವು ಮಾರುಕಟ್ಟೆಗಳಲ್ಲಿ ಜನರು ಹಣ ಖರ್ಚು ಮಾಡಲು ಹಿಂದೆ ಮುಂದೆ ನೋಡುತ್ತಿದ್ದಾರೆ. ಇದು ಪರೋಕ್ಷವಾಗಿ ಉತ್ಪಾದನಾ ವಲಯಕ್ಕೆ ಸವಾಲಾಗಿ ಪರಿಣಮಿಸಿದೆ. ಹೂಡಿಕೆಯ ಕೊರತೆಯಿಂದ ವ್ಯಾಪಾರ ವಹಿವಾಟು ಚಟುವಟಿಕೆ ಕುಂಠಿತವಾಗಿದೆ ಎಂದು ಕಂಪೆನಿಯ ಸಿಇಒ ಆನಂದ್ ಕೃಪಾಲು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ