ಮದ್ಯಕ್ಕಾಗಿ ನಿದ್ದೆಗೆಟ್ಟು ನಿಂತ ಜನ ; ಸಾಮಾಜಿಕ ಅಂತರದ ನಿಯಮ ಗಾಳಿಗೆ ತೂರಿದ ಪಾನಪ್ರಿಯರು
Team Udayavani, May 5, 2020, 5:30 AM IST
ಹೊಸದಿಲ್ಲಿ: ಕೋವಿಡ್ 19 ವೈರಸ್ ಲಾಕ್ಡೌನ್ನಿಂದಾಗಿ ಕಳೆದ 40 ದಿನಗಳಿಂದ ಮುಚ್ಚಿದ್ದ ಮದ್ಯದಂಗಡಿಗಳು ಸೋಮವಾರದಿಂದ ಮತ್ತೆ ತೆರೆದಿದ್ದು, ದೆಹಲಿ, ಆಂಧ್ರಪ್ರದೇಶ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಜನ ಮದ್ಯ ಕೊಳ್ಳಲು ಮುಗಿಬಿದ್ದಿದ್ದರು.
ಆಂಧ್ರಪ್ರದೇಶದ ಹಲವು ಪಟ್ಟಣಗಳಲ್ಲಿ ಭಾನುವಾರ ರಾತ್ರಿಯಿಂದಲೇ ಮದ್ಯದಂಗಡಿ ಬಳಿ ಠಿಕಾಣಿ ಹೂಡಿದ್ದ ಪಾನಪ್ರಿಯರು ಬೆಳಗ್ಗೆ ಅಂಗಡಿಗಳ ಬಾಗಿಲು ತೆರೆಯುವವರೆಗೂ ಸರತಿ ಸಾಲಿನಲ್ಲಿ ನಿಂತಿದ್ದರು. ಆದರೆ ಬಹುತೇಕ ರಾಜ್ಯಗಳ ವೈನ್ಶಾಪ್ಗಳ ಎದುರು ಸಾಮಾಜಿಕ ಅಂತರ ಗಾಳಿಗೆ ತೂರಲಾಗಿತ್ತು.
ಸರ್ಕಾರದ ಆದೇಶದನ್ವಯ ಮದ್ಯ ಕೊಳ್ಳಲು ಪರಸ್ಪರ ಎರಡು ಮೀಟರ್ ಅಂತರ ಕಾಯ್ದುಕೊಳ್ಳದೆ ಜನ ಹಿಂಡಿನಲ್ಲಿರುವ ಕುರಿಗಳಂತೆ ಪರಸ್ಪರ ಅಂಟಿಕೊಂಡು ನಿಂತಿದ್ದರು.
ಈ ನಡುವೆ ಕಂಟೈನ್ಮೆಂಟ್ ವಲಯಗಳಲ್ಲಿ ಮದ್ಯದಂಗಡಿಗಳು ತೆರೆದಿರಲಿಲ್ಲ. ಆಂಧ್ರಪ್ರದೇಶದ ತಿರುಪತಿಯಲ್ಲಿ ಭಾನುವಾರ ಮಧ್ಯರಾತ್ರಿಯಿಂದಲೇ ಮದ್ಯಕ್ಕಾಗಿ ಜನ ಸರತಿ ಸಾಲಿನಲ್ಲಿ ನಿಂತಿದ್ದರು.
ಅತ್ತ ಛತ್ತೀಸ್ಗಡದ ರಾಜ್ನಂದಗಾವ್ ಎಂಬ ಗ್ರಾಮದ ಮದ್ಯದಂಗಡಿ ಎದುರು ಬೆಳಗ್ಗೆ 7 ಗಂಟೆಯಿಂದಲೇ ಸಾವಿರಾರು ಮಂದಿ ಜಮಾಯಿಸಿದ್ದರು. ಇಲ್ಲೂ ಕೂಡ ಜನ ಸಾಮಾಜಿಕ ಅಂತರದ ನಿಯಮ ಪಾಲಿಸಲಿಲ್ಲ.
ದೇಶದ ಬಹುತೇಕ ನಗರಗಳಲ್ಲಿ ಪಾನ ಪ್ರಿಯರು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಮದ್ಯ ಖರೀದಿಗೆ ಮುಗಿಬಿದ್ದ ಬಗ್ಗೆ ಜಾಲತಾಣಗಳಲ್ಲಿ ಕಾವೇರಿದ ಚರ್ಚೆ ನಡೆಯಿತು.
ಕೆಲವರು ಹೀಗೆ ಒಂದೇ ಕಡೆ ನೂರಾರು, ಸಾವಿರಾರು ಜನ ಜಮಾಯಿಸುವುದರಿಂದ ಕೋವಿಡ್ ಸೋಂಕು ಹೆಚ್ಚು ಜನರಿಗೆ ಹರಡುತ್ತದೆ ಎಂದರೆ, ಮತ್ತೆ ಕೆಲವರು ಮದ್ಯದಂಗಡಿ ತೆರೆಯುವುದು ಅಗತ್ಯವಿತ್ತು ಎಂದು ವಾದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ