ಪ್ರಣಬ್‌ಗೆ ಅಡ್ವಾಣಿ ಶ್ಲಾಘನೆ


Team Udayavani, Jun 9, 2018, 6:00 AM IST

vv-28.jpg

ಹೊಸದಿಲ್ಲಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ಕೇಂದ್ರ ಕಚೇರಿಗೆ ಮಾಜಿ ರಾಷ್ಟ್ರಪತಿ ಭೇಟಿ ನೀಡಿದ್ದು, “ಸಂಘ ಶಿಕ್ಷಾ ವರ್ಗ’ದಲ್ಲಿ ಭಾರತದ ಏಕತೆಯ ಆದರ್ಶಗಳನ್ನು ತೆರೆದಿಟ್ಟಿದ್ದು, ಸಮಕಾಲೀನ ಚರಿತ್ರೆಯಲ್ಲಿ ಮಹತ್ವದ ಘಟ್ಟ ಎಂದು ಮಾಜಿ ಉಪ ಪ್ರಧಾನಿ ಹಾಗೂ ಬಿಜೆಪಿ ಧುರೀಣ ಎಲ್‌.ಕೆ. ಅಡ್ವಾಣಿ ಬಣ್ಣಿಸಿದ್ದಾರೆ. 

ಸಮಾರಂಭದಲ್ಲಿ ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಹಾಗೂ ಪ್ರಣಬ್‌ ಇಬ್ಬರ ಭಾಷಣಗಳು ಭಾರತದ ಅಖಂಡತೆ ಯನ್ನು ಪ್ರತಿನಿಧಿಸಿದವು. ಸೈದ್ಧಾಂತಿಕ ಭಿನ್ನಾಭಿಪ್ರಾಯ ಹಾಗೂ ಸೈದ್ಧಾಂತಿಕ ಒಗ್ಗೂಡುವಿಕೆಗೆ ಈ ಇಬ್ಬರ ಭಾಷಣಗಳು ಅತ್ಯುತ್ತಮ ಉದಾಹರಣೆ ಎಂದು ಅಡ್ವಾಣಿ ಹೇಳಿದ್ದಾರೆ. 

ಆರೆಸ್ಸೆಸ್‌ ಶ್ಲಾಘನೆ: ಸಂಘ ಶಿಕ್ಷಾ ವರ್ಗದ ಸಮಾರೋಪದಲ್ಲಿ ಪ್ರಣವ್‌ ಮುಖರ್ಜಿ, ಭಾರತದ 5,000 ವರ್ಷಗಳ ವೈಭವಯುತ ಇತಿಹಾಸ, ಸಂಸ್ಕೃತಿಯನ್ನು ಮೆಲುಕು ಹಾಕಿ , ಬಹುತ್ವ, ಏಕತೆಗಳು ಹೇಗೆ ಭಾರತದ ಭದ್ರ ಬುನಾದಿ ಎಂಬುದನ್ನು ತಿಳಿಸಿ ಹೇಳಿದರು ಎಂದು ಆರ್‌ಎಸ್‌ಎಸ್‌ ಶ್ಲಾಘಿಸಿದೆ. 

ತೊಗಾಡಿಯಾ ಅಸಮಾಧಾನ: ಪ್ರಣಬ್‌ ಅವರು ತಮ್ಮ ಭಾಷಣದಲ್ಲಿ ಗಾಂಧಿ, ನೆಹರೂರವರ ರಾಷ್ಟ್ರೀಯತೆಯನ್ನು ಹೇಳಿದರೇ ಹೊರತು, ಆರ್‌ಎಸ್‌ಎಸ್‌ ಸಂಸ್ಥಾಪಕರಾದ ಕೇಶವ್‌ ಬಾಲಿರಾಮ್‌ ಹೆಡಗೇವಾರ್‌ ಹಾಗೂ ವೀರ ಸಾವರ್ಕರ್‌ರ ರಾಷ್ಟ್ರೀಯತೆ ಬಗ್ಗೆ ಮಾತನಾಡಲಿಲ್ಲ ಎಂದು ವಿಷಾದಿಸಿದ್ದಾರೆ. 

ಕಾಂಗ್ರೆಸ್ಸಿಗರ ಮೆಚ್ಚುಗೆ
ಕಾಂಗ್ರೆಸ್‌ನ ಮೂಲ ಸಿದ್ಧಾಂತವೇನೆಂಬುದನ್ನು ಆರೆಸ್ಸೆಸ್‌ಗೆ ಪ್ರಣವ್‌ ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಹೇಳಿದ್ದರೆ, ಆರೆಸ್ಸೆಸ್‌ಗೆ ತಿಳಿ ಹೇಳಿದ ಮೊದಲ ಮಾಜಿ ಕಾಂಗ್ರೆಸ್ಸಿಗ ಪ್ರಣವ್‌ಮುಖರ್ಜಿ ಎಂದು ಕಾಂಗ್ರೆಸ್‌ ನಾಯಕ ಅಭಿ ಷೇಕ್‌ ಸಿಂಘ್ವಿ ಅಭಿಪ್ರಾಯ ಪಟ್ಟಿದ್ದಾರೆ. ಇದೇ ವೇಳೆ, ಮತ್ತೂಬ್ಬ ನಾಯಕ ಆನಂದ್‌ ಶರ್ಮಾ, ಪ್ರಣವ್‌ ನೀಡಿದ ಸಂದೇಶವನ್ನು ಆರ್‌ಎಸ್‌ಎಸ್‌ ಅಳವಡಿಸಿಕೊಂಡರೆ ಸಾಕು ಎಂದಿದ್ದಾರೆ.

ಶರ್ಮಿಷ್ಠಾ ಮುಖರ್ಜಿ ಗರಂ 
ನಾಗ್ಪುರದಲ್ಲಿ ಪ್ರಣವ್‌ ಅವರು ಆರೆಸ್ಸೆಸ್‌ನ ಟೋಪಿ ಧರಿಸಿ, ಆರೆಸ್ಸೆಸ್‌ ಮಾದರಿಯಲ್ಲೇ ನಮನ ಸಲ್ಲಿಸುತ್ತಿರುವಂತೆ ತಿರುಚಿದ ಫೋಟೋ ಟ್ವಿಟರ್‌ನಲ್ಲಿ ಹರಿದಾಡಿದ್ದು, ಈ ಫೋಟೋ ಬಗ್ಗೆ ಪ್ರಣವ್‌ ಪುತ್ರಿ ಶರ್ಮಿಷ್ಠಾ ಮುಖರ್ಜಿ ಕಿಡಿಕಾರಿದ್ದಾರೆ. “”ನೋಡಿ. ಇದೇ ಕಾರಣಕ್ಕಾಗಿಯೇ ನೀವು (ಪ್ರಣಬ್‌) ನಾಗ್ಪುರಕ್ಕೆ ಹೋಗುವುದು ಬೇಡವೆಂದು ಹೇಳಿದ್ದು” ಎಂದು ಪ್ರಣಬ್‌ಗ ಹೇಳಿದ್ದಾರೆ. ಜತೆಗೆ, ನಮ್ಮದು ಪ್ರಜಾಸತ್ತಾತ್ಮಕ, ವಾದ ಮಂಡಿಸಲು ಅವಕಾಶವುಳ್ಳ ಕುಟುಂಬವಾಗಿದ್ದು, ನನ್ನ ತಂದೆಯ ಎದುರೇ ಭಿನ್ನ ಅಭಿಪ್ರಾಯ ಮಂಡಿಸಲು ಹಿಂಜರಿಯುವುದಿಲ್ಲ ಎಂದೂ ಹೇಳಿದ್ದಾರೆ. ಈ ಫೋಟೋ ಬಗ್ಗೆ ಸ್ಪಷ್ಟನೆ ನೀಡಿರುವ ಆರೆಸ್ಸೆಸ್‌, “”ಈ ನಕಲಿ ಫೋಟೋಕ್ಕೂ, ಆರ್‌ಎಸ್‌ಎಸ್‌ಗೂ ಸಂಬಂಧವಿಲ್ಲ. ದುರುದ್ದೇಶ ಹೊಂದಿರುವ ಕೆಲ ರಾಜಕೀಯ ಶಕ್ತಿಗಳು ಇಂಥ ಫೋಟೋ ಹರಿಬಿಟ್ಟು ನಮ್ಮ ಘನತೆಗೆ ಕುಂದು ತರುವ ಪ್ರಯತ್ನ ಮಾಡಿವೆ” ಎಂದಿದೆ.

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.