ಸಾಲ ಆ್ಯಪ್ಗೆ ಶೀಘ್ರ ಅಂಕುಶ : ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಭರವಸೆ
Team Udayavani, Jun 9, 2022, 10:02 PM IST
ಮುಂಬಯಿ : ಸಾಲ ನೀಡುವ ಆ್ಯಪ್ ಗಳ ಮೂಲಕ ವಂಚನೆ ಎಸಗುವವರ ವಿರುದ್ಧ ಕಠಿನ ಕ್ರಮ ಕೈಗೊಳ್ಳಲಾಗುತ್ತದೆ. ಅದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಶೀಘ್ರವೇ ಹೊಸ ನಿಯಮಗಳನ್ನು ಜಾರಿ ಮಾಡಲಾಗುತ್ತದೆ ಎಂದು ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ.
ಆ್ಯಪ್ ಗಳ ಮೂಲಕ ಸಾಲ ನೀಡುವ ಜಾಲಕ್ಕೆ ಹಲವರು ಬಲಿಯಾಗುತ್ತಿರುವ ಅಂಶ ಆರ್ಬಿಐ ಗಮನಕ್ಕೆ ಬಂದಿದೆ. ಅವುಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ನಿಯಮಗಳನ್ನು ರೂಪಿಸಲಾಗುತ್ತಿದೆ. ಅದು ಅಂತಿಮಗೊಂಡ ಕೂಡಲೇ ಅನುಷ್ಠಾನಗೊಳಿಸಲಾಗುತ್ತದೆ ಎಂದು ಕೇಂದ್ರೀಯ ಪರೋಕ್ಷ ತೆರಿಗೆ ಮಂಡಳಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಹೇಳಿದ್ದಾರೆ.
ಸಾಲದ ಆ್ಯಪ್ ಗಳಿಂದ ಕಿರುಕುಳ ಉಂಟಾದರೆ ಕೂಡಲೇ ಸ್ಥಳೀಯ ಪೊಲೀಸ್ ಠಾಣೆಗೆ ತೆರಳಿ ದೂರು ಸಲ್ಲಿಸುವಂತೆ ಬುಧವಾರ ಆರ್ಬಿಐಯ ವಿತ್ತೀಯ ನೀತಿ ಪರಿಶೀಲನ ಸಭೆಯಲ್ಲಿ ಶಕ್ತಿಕಾಂತ ದಾಸ್ ಸಲಹೆ ನೀಡಿದ್ದರು. ಸಾಲ ಆ್ಯಪ್ ಗಳ ಮೂಲಕ ವಹಿವಾಟು ಮಾಡುವ ಮೊದಲು ಅವು ಆರ್ಬಿಐಯಿಂದ ಮಾನ್ಯತೆ ಪಡೆದಿವೆಯೇ ಎಂದು ಗ್ರಾಹಕರು ಪರಿಶೀಲಿಸಿ, ಖಚಿತಪಡಿಸಿಕೊಳ್ಳಬೇಕು ಎಂದು ದಾಸ್ ಸ್ಪಷ್ಟಪಡಿಸಿದ್ದರು.
ಇದನ್ನೂ ಓದಿ : ಶವಸಂಸ್ಕಾರ ಸ್ಮಶಾನ ಜಾಗ ಮಂಜೂರು: ಕೋರ್ಟ್ ಆದೇಶ ಪಾಲನೆಗೆ ವಿಫಲ; ಹೈಕೋರ್ಟ್ ತರಾಟೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ