ಕೇಂದ್ರ ಸರ್ಕಾರಿ ನೌಕರರಿಗೂ 15 ದಿನ ವರ್ಕ್ ಫ್ರಂ ಹೋಮ್ ಅವಕಾಶ: ಹೊಸ ಕರಡು ಸಿದ್ಧತೆ
ಆಡಳಿತ ಸುಧಾರಣೆ ಮತ್ತು ಸಾರ್ವಜನಿಕ ದೂರುಗಳ ಇಲಾಖೆ ಈ ಬಗ್ಗೆ ಕರಡು ಪ್ರಸ್ತಾಪವನ್ನಿಟ್ಟಿತ್ತು.
Team Udayavani, May 14, 2020, 7:50 PM IST
ನವದೆಹಲಿ:ದೇಶದಲ್ಲಿ ಕೋವಿಡ್ 19 ವೈರಸ್ ಹರಡುತ್ತಿರುವ ನಡುವೆಯೇ ಕೇಂದ್ರ ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರಿ ನೌಕರರು ಇನ್ಮುಂದೆ ವರ್ಷದಲ್ಲಿ 15 ದಿನ ಮನೆಯಿಂದಲೇ ಕಚೇರಿ ಕೆಲಸ ಮಾಡುವ(ವರ್ಕ್ ಫ್ರಂ ಹೋಮ್) ಸೌಲಭ್ಯದ ಕುರಿತು ಕರಡು ರೂಪಿಸುತ್ತಿರುವುದಾಗಿ ವರದಿ ತಿಳಿಸಿದೆ.
ಆಡಳಿತ ಸುಧಾರಣೆ ಮತ್ತು ಸಾರ್ವಜನಿಕ ದೂರುಗಳ ಇಲಾಖೆ ಈ ಬಗ್ಗೆ ಕರಡು ಪ್ರಸ್ತಾಪವನ್ನಿಟ್ಟಿತ್ತು. ಇದರಿಂದ ದೇಶದಲ್ಲಿ ಇರುವ 48.34 ಲಕ್ಷ ಕೇಂದ್ರ ಸರ್ಕಾರಿ ನೌಕರರಿಗೆ ವರ್ಷದಲ್ಲಿ 15 ದಿನ ವರ್ಕ್ ಫ್ರಂ ಹೋಮ್ ಸೌಲಭ್ಯ ದೊರೆಯಲಿದೆ ಎಂದು ವಿವರಿಸಿದೆ.
ಈ ನಿರ್ಧಾರವನ್ನು ಭವಿಷ್ಯದ ದೃಷ್ಟಿಕೋನದ ಹಿನ್ನೆಲೆಯಲ್ಲಿ ಕೈಗೊಳ್ಳಲಾಗುತ್ತಿದ್ದು, ಇದರಿಂದಾಗಿ ನೌಕರರು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕಚೇರಿ ಅಥವಾ ಮನೆಯಿಂದಲೇ ಕೆಲಸ ಮಾಡುವ ಅವಕಾಶ ಕಲ್ಪಿಸಲು ಸಾಧ್ಯವಾಗುತ್ತದೆ. ಹೀಗಾಗಿ ಎಲ್ಲಾ ಸರ್ಕಾರಿ ಇಲಾಖೆಗಳು ಈ ಪ್ರಸ್ತಾಪದ ಬಗ್ಗೆ ಮೇ 21ರೊಳಗೆ ತಮ್ಮ ಅಭಿಪ್ರಾಯಗಳನ್ನು ಕಳುಹಿಸುವಂತೆ ಸೂಚಿಸಿದೆ ಎಂದು ಬ್ಯುಸಿನೆಸ್ ಟುಡೇ ವರದಿ ಮಾಡಿದೆ.
ಇದು ಭವಿಷ್ಯದ ದೃಷ್ಟಿಕೋನದ ಕರಡು. ಆದರೆ ಈಗಾಗಲೇ ಕೇಂದ್ರ ಸಚಿವಾಲಯದ ಸಿಬ್ಬಂದಿಗಳು ಈಗಾಗಲೇ ಮನೆಯಿಂದಲೇ ಕೆಲಸ ಮಾಡುತ್ತಿದ್ದಾರೆ. ಇದರಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಾಧ್ಯವಾಗಲಿದೆ ಎಂದು ತಿಳಿಸಿದೆ.
ಇದರಲ್ಲಿ ಸರ್ಕಾರ ಮುಖ್ಯವಾಗಿ ಎದುರಿಸುವ ದೊಡ್ಡ ಸಮಸ್ಯೆ ಯಾವುದೆಂದರೆ ಮುಖ್ಯ ಕಡತಗಳ ಸುರಕ್ಷತೆ ಮತ್ತು ಭದ್ರತೆ. ನೌಕರರು ಕೆಲಸವನ್ನು ಮಾಡುವ ವೇಳೆ ಅದರ ಗೌಪ್ಯತೆ ಕಾಪಾಡುವುದು ಮುಖ್ಯ ಎಂದು ಹೇಳಿದೆ.
ಸಿಬ್ಬಂದಿ ಮತ್ತು ತರಬೇತಿ ಇಲಾಖೆ(ಡಿಒಪಿಟಿ) ತಮ್ಮ ನೌಕರರಿಗಾಗಿ ನೂತನ ಎಸ್ ಒಪಿಯನ್ನು ಅಂತಿಮಗೊಳಿಸಿರುವುದಾಗಿ ವರದಿ ತಿಳಿಸಿದೆ. ಲ್ಯಾಪ್ ಟಾಪ್ ಮತ್ತು ಡೆಸ್ಕ್ ಟಾಪ್ ಗಳನ್ನು ನೌಕರರಿಗೆ ಒದಗಿಸಬೇಕು. ಮನೆಯಲ್ಲಿ ಕೆಲಸ ಮಾಡುವ ನೌಕರರಿಗೆ ತಕ್ಕಂತೆ ಲ್ಯಾಪ್ ಟಾಪ್ ಗಳನ್ನು ಒದಗಿಸಲಾಗುವುದು.
ಮನೆಯಲ್ಲಿಯೇ ಕಚೇರಿ ಕೆಲಸ ಮಾಡುವವರಿಗೆ ಇಂಟರ್ನೆಟ್ ಬಳಕೆಯ ಹಣ ಮರುಪಾವತಿ ಮಾಡಲಾಗುವುದು ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ