ಗೋವಾ : ವಿಸಾ ಮುಕ್ತಾಯಗೊಂಡಿದ್ರೂ ರಾಜ್ಯದಲ್ಲೇ ಉಳಿದ ವಿದೇಶಿಗರಿಗೆ ಆರ್ಥಿಕ ಸಂಕಷ್ಟ


Team Udayavani, Jun 9, 2021, 4:51 PM IST

xಚವಬನಮ,ಮನಬವ

ಪಣಜಿ: ಕೋವಿಡ್ ಪರಿಸ್ಥಿತಿಯಿಂದಾಗಿ ರಾಜ್ಯದಲ್ಲಿ ವೀಸಾ ಮುಕ್ತಾಯಗೊಂಡಿದ್ದರೂ ಕೂಡ ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಿಲುಕಿಕೊಂಡಿರುವ ವಿದೇಶಿ ಪ್ರವಾಸಿಗರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರ ಬಳಿಯಿದ್ದ ಹಣ ಖಾಲಿಯಾಗಿರುವ ಹಿನ್ನೆಲೆಯಲ್ಲಿ ದೈನಂದಿನ ಖರ್ಚಿಗಾಗಿ ಕೆಲವರಂತೂ ಗೋವಾದಲ್ಲಿ ಭಿಕ್ಷೆ ಬೇಡುವ ಸ್ಥಿತಿಗೆ ಬಂದು ತಲುಪಿದ್ದಾರೆ. ಇಂತಹ ಪರಿಸ್ಥಿತಿ ಗೋವಾದ ಹರಮಲ್ ಮತ್ತು ಇತರ ಕಿನಾರಿ ಭಾಗದಲ್ಲಿ ಕಂಡುಬರುತ್ತಿದೆ.

ಆರ್ಥಿಕ ತೊಂದರೆಗೆ ಸಿಲುಕಿರುವ ಕೆಲ ವಿದೇಶಿ ಪ್ರವಾಸಿಗರಂತೂ ರಸ್ತೆಗಿಳಿದು ಸ್ಥಳೀಯ ಜನರ ಬಳಿ ಹಣಕ್ಕಾಗಿ ಅಂಗಲಾಚುವ ಪರಿಸ್ಥಿತಿಗೆ ತಲುಪಿದ್ದಾರೆ. ಕೆಲವು ಪ್ರವಾಸಿಗರಿಗಂತೂ ಮಾಸ್ಕ ಇಲ್ಲ, ಕೆಲವರು ಅಪಘಾತದಲ್ಲಿ ಗಾಯಗೊಂಡವರೂ ಇದ್ದಾರೆ, ಚಿಕಿತ್ಸೆಗೆ ಹಣವಿಲ್ಲ. ವೀಸಾ ಅವಧಿ ಮುಗಿದು ಗೋವಾದಲ್ಲಿ ಸಿಲುಕಿಕೊಂಡಿರುವ ವಿದೇಶಿ ಪ್ರವಾಸಿಗರನ್ನು ಅವರವರ ದೇಶಕ್ಕೆ ಕಳುಹಿಸುವ ಜವಾಬ್ದಾರಿಯನ್ನು ಸರ್ಕಾರ ತೆಗೆದುಕೊಳ್ಳಬೇಕು ಎಂದು ಹರಮಲ್ ಪಂಚಾಯತಿ ಸದಸ್ಯ ಪ್ರವೀಣ ವಾಯಂಗಣಕರ್ ಸರ್ಕಾರದ ಬಳಿ ಮನವಿ ಮಾಡಿದ್ದಾರೆ.

ಪೆಡ್ನೆ ತಾಲೂಕಿನ ಮೋರಜಿ, ಆಶ್ವೆ, ಮಾಂದ್ರೆ, ಹರಮಲ್, ಕೇರಿ ಭಾಗದಲ್ಲಿ ನೂರಕ್ಕೂ ಹೆಚ್ಚು ವಿದೇಶಿ ಪ್ರವಾಸಿಗರು ಸಿಲುಕಿಕೊಂಡಿದ್ದಾರೆ. ಕಳೆದ ಕೆಲ ದಿನಗಳ ವರೆಗೆ ಜೀವನೋಪಾಯಕ್ಕಾಗಿ ಈ ಪ್ರವಾಸಿಗರು ಹೋಟೇಲ್‍ಗಳಲ್ಲಿ ಕೆಲಸ ಮಾಡುತ್ತಿದ್ದರು. ಆದರೆ ಸದ್ಯ ಹೋಟೆಲ್ ಕೂಡ ಬಂದ್ ಆಗಿರುವುದರಿಂದ ಅವರ ದೈನಂದಿನ ಖರ್ಚಿಗಾಗಿ ಅವರ ಬಳಿ ಹಣವಿಲ್ಲದಂತಾಗಿದೆ. ಜೇಬಿನಲ್ಲಿ ಹಣವಿಲ್ಲದೆಯೇ ಒಂದು ಹೊತ್ತಿನ ಊಟಕ್ಕೂ ತೊಂದರೆ ಅನುಭವಿಸುವಂತಾಗಿದೆ.

ಈ ವಿದೇಶಿ ಪ್ರವಾಸಿಗರು ಕಳೆದ ವರ್ಷ ಲಾಕ್‍ಡೌನ್ ಸಂದರ್ಬದಲ್ಲಿ ಗೋವಾಕ್ಕೆ ಬಂದು ಸಿಲುಕಿಕೊಂಡಿದ್ದರು. ಆದರೆ ಅಂದು ಕೆಲ ತಿಂಗಳ ವರೆಗೆ ಗೋವಾದ ಸ್ಥಳೀಯರು ಅವರಿಗೆ ಪ್ರತಿನಿತ್ಯ ಊಟ ನೀಡಿದ್ದರು. ಬಾಡಿಗೆ ಮನೆ ಮಾಲೀಕರು ಬಾಡಿಗೆ ಮಾಫ ಮಾಡಿದ್ದರು. ಆದರೆ ಇದೀಗ ಅವರ ವೀಸಾ ಅವಧಿಯೂ ಮುಕ್ತಾಯಗೊಂಡಿದ್ದು ವಸತಿ ಮತ್ತು ಊಟಕ್ಕೂ ತೊಂದರೆ ಅನುಭವಿಸುತ್ತಿದ್ದಾರೆ.

ಕೆಲ ವಿದೇಶಿ ಪ್ರವಾಸಿಗರು ಅಪಘಾತದಲ್ಲಿ ಗಾಯಗೊಂಡವರೂ ಇದ್ದಾರೆ. ಇಂತವರು ಚಿಕಿತ್ಸೆಗೂ ಹಣವಿಲ್ಲದೆಯೇ ತೊಂದರೆ ಅನುಭವಿಸುತ್ತಿದ್ದಾರೆ. ಇಂತವರಿಗೆ ಸರ್ಕಾರ ಕೂಡಲೇ ಸೂಕ್ತಿ ಚಿಕಿತ್ಸೆ ಕೊಡಿಸುವ ಅಗತ್ಯವಿದೆ. ಈ ವಿದೇಶಿ ಪ್ರವಾಸಿಗರನ್ನು ಅವರವರ ದೇಶಕ್ಕೆ ಕಳುಹಿಸಲು ಸರ್ಕಾರ ಕೂಡಲೇ ವ್ಯವಸ್ಥೆ ಮಾಡಬೇಕಿದೆ ಎಂದು ಸ್ಥಳೀಯರಿಂದ ಆಗ್ರಹ ವ್ಯಕ್ತವಾಗುತ್ತಿದೆ.

ಟಾಪ್ ನ್ಯೂಸ್

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.