ಕೇರಳದಲ್ಲಿ ಮೇ16ರವರೆಗೆ ಲಾಕ್ಡೌನ್ : ಸಿಎಂ ಪಿಣರಾಯಿ ವಿಜಯನ್
Team Udayavani, May 6, 2021, 12:50 PM IST
ತಿರುವನಂತಪುರ: ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ದೇವರನಾಡು ಕೇರಳದಲ್ಲಿ ಇದೀಗ ಲಾಕ್ ಡೌನ್ ಘೋಷಣೆಯಾಗಿದೆ.
ಮೇ 8ರ ಬೆಳಗ್ಗೆ 6 ಗಂಟೆಯಿಂದ ಮೇ16ರವರೆಗೆ ಕೇರಳ ರಾಜ್ಯದಲ್ಲಿ ಲಾಕ್ಡೌನ್ ಜಾರಿ ಮಾಡುತ್ತಿರುವುದಾಗಿ ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ.
ಸರ್ಕಾರದ ಈ ನಿರ್ಧಾರಕ್ಕೆ ಬುಧವಾರ ಕೇರಳದಲ್ಲಿ 41,953 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿರುವುದೇ ಕಾರಣವಾಗಿದೆ. ಇದು ಇದುವರೆಗಿನ ದೈನಂದಿನ ದಾಖಲೆಯಾಗಿದೆ. ಲಾಕ್ಡೌನ್ ವೇಳೆ ಯಾವುದಕ್ಕೆಲ್ಲ ವಿನಾಯತಿ ಇರಲಿದೆ ಎಂಬುದು ಮಾರ್ಗಸೂಚಿಯಲ್ಲಿ ತಿಳಿದು ಬರಲಿದೆ.
ಕಳೆದ ವರ್ಷ ಕೇರಳದಲ್ಲಿಯೇ ಮೊದಲ ಕೋವಿಡ್ ಪ್ರಕರಣ ಪತ್ತೆಯಾಗಿತ್ತು. ಆದರೆ, ನಂತರದ ದಿನಗಳಲ್ಲಿ ಸರ್ಕಾರದ ಕಟ್ಟುನಿಟ್ಟಿನ ಕ್ರಮಗಳ ಫಲವಾಗಿ ಸೋಂಕು ಹತೋಟಿಗೆ ಬಂದಿತ್ತು. ಈ ಬಾರಿಯೂ ಎರಡನೇ ಅಲೆ ಕೇರಳದಲ್ಲಿ ಹೆಚ್ಚಿದೆ. ಹೀಗಾಗಿ ಲಾಕ್ ಡೌನ್ ಘೋಷಣೆ ಮಾಡಲು ಸರ್ಕಾರದ ನಿರ್ಧರಿಸಿದೆ. ಇದರ ಜೊತೆಗೆ ಲಸಿಕಾ ಅಭಿಯಾನವನ್ನೂ ಚುರುಕುಗೊಳಿಸಿದೆ.
Lockdown to be imposed in the state from 6 am on May 8 to May 16, in wake of the surge in COVID-19 cases in the second wave: Kerala CM Pinarayi Vijayan
(file photo) pic.twitter.com/16N1wY47It
— ANI (@ANI) May 6, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು