ಜೂ. 30ರಿಂದ ಮಹಾರಾಷ್ಟ್ರದಲ್ಲಿ ಲಾಕ್ ಡೌನ್ ತೆರವು ಮಾಡಲಾಗುವುದಿಲ್ಲ: ಸಿಎಂ ಉದ್ಧವ್ ಠಾಕ್ರೆ
Team Udayavani, Jun 28, 2020, 2:23 PM IST
ಮುಂಬೈ: ಮಹಾರಾಷ್ಟ್ರ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್-19 ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಜೂನ್ 30ರ ನಂತರವೂ ರಾಜ್ಯದಲ್ಲಿ ಲಾಕ್ ಡೌನ್ ತೆರವುಗೊಳಿಸಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.
ಇಂದು ಈ ಬಗ್ಗೆ ಸ್ಪಷ್ಟಪಡಿಸಿದ ಅವರು, ಜೂನ್ 30ರ ನಂತರವೂ ಲಾಕ್ ಡೌನ್ ತೆರವು ಮಾಡಲಾಗುವುದಿಲ್ಲ. ಆದರೆ ಕೆಲವು ನಿಬಂಧನೆಗಳನ್ನು ಸಡಿಲಿಸಲಾಗುವುದು ಎಂದಿದ್ದಾರೆ.
ಕೋವಿಡ್-19 ಸೋಂಕಿನ ವಿರುದ್ಧ ನಾವು ಹೋರಾಟ ನಡೆಸುತ್ತಿದ್ದೇವೆ. ನಾವೀಗ ರಾಜ್ಯದಲ್ಲಿ ಪ್ಲಾಸ್ಮಾ ಚಿಕಿತ್ಸೆ ನಡೆಸಲು ಆರಂಭಿಸಿದ್ದೇವೆ. ಮುಂದಿನ ದಿನಗಳಲ್ಲಿ ಹೆಚ್ಚು ಹೆಚ್ಚು ಪ್ಲಾಸ್ಮಾ ಚಿಕಿತ್ಸೆ ನೀಡಲಿದ್ದೇವೆ. ಹೀಗಾಗಿ ಗುಣಮುಖರಾದ ಸೋಂಕಿತರಲ್ಲಿ ಪ್ಲಾಸ್ಮಾ ದಾನ ಮಾಡುವಂತೆ ವಿನಂತಿಸುತ್ತೇನೆ ಎಂದು ಸಿಎಂ ಉದ್ಧವ್ ಠಾಕ್ರೆ ಹೇಳಿದರು.
ಮುಂಗಾರು ರಾಜ್ಯಕ್ಕೆ ಕಾಲಿಡುತ್ತಿರುವ ಕಾರಣ ನಗರದಲ್ಲಿ ವಾಸಿಸುವ ಜನರು ತಮ್ಮ ಪರಿಸರವನ್ನು ಸ್ವಚ್ಛವಾಗಿಡಬೇಕು. ಇದಿರಂದ ಅನಾರೋಗ್ಯವನ್ನು ದೂರವಿಡಬಹುದು ಎಂದರು.
ಮಹಾರಾಷ್ಟ್ರದಲ್ಲಿ ಇದುವರೆಗೆ ಒಂದು ಲಕ್ಷ 53 ಸಾವಿರ ಜನರಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಇದರಲ್ಲಿ 7,106 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 79,815 ಮಂದಿ ಸೋಂಕಿತರು ಕೋವಿಡ್-19 ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು