27 ಲೋಕಸಭಾ ಉಪಚುನಾವಣೆ, ಬಿಜೆಪಿ ಜಯ ಸಾಧಿಸಿದ್ದು 5ರಲ್ಲಿ ಮಾತ್ರ!


Team Udayavani, Jun 1, 2018, 3:22 PM IST

bjp.jpg

ನವದೆಹಲಿ: 2014ರ ಸಾರ್ವತ್ರಿಕ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಐತಿಹಾಸಿಕ ಗೆಲುವು ಸಾಧಿಸಿತ್ತು. ತದನಂತರ 2014ರಿಂದ 2018ರವರೆಗೆ ನಡೆದ 27 ಲೋಕಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಜಯ ಸಾಧಿಸಿದ್ದು ಕೇವಲ 5 ಕ್ಷೇತ್ರಗಳಲ್ಲಿ ಮಾತ್ರ.

ಏತನ್ಮಧ್ಯೆ ಕಾಂಗ್ರೆಸ್ ಪಕ್ಷ ಕೂಡಾ ಈ ಜಿದ್ದಾಜಿದ್ದಿನ ಹಣಾಹಣಿಯಲ್ಲಿ 5 ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಅಮೃತ್ ಸರ್ ಲೋಕಸಭಾ ಸೇರಿದಂತೆ ಉಳಿದ ಬಿಜೆಪಿ ನಾಲ್ಕು ಕ್ಷೇತ್ರಗಳನ್ನು ಬಿಜೆಪಿ ತೆಕ್ಕೆಯಿಂದ ವಶಪಡಿಸಿಕೊಂಡಿದೆ. ಇನ್ನುಳಿದಂತೆ ಕಳೆದ ನಾಲ್ಕು ವರ್ಷಗಳಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಕೂಡಾ ನಾಲ್ಕು ಸ್ಥಾನಗಳಲ್ಲಿ ಜಯ ಸಾಧಿಸಿದೆ.

2015ರಿಂದ 2017ರ ನಡುವೆ ನಡೆದ ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಒಂದೇ ಒಂದು ಸ್ಥಾನಗಳಲ್ಲಿ ಜಯ ಸಾಧಿಸಿಲ್ಲ. ಈ ವರ್ಷವೂ ಮೇವರೆಗೆ ನಡೆದ ಲೋಕಸಭಾ ಉಪಚುನಾವಣೆಯಲ್ಲಿ ಪಾಲ್ಘಾರ್ ಹೊರತು ಪಡಿಸಿ ಬೇರೆ ಯಾವ ಕ್ಷೇತ್ರದಲ್ಲೂ ಗೆಲುವಿನ ನಗು ಬೀರಿಲ್ಲ.

2014ರ ನಂತರ ನಡೆದ 27 ಲೋಕಸಭಾ ಕ್ಷೇತ್ರಗಳ ಉಪಚುನಾವಣೆಗಳ ಪೈಕಿ 13 ಕ್ಷೇತ್ರಗಳು ಬಿಜೆಪಿಗೆ ಸೇರಿದವು. ಬಿಜೆಪಿ ಗೆದ್ದ 5 ಕ್ಷೇತ್ರಗಳು ಬಿಜೆಪಿಯೇತರ ಪಕ್ಷಗಳ ವಶದಲ್ಲಿದ್ದ ಕ್ಷೇತ್ರಗಳಾಗಿದ್ದವು. 2014ರಲ್ಲಿ ನರೇಂದ್ರಮೋದಿ ವರ್ಚಸ್ಸಿನಲ್ಲಿಯೇ ಬಿಜೆಪಿ 2 ಕ್ಷೇತ್ರಗಳನ್ನ ಗೆದ್ದಿತ್ತು. 2014ರಲ್ಲಿ ನಡೆದ 5 ಉಪಚುನಾವಣೆಗಳಲ್ಲಿ ಆಯಾ ಪಕ್ಷಗಳೇ ತಮ್ಮ ಸ್ಥಾನಗಳನ್ನ ಉಳಿಸಿಕೊಂಡವು.  ಮಹಾರಾಷ್ಟ್ರದ ಬೀಡ್ ಮತ್ತು ಗುಜರಾತಿನ ವಡೋದರ ಕ್ಷೇತ್ರವನ್ನ ಬಿಜೆಪಿ ಉಳಿಸಿಕೊಂಡಿತ್ತು. ಒಡಿಶಾದ ಕಂದಮಾಲ್ ಕ್ಷೇತ್ರವನ್ನ ಬಿಜೆಡಿ, ಉತ್ತರಪ್ರದೇಶದ ಮೈನ್​ಪುರಿ ಕ್ಷೇತ್ರವನ್ನ ಸಮಾಜವಾದಿ ಪಕ್ಷ, ಆಂಧ್ರಪ್ರದೇಶದ ಮೇಧಕ್ ಕ್ಷೇತ್ರವನ್ನ ಟಿಆರ್​ಎಸ್ ಉಳಿಸಿಕೊಂಡಿತ್ತು.

2016ರ ಭಾರತೀಯ ಜನತಾ ಪಕ್ಷ ಸ್ವಲ್ಪ ಚೇತರಿಕೆ ಕಂಡಿದ್ದು ಅಸ್ಸಾಂನ ಲಖೀಂಪುರ್ ಹಾಗೂ ಮಧ್ಯಪ್ರದೇಶದ ಶಾದೋಲ್ ಕ್ಷೇತ್ರವನ್ನು ತನ್ನ ತೆಕ್ಕೆಯಲ್ಲಿ ಉಳಿಸಿಕೊಂಡಿತ್ತು. ಆದರೆ ತೃಣಮೂಲ ಕಾಂಗ್ರೆಸ್(ಕೋಚ್ ಬೆಹರ್ ಮತ್ತು ಟಾಮ್ಲುಕ್) ಭದ್ರಕೋಟೆಯಲ್ಲಿ ಪ್ರಗತಿ ಸಾಧಿಸಲು ಬಿಜೆಪಿ ವಿಫಲವಾಗಿತ್ತು. ತುರಾ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಕಣದಿಂದ ಹಿಂದೆ ಸರಿದು ಎನ್​ಪಿಪಿಗೆ ಬೆಂಬಲ ಸೂಚಿಸಿತ್ತು. ಇಲ್ಲಿ ಎನ್ ಪಿಪಿ ಜಯ ಸಾಧಿಸಿತ್ತು.

ಬಿಜೆಪಿ ದೊಡ್ಡ ಪತನವಾಗಿದ್ದು 2018ರಲ್ಲಿ.. 2014ರ ಸಾರ್ವತ್ರಿಕ ಚುನಾವಣೆಯಲ್ಲಿ ಗೆದ್ದಿದ್ದ 8 ಕ್ಷೇತ್ರಗಳು ಬಿಜೆಪಿಯಿಂದ ಈ ವರ್ಷ ಕೈತಪ್ಪಿದೆ. ಕಳೆದ ಮಾರ್ಚ್​ನಲ್ಲಿ ಗೋರಖ್ ಪುರ್ ಮತ್ತು ಫುಲ್ಪುರ್ ಕ್ಷೇತ್ರ ಸೇರಿ 6 ಕ್ಷೇತ್ರಗಳನ್ನ ಬಿಜೆಪಿ ಸೋತಿದೆ. 

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.