ಲೋಕ ಸಮರ-19 LIVE Updates: ಘರ್ಷಣೆ, ಗೊಂದಲದ ನಡುವೆ ಚೇತೋಹಾರಿ ಮತದಾನ


Team Udayavani, May 12, 2019, 9:18 AM IST

6-th-phase-04

ನವದೆಹಲಿ: ಲೋಕಸಭಾ ಚುನಾವಣೆಯ ಆರನೇ ಹಂತದ ಮತದಾನ ಪ್ರಾರಂಭಗೊಂಡಿದೆ. ಈ ಹಂತದಲ್ಲಿ ಒಟ್ಟು 07 ರಾಜ್ಯಗಳ 59 ಲೋಕಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ.

ಮಧ್ಯಾಹ್ನ 02 ಗಂಟೆಯವರೆಗೆ ಒಟ್ಟಾರೆಯಾಗಿ 39.74% ಮತದಾನವಾಗಿದೆ.

ಬಿಹಾರದಲ್ಲಿ 35.22%, ಹರ್ಯಾಣದಲ್ಲಿ 39.16%, ಮಧ್ಯಪ್ರದೇಶದಲ್ಲಿ 42.27%, ಉತ್ತರಪ್ರದೇಶದಲ್ಲಿ 34.30%, ಪಶ್ಚಿಮ ಬಂಗಾಲ 55.77%, ಜಾರ್ಖಂಡ್ 47.16%, ದೆಹಲಿಯಲ್ಲಿ 33.65% ಮತದಾನವಾಗಿದೆ.


– ಸಮಾಜ ಸೇವಕ ಸುನಿಲ್ ವರ್ಮಾ ಎಂಬವರ ಮುಂದಾಳತ್ವದಲ್ಲಿ ನವದೆಹಲಿಯ ದ್ವಾರಕಾ ಸೆಕ್ಟರ್ 7ರ ಜಾಗೃತ ಮತದಾರರು ರಾಂ ಪಾಲ್ ಚೌಕದಲ್ಲಿ ಜೊತೆಗೂಡಿ ಎಲ್ಲರಿಗೂ ಮತದಾನ ಮಾಡುವಂತೆ ಪ್ರೇರೇಪಿಸುವ ಅಭಿಯಾನವನ್ನು ಕೈಗೊಂಡಿದ್ದರು.

– ನವದೆಹಲಿಯ ಲೋಧಿ ಎಸ್ಟೇಟ್ ಬಳಿ ಇರುವ ಸರ್ದಾರ್ ಪಟೇಲ್ ವಿದ್ಯಾಲಯದ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ ಗಾಂಧಿ ಅವರು ಪತಿ ರಾಬರ್ಟ್ ವಾದ್ರಾ ಅವರೊಂದಿಗೆ ಆಗಮಿಸಿ ಮತದಾನ ಮಾಡಿದರು.

– ಘಟಾಲ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾರತಿ ಘೋಷ್ ಅವರ ಮೇಲೆ ಸ್ಥಳೀಯರು ಹಲ್ಲೆಗೆ ಮುಂದಾದಾಗ ಅವರ ಖಾಸಗಿ ಅಂಗರಕ್ಷಕರು ನಾಲ್ಕು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿರುವ ಘಟನೆ ವರದಿಯಾಗಿದೆ. ಈ ಘಟನೆಯಲ್ಲಿ ತಮ್ಮ ಕಾರ್ಯಕರ್ತರೊಬ್ಬರಿಗೆ ಗಾಯಗಳಾಗಿದೆ ಎಂದು ಟಿಎಂಸಿ ಆರೋಪಿಸಿದೆ. ಗಾಯಾಳು ಕಾರ್ಯಕರ್ತನನ್ನು ಮೇದಿನೀಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.

– ಪಶ್ಚಿಮ ಬಂಗಾಲದ ಕಾಂತಿ ಲೋಕ ಸಭಾ ಕ್ಷೇತ್ರದಲ್ಲಿನ ಮತದಾನ ಕೇಂದ್ರವೊಂದರಲ್ಲಿ ಬಿಜೆಪಿ ಏಜೆಂಟ್ ಗೆ ಥಳಿಸಲಾಗಿದೆ ಮತ್ತು ಆತನನ್ನು ಮತದಾನ ಕೇಂದ್ರದಿಂದ ಬಲವಂತವಾಗಿ ಹೊರ ಹಾಕಲಾಗಿದೆ ಎಂದು ವರದಿಯಾಗಿದೆ. ಬಿಜೆಪಿ ಬೆಂಬಲಿಗರ ಮತದಾನ ಗುರುತಿನ ಚೀಟಿಯನ್ನು ಕಸಿದುಕೊಳ್ಳಲಾಗಿದೆ ಎಂಬ ಆರೋಪವೂ ಕೇಳಿಬರುತ್ತಿದೆ.

– ವಿದೇಶಾಂಗ ಸಚಿವೆ ಹಾಗೂ ಭಾರತೀಯ ಜನತಾ ಪಕ್ಷದ ನಾಯಕಿ ಶ್ರೀಮತಿ ಸುಷ್ಮಾ ಸ್ವರಾಜ್ ಅವರು ನವದೆಹಲಿಯ ಔರಂಗಜೇಬ್ ರಸ್ತೆಯಲ್ಲಿರುವ ಎನ್.ಪಿ. ಸೀನಿಯರ್ ಸೆಕೆಂಡರಿ ಶಾಲೆಯ ಮತಗಟ್ಟೆಯಲ್ಲಿ ತಮ್ಮ ಹಕ್ಕನ್ನು ಚಲಾಯಿಸಿದರು.

– ಉತ್ತರಪ್ರದೇಶದ ಮಛ್ಲಿಶಹರ್ ನ ಕುಬೂಲ್ ಪುರ್ ಮತದಾನ ಕೇಂದ್ರದಲ್ಲಿ ಮತದಾನ ಪ್ರಾರಂಭಗೊಂಡಿಲ್ಲ ಎಂದು ವರದಿಯಾಗಿದೆ. ಈ ಮತಗಟ್ಟೆಯಲ್ಲಿ ಮುಸ್ಲಿಂ ಮಹಿಳೆಯರು ಬೆಳಿಗ್ಗೆ 6 ಗಂಟೆಯಿಂದಲೇ ತಮ್ಮ ಹಕ್ಕನ್ನು ಚಲಾಯಿಸಲು ಕಾಯುತ್ತಿದ್ದರು. ಆದರೆ ಇಲ್ಲಿ ಮತಯಂತ್ರ ಕೈಕೊಟ್ಟಿದ್ದರಿಂದ ಅವರಿಗೆ ಮತದಾನ ಮಾಡಲು ಸಾಧ್ಯವಾಗಲಿಲ್ಲ. ಬಳಿಕ 9 ಗಂಟೆಯವರೆಗೆ ಕಾದು ಬಳಿಕ ಅವರೆಲ್ಲಾ ಮತದಾನ ಮಾಡದೆ ವಾಪಸ್ಸಾಗಿದ್ದಾರೆ ಎಂದು ತಿಳಿದುಬಂದಿದೆ.

– ಹರ್ಯಾಣದ ಗುರುಗ್ರಾಮದಲ್ಲಿರುವ ಪಿನೆಕ್ರೆಸ್ಟ್ ಮತದಾನ ಕೇಂದ್ರದಲ್ಲಿ ತನ್ನ ಹಕ್ಕನ್ನು ಚಲಾಯಿಸಿದ ಭಾರತ ಕ್ರಿಕೆಟ್ ತಂಡದ ಕಪ್ತಾನ ವಿರಾಟ್ ಕೊಹ್ಲಿ ಅವರು ಮಾದ್ಯಮ ಕೆಮರಾಗಳ ಮುಂದೆ ಕಾಣಿಸಿಕೊಂಡಿದ್ದು ಹೀಗೆ.

– ಭೋಪಾಲ ಕ್ಷೇತ್ರದಿಂದ ಭಾರತೀಯ ಜನತಾಪಕ್ಷದ ಅಭ್ಯರ್ಥಿಯಾಗಿರುವ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರು ತಮ್ಮ ಹಕ್ಕನ್ನು ಚಲಾಯಿಸಿದರು.

– ಉತ್ತರ ಪ್ರದೇಶದ ಜೌನ್ ಪುರ ಲೋಕಸಭಾ ಕ್ಷೇತ್ರದ ಮತಗಟ್ಟೆ ಸಂಖ್ಯೆ 303 ಹಾಗೂ ಸುಲ್ತಾನ್ ಪುರ ಲೋಕ ಸಭಾ ಕ್ಷೇತ್ರದ ಮತಗಟ್ಟೆ ಸಂಖ್ಯೆಗಳಾದ 274 ಹಾಗೂ 278ರಲ್ಲಿ ಇವಿಎಂ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲವೆಂದು ವರದಿಯಾಗಿದೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.