Lok Sabha Election: ಚುನಾವಣ ಪ್ರಚಾರಕ್ಕೆ ಬಿಜೆಪಿಯಿಂದ 4 ತಂಡ


Team Udayavani, Mar 28, 2024, 7:00 AM IST

Lok Sabha Election: ಚುನಾವಣ ಪ್ರಚಾರಕ್ಕೆ ಬಿಜೆಪಿಯಿಂದ 4 ತಂಡ

ಬೆಂಗಳೂರು: ಇಪ್ಪತ್ತೆಂಟೂ ಲೋಕಸಭಾ ಕ್ಷೇತ್ರಗಳ ಗೆಲುವಿನ ಬೆನ್ನೇರಿ ಹೊರಟಿರುವ ಬಿಜೆಪಿ, ತನ್ನ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಹಾಗೂ ಪ್ರಚಾರ ಕಾರ್ಯಗಳು ಹೇಗಿರಬೇಕೆಂಬ ನೀಲನಕ್ಷೆ ರೂಪಿಸಿಕೊಂಡಿದ್ದು ನಾಲ್ಕು ಪ್ರತ್ಯೇಕ ತಂಡಗಳಾಗಿ ಪ್ರವಾಸ ಕೈಗೊಳ್ಳಲು ನಿರ್ಧರಿಸಿದೆ.

ಈಗಾಗಲೇ 28 ಲೋಕಸಭಾ ಕ್ಷೇತ್ರಗಳನ್ನೂ 8 ಕ್ಲಸ್ಟರ್‌ಗಳಾಗಿ ವಿಂಗಡಿಸಿಕೊಂಡಿರುವ ಬಿಜೆಪಿ, ಕಲಬುರಗಿ ಹಾಗೂ ಶಿವಮೊಗ್ಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮೂಲಕ ಮೊದಲ ಹಂತದ ಪ್ರಚಾರಕ್ಕೆ ಚಾಲನೆ ನೀಡಿದೆ.

ಮುಂದಿನ ಹಂತದ ಪ್ರಚಾರ ಕಾರ್ಯಕ್ಕೆ ಅಣಿಯಾಗುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕೇಂದ್ರ ಬಿಜೆಪಿ ಸಂಸದೀಯ ಮಂಡಳಿ ಸದಸ್ಯರೂ ಆಗಿರುವ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ, ವಿಧಾನಸಭೆ ವಿಪಕ್ಷ ನಾಯಕ ಆರ್‌.ಅಶೋಕ್‌ ಹಾಗೂ ಕೇಂದ್ರ ನಾಯಕರ ಪ್ರತ್ಯೇಕ ತಂಡಗಳನ್ನು ರಚಿಸುತ್ತಿದೆ. ನಾಲ್ಕೂ ತಂಡದಲ್ಲಿ ರಾಜ್ಯವನ್ನು ಪ್ರತಿನಿಧಿಸುತ್ತಿರುವ ಕೇಂದ್ರ ಸಚಿವರೂ ಇರಲಿದ್ದಾರೆ.

ಉಳಿದಂತೆ ಯಾವ್ಯಾವ ಪ್ರಮುಖರು ಇರಬೇಕು, ಇದರಲ್ಲಿ ಜೆಡಿಎಸ್‌ನ ಎಷ್ಟು ಪ್ರಮುಖರು ಹಾಗೂ ಬಿಜೆಪಿಯ ಎಷ್ಟು ನಾಯಕರು ಇರಬೇಕು, ಯಾವಾಗಿನಿಂದ ಪ್ರವಾಸ ಅರಂಭಿಸಬೇಕು, ಯಾವ್ಯಾವ ಕ್ಷೇತ್ರದಲ್ಲಿ ಯಾವ್ಯಾವ ತಂಡ ಪ್ರವಾಸ ಮಾಡಬೇಕು ಎಂಬುದರ ರೂಪುರೇಷೆ ಇನ್ನಷ್ಟೇ ಸಿದ್ಧವಾಗಬೇಕಿದೆ.

ಜೆಡಿಎಸ್‌ ಜತೆಗೆ ಸಮನ್ವಯ ಸಾಧನೆ
ಬಿಜೆಪಿ ಹಾಗೂ ಜೆಡಿಎಸ್‌ ತನ್ನ 28 ಅಭ್ಯರ್ಥಿಗಳ ಹೆಸರನ್ನು ಬಹುತೇಕ ಅಂತಿಮಗೊಳಿಸಿದ್ದು ಅಸಮಾಧಾನ ಶಮನ ಮತ್ತು ಸಮನ್ವಯ ಸಾಧಿಸುವ ಕಾರ್ಯದಲ್ಲಿ ಸದ್ಯಕ್ಕೆ ಮಗ್ನವಾಗಿದೆ. ಏತನ್ಮಧ್ಯೆ, ಮೈಸೂರಿನಲ್ಲಿ ಬಿಜೆಪಿ-ಜೆಡಿಎಸ್‌ ಸಮನ್ವಯ ಸಭೆ ನಡೆಸಿದ್ದು ಗುರುವಾರ ಮಂಡ್ಯದಲ್ಲೂ ಸಮನ್ವಯ ಸಭೆ ನಡೆಯಲಿದೆ. ಅಸಮಾಧಾನ ಶಮನಗೊಂಡು ಸಮನ್ವಯ ಸಾಧನೆ ಯಶಸ್ವಿಯಾದಂತೆ ಪ್ರವಾಸ ನಡೆಸಲಿರುವ ತಂಡದ ಸದಸ್ಯರ ಆಯ್ಕೆಯೂ ಅಂತಿಮಗೊಳ್ಳಲಿದೆ.

4 ತಂಡ, ದಿನಕ್ಕೆ 2ರಿಂದ 3 ಕಡೆ ಪ್ರಚಾರ
ಗೋಡೆ ಬರಹ ಅಭಿಯಾನ, ಗ್ರಾಮ ಚಲೋ, ಫ‌ಲಾನುಭವಿಗಳ ಸಂಪರ್ಕ, ವಿಕಸಿತ ಭಾರತ, ರೈತ ಪರಿಕ್ರಮ ಅಥವಾ ಗ್ರಾಮ ಪರಿಕ್ರಮ ಯಾತ್ರೆ ಸೇರಿ ವಿವಿಧ ಅಭಿಯಾನಗಳ ಮೂಲಕ ಸ್ಥಳೀಯವಾಗಿ ಮತದಾರರನ್ನು ತಲುಪಲು ಪ್ರಯತ್ನಿಸಿರುವ ಬಿಜೆಪಿ, ವಿವಿಧ ಪ್ರಕೋಷ್ಠಗಳ ಮುಖಾಂತರ ಆಯಾ ವರ್ಗದ ಜನರನ್ನು ಮುಟ್ಟಲೆತ್ನಿಸುತ್ತಿದೆ. ಪ್ರತಿ ಲೋಕಸಭಾ ಕ್ಷೇತ್ರದಲ್ಲಿ ಇಂತಹ 70-80 ಕಾರ್ಯಕ್ರಮಗಳನ್ನು ಈ ಬಾರಿಯ ಚುನಾವಣೆಗಾಗಿ ರೂಪಿಸಿದ್ದು, ಎಲ್ಲ ಚಟುವಟಿಕೆಗಳನ್ನು ನಮೋ ಆಪ್‌ ಹಾಗೂ ಸರಳ್‌ ಆಪ್‌ ಮೂಲಕ ನಿರ್ವಹಿಸುತ್ತಿದೆ. ಇದರೊಂದಿಗೆ ರಚನೆಯಾಗುತ್ತಿರುವ ನಾಲ್ಕು ತಂಡಗಳು ದಿನವೊಂದಕ್ಕೆ ಪ್ರತಿ ಲೋಕಸಭಾ ಕ್ಷೇತ್ರದ ಎರಡರಿಂದ ಮೂರು ಕಡೆಗಳಲ್ಲಿ ರ್ಯಾಲಿ, ಸಮಾವೇಶ ಇತ್ಯಾದಿಗಳ ಮೂಲಕ ಪ್ರಚಾರ ಕೈಗೊಳ್ಳಲಿದೆ.

ಟಾಪ್ ನ್ಯೂಸ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.