![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
LokSabha Election; ಮಣಿಪುರದ 11 ಬೂತ್ ಗಳಲ್ಲಿ ಮರು ಮತದಾನಕ್ಕೆ ಆದೇಶ
Team Udayavani, Apr 21, 2024, 12:35 PM IST
![LokSabha Election; ಮಣಿಪುರದ 11 ಬೂತ್ ಗಳಲ್ಲಿ ಮರು ಮತದಾನಕ್ಕೆ ಆದೇಶ](https://www.udayavani.com/wp-content/uploads/2024/04/manipura-1-620x342.jpg)
ಇಂಫಾಲ್: ಮೊದಲ ಹಂತದ ಮತದಾನ ನಡೆದ ಮಣಿಪುರದ 11 ಮತ ಕೇಂದ್ರಗಳಲ್ಲಿ ಮರು ಮತದಾನಕ್ಕೆ ಮಣಿಪುರ ಮುಖ್ಯ ಚುನಾವಣಾಧಿಕಾರಿ ಶನಿವಾರ ಘೋಷಿಸಿದ್ದಾರೆ. ಮಣಿಪುರ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 22 ರಂದು 11 ಮತಗಟ್ಟೆಗಳಲ್ಲಿ ಮರುಚುನಾವಣೆ ನಡೆಯಲಿದೆ.
ಏಪ್ರಿಲ್ 19 ರಂದು ಈ ಕೇಂದ್ರಗಳಲ್ಲಿ ನಡೆಸಿದ ಮತಗಳನ್ನು ಅಸಿಂಧು ಎಂದು ಘೋಷಿಸಿ ಹೊಸ ಮತದಾನಕ್ಕೆ ವ್ಯವಸ್ಥೆ ಮಾಡುವಂತೆ ಚುನಾವಣಾ ಆಯೋಗದ ಆದೇಶಿಸಿದೆ. ಉರಿಪೋಕ್ ನಲ್ಲಿ ಮೂರು ಮತ್ತು ಇಂಫಾಲ್ ಪಶ್ಚಿಮ ಜಿಲ್ಲೆಯ ಕೊಂತೌಜಮ್ನಲ್ಲಿ ಒಂದು, ಕ್ಷೇತ್ರಗಾವೊದಲ್ಲಿ ನಾಲ್ಕು ಮತ್ತು ಇಂಫಾಲ್ ಪೂರ್ವ ಜಿಲ್ಲೆಯ ತೊಂಗ್ಜುನಲ್ಲಿ ಒಂದು ಮತ್ತು ಖುರೈ ಕ್ಷೇತ್ರದ ಮೊಯಿರಂಗ್ಯಾಂಪು ಸಾಜೆಬ್ ಮತ್ತು ತೊಂಗಮ್ ಲೈಕೈ ನಲ್ಲಿ ಮರು ಮತದಾನ ನಡೆಯಲಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಗುಂಡಿನ ದಾಳಿ, ಬೆದರಿಕೆ, ಹಲವಾರು ಮತದಾನದ ಸ್ಥಳಗಳಲ್ಲಿ ಇವಿಎಂ ಧ್ವಂಸ ಮತ್ತು ಮತಗಟ್ಟೆ ವಶಪಡಿಸಿಕೊಂಡ ಆರೋಪಗಳ ಹೊರತಾಗಿಯೂ ಸಂಘರ್ಷ ಪೀಡಿತ ರಾಜ್ಯವಾದ ಮಣಿಪುರದಲ್ಲಿ ಶುಕ್ರವಾರ ಎರಡು ಲೋಕಸಭಾ ಕ್ಷೇತ್ರಗಳಲ್ಲಿ 72% ಮತದಾನವಾಗಿದೆ.
ಇದಕ್ಕೂ ಮುನ್ನ 47 ಮತಗಟ್ಟೆಗಳಲ್ಲಿ ಮರು ಎಣಿಕೆಗೆ ಒತ್ತಾಯಿಸಿದ ಕಾಂಗ್ರೆಸ್, ಬೂತ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಮತಯಂತ್ರಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿದೆ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.