ಅವಧಿಗೆ ಮುನ್ನವೇ ಲೋಕಸಭೆ ಚುನಾವಣೆ?


Team Udayavani, Jun 29, 2018, 6:00 AM IST

hd-devegowda-750.jpg

ನವದೆಹಲಿ/ಬೆಂಗಳೂರು: ಇದೇ ನವೆಂಬರ್‌ ಅಥವಾ ಡಿಸೆಂಬರ್‌ನಲ್ಲಿ ಲೋಕಸಭೆ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ಭವಿಷ್ಯ ನುಡಿದಿದ್ದಾರೆ.

ದೆಹಲಿ ಪ್ರವಾಸದಲ್ಲಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರ ಸಿದ್ಧತೆಗಳನ್ನು ನೋಡಿದರೆ, ಈ ರೀತಿಯ ಅನುಮಾನ ಕಾಣುತ್ತಿದೆ ಎಂದು ಹೇಳಿದ್ದಾರೆ. ಜತೆಗೆ, ಶೀಘ್ರದಲ್ಲೇ ತೃತೀಯ ರಂಗ ಕಟ್ಟಿಕೊಳ್ಳಬೇಕಾಗಿದೆ ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ.

ಈ ವರ್ಷಾಂತ್ಯದಲ್ಲಿ ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆಗಳು ನಡೆಯಲಿದ್ದು, ಜತೆಗೇ ಲೋಕಸಭೆ ಚುನಾವಣೆಯೂ ನಡೆಯಬಹುದು. ಮುಂಗಾರು ಅಧಿವೇಶನವೇ ಪ್ರಸಕ್ತ ಸಂಸತ್ತಿನ ಕಡೆಯ ಅಧಿವೇಶನವಾದರೂ ಅಚ್ಚರಿಯಿಲ್ಲ ಎಂದು ತಿಳಿಸಿದರು.

ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಬಂದಿದ್ದ ಎಲ್ಲರೂ ಒಟ್ಟಾಗಿ ಚುನಾವಣೆ ಎದುರಿಸುತ್ತಾರೆ ಎಂಬುದು ಸರಿಯಲ್ಲ. ಮೈತ್ರಿ ಏನಿದ್ದರೂ ಆಯಾ ರಾಜ್ಯಗಳ ಲೆಕ್ಕಾಚಾರಗಳಿಗೆ ಅನುಗುಣವಾಗಿ ನಿರ್ಧಾರವಾಗುತ್ತದೆ ಎಂದು ಹೇಳಿದರು. ಉತ್ತರ ಪ್ರದೇಶದಲ್ಲಿ ಅಖೀಲೇಶ್‌ ಮತ್ತು ಮಾಯಾವತಿ ಸೀಟು ಹಂಚಿಕೆ ಬಗ್ಗೆ ಮಾತುಕತೆ ನಡೆಸುತ್ತಿದ್ದಾರೆ. ಬಿಹಾರದಲ್ಲೂ ಬೇರೆ ರೀತಿಯ ಬೆಳವಣಿಗೆಗಳಾಗುತ್ತಿವೆ. ಈ ಎಲ್ಲದರ ನಡುವೆ ಬಹುಬೇಗನೇ ತೃತೀಯ ರಂಗ ನಿರ್ಮಾಣವಾಗಬೇಕಿದೆ ಎಂದು ಹೇಳಿದರು.

ರಾಜ್ಯದಲ್ಲೂ ಬಿಎಸ್‌ಪಿ ಜತೆ ಮೈತ್ರಿ ಮುಂದುವರಿಸುತ್ತೇವೆ. ಒಂದು ಸ್ಥಾನ ಬಿಟ್ಟುಕೊಡಲು ನಿರ್ಧರಿಸಿದ್ದೇವೆ. ಹಾಗೆಯೇ ಉತ್ತರ ಪ್ರದೇಶದಲ್ಲೂ ಜೆಡಿಎಸ್‌ ಪ್ರಧಾನ ಕಾರ್ಯದರ್ಶಿ ಡ್ಯಾನಿಷ್‌ ಅಲಿ ಸ್ಪರ್ಧೆಗೆ ಅವಕಾಶ ಕೋರಲಾಗಿದೆ. ಆದರೆ, ಕಾಂಗ್ರೆಸ್‌ ಜತೆಗೆ ಸೀಟು ಹೊಂದಾಣಿಕೆ ಬಗ್ಗೆ ಇನ್ನೂ ಚರ್ಚೆ ಆಗಿಲ್ಲ ಎಂದು ದೇವೇಗೌಡರು ತಿಳಿಸಿದರು.

ಎನ್‌ಡಿಎ ಹೊರತಾದ ನಾಯಕರ ಭೇಟಿ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯೇತರ ಮೈತ್ರಿಕೂಟ ರಚಿಸುವ ಬಗ್ಗೆ ಪ್ರಯತ್ನ ನಡೆಯುತ್ತಿದ್ದು, ಕೆಲವೇ ದಿನಗಳಲ್ಲಿ ಎನ್‌ಡಿಎ ಹೊರತಾದ ಎಲ್ಲಾ ಪಕ್ಷಗಳ ನಾಯಕರನ್ನು ಭೇಟಿ ಮಾಡಲಿದ್ದೇನೆ.  ಬಿಹಾರದಲ್ಲಿ ಆರ್‌ಜೆಡಿ ಮತ್ತು ಜೆಡಿಯು ನಾಯಕ ನಿತೀಶ್‌ಕುಮಾರ್‌ ಒಂದಾಗಲಿದ್ದಾರೆ ಎಂದು ಹೇಳಿದರು.

ಮಹಾಮೈತ್ರಿಕೂಟದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಸೇರಿಸಿಕೊಳ್ಳಲು ಕೆಲವು ಪಕ್ಷಗಳು ವಿರೋಧ ವ್ಯಕ್ತಪಡಿಸುತ್ತಿರುವ ಬಗ್ಗೆ ಮತ್ತು ಕಾಂಗ್ರೆಸ್‌ ಜತೆ ಮೈತ್ರಿಕೂಟದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಹೇಳುತ್ತಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಕರ್ನಾಟಕದ ಮಟ್ಟಿಗೆ ಇದು ಸಾಧ್ಯವಿಲ್ಲ. ಈಗಾಗಲೇ ನಾವು ಕಾಂಗ್ರೆಸ್‌ ಜತೆ ಮೈತ್ರಿ ಮಾಡಿಕೊಂಡಿದ್ದು, ಅದನ್ನು ಮುಂದುವರಿಸಲು ತೀರ್ಮಾನಿಸಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಸರ್ಕಾರದ ಬಗ್ಗೆ ಅನುಮಾನ ಬೇಡ
ಸಮ್ಮಿಶ್ರ ಸರ್ಕಾರ ರಚನೆ ಕುರಿತು ಮಾತುಕತೆ ಆಗಿರುವುದು ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಡುವೆ. ಈ ಬಗ್ಗೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿ ಚರ್ಚೆ ಮಾಡುತ್ತಾರೆ ಎನ್ನುವ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದೇವೇಗೌಡರು ಟಾಂಗ್‌ ನೀಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರದ ಸ್ಥಿರತೆ ಬಗ್ಗೆ ಅನುಮಾನ ವ್ಯಕ್ತಪಡಿಸುವ ಅಗತ್ಯವಿಲ್ಲ. ಮಿತ್ರ ಪಕ್ಷಗಳಲ್ಲಿ ಸಣ್ಣ ಪುಟ್ಟ ಸಮಸ್ಯೆಗಳಿದ್ದರೆ ಉಭಯ ಪಕ್ಷಗಳ ಮುಖಂಡರು ಚರ್ಚಿಸಿ ಬಗೆಹರಿಸಿಕೊಳ್ಳುತ್ತಾರೆ ಎಂದು ಹೇಳಿದರು.

ಟಾಪ್ ನ್ಯೂಸ್

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.