ಎಸ್ಟಿಗೆ ತಳವಾರ, ಸಿದ್ದಿ , ಪರಿವಾರ ಸೇರ್ಪಡೆ
ಮಸೂದೆಗೆ ಸಂಸತ್ ಅನುಮೋದನೆ
Team Udayavani, Feb 12, 2020, 6:55 AM IST
ಹೊಸದಿಲ್ಲಿ: ಧಾರವಾಡ, ಉತ್ತರ ಕನ್ನಡ ಜಿಲ್ಲೆ, ಬೆಳಗಾವಿಯ ಸಿದ್ಧಿ, ಪರಿವಾರ ಮತ್ತು ತಳವಾರ ಸಮುದಾಯವನ್ನು ಪರಿಶಿಷ್ಟ ಪಂಗಡಗಳಿಗೆ ಸೇರಿಸುವ ಮಸೂದೆಗೆ ಮಂಗಳವಾರ ಸಂಸತ್ನ ಅನುಮೋದನೆ ಸಿಕ್ಕಿದೆ.
ಇದಕ್ಕೆ ಸಂಬಂಧಿಸಿದ ಸಂವಿಧಾನ ತಿದ್ದುಪಡಿ (ಪರಿಶಿಷ್ಟ ಪಂಗಡ) ಮಸೂದೆ 2019 ಅನ್ನು ಲೋಕಸಭೆಯಲ್ಲಿ ಧ್ವನಿ ಮತದಿಂದ ಅಂಗೀಕರಿಸಲಾಗಿದೆ. ರಾಜ್ಯ ಸಭೆಯಲ್ಲಿ ಈ ಮಸೂದೆಗೆ ಈ ಹಿಂದೆಯೇ ಅನುಮೋದನೆ ನೀಡ ಲಾಗಿತ್ತು. ಈ ಬಗ್ಗೆ ಮಾತನಾಡಿದ ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ, ಇದು ಒಂದು ರಾಜ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು ಮಾಡಿದ ತಿದ್ದುಪಡಿಯಲ್ಲ. ಇತರ ರಾಜ್ಯಗಳಿಂದ ಪರಿಶಿಷ್ಟ ಪಂಗಡ ವ್ಯಾಪ್ತಿಗೆ ಸೇರ್ಪಡೆ ಗೊಳಿಸಬೇಕಾಗಿರುವ ಜಾತಿ ಗಳನ್ನು ಸೇರಿಸಲೂ ಅವಕಾಶ ಇದೆ ಎಂದಿದ್ದಾರೆ.
ಶಿವಸೇನೆಯ ಅರವಿಂದ ಸಾವಂತ್ ಮತ್ತು ಎನ್ಸಿಪಿಯ ಸುಪ್ರಿಯಾ ಸುಳೆ ಮಹಾರಾಷ್ಟ್ರದಲ್ಲಿನ ಧಂಗಾರ್ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸ ಬೇಕೆಂದು ಒತ್ತಾಯಿಸಿದ್ದಾರೆ. ತಮಿಳುನಾಡಿನ ಸಂಸದರೂ ಕೂಡ ಇದೇ ಮಾದರಿಯ ಬೇಡಿಕೆ ಮುಂದಿಟ್ಟರು. ಇದೇ ವೇಳೆ ಮರಾಠಿ ಭಾಷಿಕರಿಗೆ ಬೆಳಗಾವಿಯಲ್ಲಿ ಅನ್ಯಾಯ ಮಾಡಲಾಗುತ್ತಿದೆ ಎಂದು ಶಿವಸೇನೆಯ ಅರವಿಂದ ಸಾವಂತ್ ದೂರಿದರು. ರಾಸಾಯನಿಕ ಮತ್ತು ರಸಗೊಬ್ಬರಗಳ ಖಾತೆ ಸಚಿವ ಡಿ.ವಿ. ಸದಾನಂದ ಗೌಡ ಆಕ್ಷೇಪ ವ್ಯಕ್ತಪಡಿಸಿ, ಬೆಳಗಾವಿ ಗಡಿ ವಿಚಾರ ಇನ್ನೂ ಸುಪ್ರೀಂಕೋರ್ಟ್ನಲ್ಲಿ ವಿಚಾರಣೆಯ ಹಂತದಲ್ಲಿದೆ. ಹೀಗಾಗಿ ಅದರ ಪ್ರಸ್ತಾವ ಬೇಡ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
MUST WATCH
ಹೊಸ ಸೇರ್ಪಡೆ
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು