ಸಂಸದರ ವೇತನ ಕಡಿತ ಮಸೂದೆಗೆ ಸಂಸತ್ ಅಸ್ತು!
Team Udayavani, Sep 15, 2020, 8:12 PM IST
ಹೊಸದಿಲ್ಲಿ: ಪ್ರತೀ ಬಾರಿಯೂ ಯಾವುದೇ ಚರ್ಚೆ ಇಲ್ಲದೇ, ಗದ್ದಲ-ಗಲಾಟೆಗಳಿಲ್ಲದೇ ಸರ್ವಾನುಮತದಿಂದ ಸಂಸತ್ತಿನಲ್ಲಿ ಪಾಸ್ ಆಗುತ್ತಿದ್ದ ಮಸೂದೆ ಎಂದರೆ ಅದು ಸಂಸದರ ವೇತನ ಮತ್ತು ಭತ್ಯೆ ಏರಿಕೆಯ ಮಸೂದೆ!
ಆದರೆ ಕೋವಿಡ್ 19 ಸಂಕಷ್ಟಕ್ಕೆ ಈ ಬಾರಿ ಸಂಸದರೂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ಇದರ ಪರಿಣಾಮವಾಗಿ ತಮ್ಮ ಒಂದು ವರ್ಷದ ಅವಧಿಯ ವೇತನದಿಂದ 30% ಕಡಿತ ಮಾಡಲು ಸಂಸತ್ ಸದಸ್ಯರು ಇಂದು ಒಮ್ಮತದ ತೀರ್ಮಾನಕ್ಕೆ ಬಂದಿದ್ದಾರೆ.
ಈ ಕುರಿತಾಗಿ ಸಂಸತ್ತಿನಲ್ಲಿ ಮಂಡಿಸಲಾಗಿದ್ದ ಸಂಸತ್ ಸದಸ್ಯರ ವೇತನ, ಭತ್ಯೆಗಳು ಮತ್ತು ಪಿಂಚಣಿ (ತಿದ್ದುಪಡಿ) ಮಸೂದೆ, 2020ಕ್ಕೆ ಅಂಗೀಕಾರ ದೊರೆತಿದೆ.
ಸೋಮವಾರದಂದು ಈ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಲಾಗಿತ್ತು. ಈ ವರ್ಷದ ಪ್ರಾರಂಭದಲ್ಲಿ ಕೇಂದ್ರ ಸರಕಾರವು ‘ಸಚಿವರ ವೇತನ ಮತ್ತು ಭತ್ಯೆಗಳು (ತಿದ್ದುಪಡಿ) ಸುಗ್ರೀವಾಜ್ಞೆ, 2020ರ ಮೂಲಕ ಪ್ರತೀ ಕೇಂದ್ರ ಸಚಿವರ ಒಂದು ವರ್ಷದ ವೇತನದಲ್ಲಿ 30% ಕಡಿತ ಮಾಡುವ ನಿರ್ಧಾರವನ್ನು ಮಾಡಿತ್ತು ಮತ್ತು ಈ ಕಡಿತ ಕಳೆದ ಎಪ್ರಿಲ್ 01ರಿಂದ ಜಾರಿಗೆ ಬರುವಂತೆ ಅನ್ವಯಗೊಳಿಸಲಾಗಿತ್ತು.
ಎಪ್ರಿಲ್ 5ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದಿದ್ದ ಕೇಂದ್ರ ಸಚಿವ ಸಂಪುಟದ ಸಭೆಯಲ್ಲಿ ಸಂಸತ್ ಸದಸ್ಯರು ಮತ್ತು ಸಚಿವರ ವೇತನ ತಿದ್ದುಪಡಿ ಮಾಡುವ ಸುಗ್ರೀವಾಜ್ಞೆಗೆ ಒಪ್ಪಿಗೆ ನಿಡಲಾಗಿತ್ತು. ಇದರ ಪ್ರಕಾರ ಸಂಸತ್ ಸದಸ್ಯರು ಹಾಗೂ ಕೇಂದ್ರ ಸಚಿವರ ಭತ್ಯೆ ಹಾಗೂ ಪಿಂಚಣಿ ಮೊತ್ತದಲ್ಲಿ 30% ಕಡಿತ ಮಾಡುವ ನಿರ್ಧಾರಕ್ಕೆ ಬರಲಾಗಿತ್ತು.
ಮತ್ತು ಇದೇ ಸಂಪುಟ ಸಭೆಯಲ್ಲಿ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯನ್ನೂ ಸಹ ಮುಂದಿನ ಎರಡು ವರ್ಷಗಳ ಕಾಲ ರದ್ದು ಮಾಡುವ ನಿರ್ಧಾರವನ್ನು ಕೈಗೊಳ್ಳಲಾಗಿತ್ತು. ಮತ್ತು ಈ ಮೊತ್ತವನ್ನು ಸರಕಾರದ ಸಮಗ್ರ ನಿಧಿಗೆ ವರ್ಗಾಯಿಸುವ ನಿರ್ಧಾರವನ್ನೂ ಸಹ ಈ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿತ್ತು.
ಸಂಸದರ ವೇತನ ಕಡಿತ ಮಸೂದೆಗೆ ಕೆಳಮನೆಯ ಅನುಮೋದನೆ ದೊರೆತ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಮಾಹಿತಿ ಹಾಗೂ ಪ್ರಸಾರ ಖಾತೆಯ ಸಚಿವ ಪ್ರಕಾಶ್ ಜಾಬ್ಡೇಕರ್ ಅವರು, ರಾಷ್ಟ್ರಪತಿ ರಮಾನಾಥ್ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಮತ್ತು ಎಲ್ಲಾ ರಾಜ್ಯಗಳ ರಾಜ್ಯಪಾಲರೂ ಸಹ ತಮ್ಮ ತಮ್ಮ ವೇತನದ 30% ಕಡಿತಗೊಳಿಸುವಂತೆ ಕೇಳಿಕೊಂಡಿದ್ದಾರೆ ಎಂಬ ಮಾಹಿತಿಯನ್ನು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
MUST WATCH
ಹೊಸ ಸೇರ್ಪಡೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ