ಅಂಟಾರ್ಟಿಕ್‌ ವಿಧೇಯಕ ಲೋಕಸಭೆಯಲ್ಲಿ ಪಾಸ್‌: ಗಲಾಟೆಯಿಂದ ಎರಡೂ ಸದನಗಳ ಕಲಾಪ ಮುಂದೂಡಿಕೆ

ರಾಜ್ಯಸಭೆಯಲ್ಲಿ ಗದ್ದಲದ ನಡುವೆ ಪ್ರಶ್ನೋತ್ತರ ಅವಧಿ

Team Udayavani, Jul 23, 2022, 1:35 AM IST

ಅಂಟಾರ್ಟಿಕ್‌ ವಿಧೇಯಕ ಲೋಕಸಭೆಯಲ್ಲಿ ಪಾಸ್‌: ಗಲಾಟೆಯಿಂದ ಎರಡೂ ಸದನಗಳ ಕಲಾಪ ಮುಂದೂಡಿಕೆ

ಹೊಸದಿಲ್ಲಿ: ಬೆಲೆಯೇರಿಕೆ, ಜಿಎಸ್‌ಟಿ ಹೆಚ್ಚಳ ಕುರಿತು ಚರ್ಚೆಗೆ ಆಗ್ರಹಿಸಿ ಪ್ರತಿಪಕ್ಷಗಳ ಗದ್ದಲ ಮುಂದುವರಿದಿರುವಂತೆಯೇ ಲೋಕಸಭೆಯಲ್ಲಿ ಶುಕ್ರವಾರ ಭಾರತೀಯ ಅಂಟಾರ್ಟಿಕ್‌ ವಿಧೇಯಕ, 2022 ಅಂಗೀಕಾರಗೊಂಡಿದೆ.

ವಿಧೇಯಕ ಅಂಗೀಕೃತಗೊಂಡ ಬೆನ್ನಲ್ಲೇ ಸದನದ ಕಲಾಪವನ್ನು ಸೋಮವಾರದವರೆಗೆ ಮುಂದೂಡಿಕೆ ಮಾಡಲಾಗಿದೆ.

ರಾಜ್ಯಸಭೆಯಲ್ಲೂ ವಿಪಕ್ಷಗಳ ಗದ್ದಲ ಮುಂದುವರಿದ ಕಾರಣ, ಕಲಾಪ ಮುಂದೂಡಲ್ಪಟ್ಟಿದೆ.

ಅಂಟಾರ್ಟಿಕ್‌ ವಲಯದಲ್ಲಿ ಭಾರತವು ನಿರ್ಮಿಸಿರುವ ಸಂಶೋಧನಾ ಕೇಂದ್ರಗಳಿಗೆ ದೇಶೀಯ ಕಾನೂನು ಅನ್ವಯವಾಗುವಂತೆ ಮಾಡುವುದು ಈ ವಿಧೇಯಕದ ಉದ್ದೇಶ. ಸದ್ಯ ಅಂಟಾರ್ಟಿಕಾದಲ್ಲಿ ಭಾರತವು ಮೈತ್ರಿ ಮತ್ತು ಭಾರತಿ ಎಂಬ ಎರಡು ಸಕ್ರಿಯ ಸಂಶೋಧನಾ ಕೇಂದ್ರಗಳನ್ನು ಹೊಂದಿದೆ. ಅಲ್ಲಿ ವಿಜ್ಞಾನಿಗಳು ವಿವಿಧ ಸಂಶೋಧನೆಯಲ್ಲಿ ತೊಡಗಿದ್ದಾರೆ. ಅಂಟಾರ್ಟಿಕ್‌ ಖಂಡದ ಪರಿಸರದ ಸಂರಕ್ಷಣೆ ಮತ್ತು ಸಂಶೋಧನಾ ಕಾರ್ಯದ ಕ್ಷೇಮಾಭಿವೃದ್ಧಿಗಾಗಿ ನಿಧಿಯೊಂದನ್ನು ಸ್ಥಾಪಿಸುವ ಪ್ರಸ್ತಾವವೂ ವಿಧೇಯಕದಲ್ಲಿದೆ.

ಮೋದಿ ನೇತೃತ್ವದ ಸಭೆ: ಸಂಸತ್‌ ಕಲಾಪಗಳು ವ್ಯರ್ಥವಾಗಿರುವಂತೆಯೇ ಪ್ರಧಾನಿ ಮೋದಿ ಅವರು ಶುಕ್ರವಾರ ತಮ್ಮ ಸಂಪು ಟದ ಪ್ರಮುಖ ಸಚಿವರೊಂದಿಗೆ ಸಭೆ ಯೊಂದನ್ನು ನಡೆಸಿದ್ದಾರೆ. ಅದರಲ್ಲಿ ಸಂಸತ್‌ನಲ್ಲಿ ಸರಕಾರದ ಕಾರ್ಯತಂತ್ರದ ಕುರಿತು ಚರ್ಚಿಸಲಾಗಿದೆ. ಸಭೆಯಲ್ಲಿ ಸಚಿವರಾದ ರಾಜನಾಥ್‌ ಸಿಂಗ್‌, ಅಮಿತ್‌ ಶಾ, ಪ್ರಹ್ಲಾದ್‌ ಜೋಷಿ, ಅನುರಾಗ್‌ ಠಾಕೂರ್‌, ಪಿಯೂಷ್‌ ಗೋಯಲ್‌, ರಿಜಿಜು ಭಾಗಿಯಾಗಿದ್ದರು.

ವಿಪಕ್ಷಗಳಿಂದ ಪ್ರತಿಭಟನೆ: ಅತ್ಯಗತ್ಯ ವಸ್ತುಗಳ ಜಿಎಸ್‌ಟಿ ಹೆಚ್ಚಳವನ್ನು ಸರಕಾರ ವಾಪಸ್‌ ಪಡೆಯಬೇಕೆಂದು ಆಗ್ರಹಿಸಿ ಶುಕ್ರವಾರ ವಿವಿಧ ವಿಪಕ್ಷಗಳ ನಾಯ ಕರು ಸಂಸತ್‌ನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಕಾಂಗ್ರೆಸ್‌, ಎನ್‌ಸಿಪಿ, ಸಿಪಿಐ, ಸಿಪಿಎಂ, ಶಿವ ಸೇನೆ, ಡಿಎಂಕೆ, ಆರ್‌ಎಸ್‌ಪಿ ಸೇರಿದಂತೆ ಹಲವು ಪಕ್ಷಗಳು ಸಂಸತ್‌ ಭವನದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಮುಂದೆ ಧರಣಿ ನಡೆಸಿ, ಘೋಷಣೆ ಕೂಗಿದ್ದಾರೆ.

ರಾಜ್ಯಸಭೆಯಲ್ಲಿ ಬೆಳಗ್ಗೆ ಕಲಾಪ ಶುರುವಾದ ಅನಂತರ ವಿಪಕ್ಷಗಳು ಗದ್ದಲ ಆರಂಭಿಸಿದವು. ಅದರ ಪರಿಣಾಮ, ಮಧ್ಯಾಹ್ನ ಊಟದ ಬಿಡುವಿಗೂ ಮುನ್ನ ಎರಡು ಬಾರಿ ಕಲಾಪವನ್ನು ಮುಂದೂಡಲಾ ಯಿತು. ವಿಪಕ್ಷಗಳ ತೀವ್ರ ಗದ್ದಲದ ನಡುವೆಯೂ ರಾಜ್ಯಸಭೆಯ ಡೆಪ್ಯುಟಿ ಸ್ಪೀಕರ್‌ ಹರಿವಂಶ್‌ ನಾರಾಯಣ್‌ ಸಿಂಗ್‌, ದಿನದ ಪ್ರಶ್ನೋತ್ತರ ಅವಧಿಯನ್ನು ಪೂರ್ಣ ಗೊಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಸಚಿವ ಪಿಯೂಶ್‌ ಗೋಯೆಲ್‌, ಬೆಲೆಯೇರಿಕೆ ವಿಚಾರದ ಬಗ್ಗೆ ಚರ್ಚೆಗೆ ಸಿದ್ಧವಿ ರುವುದಾಗಿ ಹೇಳಿದರು. ಆದರೆ, ವಿಪಕ್ಷ ಗಳು ಇದನ್ನು ಒಪ್ಪಲಿಲ್ಲ. ಬದಲಿಗೆ, ವಿಪಕ್ಷಗಳು ಕೂಡಲೇ ಜಿಎಸ್‌ಟಿ ಆದೇಶ ವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿದವು.

 

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.