ಆರ್ಟಿಐ ತಿದ್ದುಪಡಿ ಕಾಯ್ದೆಗೆ ಲೋಕಸಭೆ ಅನುಮೋದನೆ
Team Udayavani, Jul 23, 2019, 5:00 AM IST
ನವದೆಹಲಿ: ವಿಪಕ್ಷಗಳ ವಿರೋಧದ ನಡುವೆಯೂ ಮಾಹಿತಿ ಹಕ್ಕು ಕಾಯ್ದೆ ತಿದ್ದುಪಡಿಗೆ ಲೋಕಸಭೆ ಸೋಮವಾರ ಅನುಮೋದನೆ ನೀಡಿದೆ. ತಿದ್ದುಪಡಿ ಕಾಯ್ದೆಯ ಪ್ರಕಾರ ಮಾಹಿತಿ ಆಯುಕ್ತರ ಸಂಬಳ ಹಾಗೂ ಸೇವಾವಧಿಯನ್ನು ಕೇಂದ್ರ ಸರ್ಕಾರ ನಿರ್ಧರಿಸಲಿದೆ.
ಈವರೆಗೆ ಮಾಹಿತಿ ಆಯುಕ್ತರನ್ನು ಚುನಾವಣಾ ಆಯುಕ್ತರಿಗೆ ಸಮಾನ ಮಾನ್ಯತೆ ನೀಡಲಾಗುತ್ತಿತ್ತು. ಇದರಿಂದಾಗಿ ಮಾಹಿತಿ ಆಯೋಗವು ಹಲ್ಲಿಲ್ಲದ ಹಾವಿನಂತಾಗುತ್ತದೆ ಎಂದು ವಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿವೆ. ಇದನ್ನು ಸಮರ್ಥಿಸಿಕೊಂಡ ಕೇಂದ್ರ ಸರ್ಕಾರ, ತಿದ್ದುಪಡಿಯಲ್ಲಿ ಪಾರದರ್ಶಕತೆ ಮತ್ತು ಸ್ವಾಯತ್ತತೆಯ ಬಗ್ಗೆ ಯಾವುದೇ ಬದಲಾವಣೆ ಮಾಡಿಲ್ಲ ಎಂದಿದೆ.
ತಿದ್ದುಪಡಿಗೆ ವಿರೋಧಿಸಿದ ವಿಪಕ್ಷಗಳು, ಮತಕ್ಕೆ ಹಾಕಬೇಕೆಂದು ಆಗ್ರಹಿಸಿದರು. ಆಗ 218-79 ಮತಗಳಿಂದ ವಿಪಕ್ಷಗಳಿಗೆ ಸೋಲಾಯಿತು. ಇದಕ್ಕೆ ಸ್ಪಷ್ಟನೆ ಬೇಕೆಂದು ಕಾಂಗ್ರೆಸ್ ಲೋಕಸಭೆ ನಾಯಕ ಅಧಿರ್ ರಂಜನ್ ಚೌಧರಿ ಪ್ರತಿಭಟಿಸಿದರಾದರೂ, ಸ್ಪೀಕರ್ ಅನುವು ಮಾಡಲಿಲ್ಲ. ಇದರಿಂದ ಸಿಟ್ಟಾದ ವಿಪಕ್ಷ ಸದಸ್ಯರು ಸಭಾತ್ಯಾಗ ಮಾಡಿದರು.
ಆ್ಯಂಬ್ಯುಲೆನ್ಸ್ ಚಾಲಕರಿಗೆ ತರಬೇತಿ: ಅಪಘಾತದ ಸಮಯದಲ್ಲಿ ತುರ್ತಾಗಿ ಆಸ್ಪತ್ರೆಗೆ ದಾಖಲಿಸುವುದರ ಜೊತೆಗೆ ಪ್ರಥಮ ಚಿಕಿತ್ಸೆಯನ್ನು ಅಪಘಾತದ ಸ್ಥಳದಲ್ಲೇ ಒದಗಿಸುವುದಕ್ಕಾಗಿ ಆಂಬುಲೆನ್ಸ್ ಚಾಲಕರಿಗೆ ಪ್ರಥಮ ಚಿಕಿತ್ಸೆ ತರಬೇತಿಯನ್ನು ನೀಡಲಾಗುತ್ತದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಲೋಕಸಭೆಗೆ ಸೋಮವಾರ ತಿಳಿಸಿದ್ದಾರೆ. ಪ್ರತಿ ವರ್ಷ 1.5 ಲಕ್ಷ ಜನರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪುತ್ತಿದ್ದಾರೆ. ವಿಶ್ವದಲ್ಲೇ ಇದು ಅತಿ ಹೆಚ್ಚಿನ ಸಂಖ್ಯೆಯಾಗಿದೆ. ಬಹುತೇಕ ಪ್ರಕರಣಗಳಲ್ಲಿ ಮೊದಲ ಒಂದು ಗಂಟೆಯಲ್ಲಿ ಸೂಕ್ತ ಚಿಕಿತ್ಸೆ ಇಲ್ಲದೇ ಸಾವು ಸಂಭವಿಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ