ಶನಿವಾರದಿಂದ ಭಕ್ತರಿಗೆ ದರ್ಶನ ನೀಡಲಿದ್ದಾನೆ ಬಾಲಾಜಿ
Team Udayavani, Jun 5, 2020, 8:29 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ತಿರುಪತಿ: ಲಾಕ್ಡೌನ್ನಿಂದಾಗಿ ಬಂದ್ ಆಗಿದ್ದ ವಿಶ್ವಪ್ರಸಿದ್ಧ ತಿರುಮಲ ಶ್ರೀ ವೆಂಕಟೇಶ್ವರ ದೇವಸ್ಥಾನ ಶನಿವಾರದಿಂದ ತೆರೆದುಕೊಳ್ಳಲಿದೆ.
ಬೆಳಗ್ಗೆ 6.30ರಿಂದ ರಾತ್ರಿ 7.30ರವರೆಗೆ 3 ಸಾವಿರ ಆನ್ಲೈನ್ ಟಿಕೆಟ್ಗಳೂ ಸೇರಿದಂತೆ ಭಕ್ತರ ದರ್ಶನಕ್ಕೆ ಅವಕಾಶ ಸಿಗಲಿದೆ.
ಒಂದು ಗಂಟೆಗೆ 500 ಭಕ್ತರ ದರ್ಶನಕ್ಕೆ ದೇಗುಲದೊಳಕ್ಕೆ ಪ್ರವೇಶ ಮಾಡಿ ಕೊಡಲಾಗುವುದು ಎಂದು ತಿರುಮಲ ತಿರುಪತಿ ದೇವಸ್ಥಾನಂ ಮಂಡಳಿಯ (ಟಿಟಿಡಿ) ಮುಖ್ಯಸ್ಥ ವೈ.ವಿ. ಸುಬ್ಟಾ ರೆಡ್ಡಿ ಹೇಳಿದ್ದಾರೆ.
ದೇಗುಲದೊಳಗೆ ಸಾಮಾಜಿಕ ಅಂತರ ಕಾಪಾಡಲು ವ್ಯವಸ್ಥೆ ಮಾಡಲಾಗಿದೆ. ಮಾಸ್ಕ್ ಹಾಕಿಕೊಳ್ಳುವುದು ಕಡ್ಡಾಯವಾಗಿದೆ.
ನಿತ್ಯ 3 ಸಾವಿರ ಮಂದಿ ಭಕ್ತರು ಬೆಟ್ಟ ಹತ್ತಲು ಅನುವು ಮಾಡಿಕೊಡಲಾಗುವುದು. ಬೆಟ್ಟವೇರಿದ ಬಳಿಕ ಅವರಿಗೆ ಜ್ವರ ತಪಾಸಣೆ ಇತ್ಯಾದಿ ನಡೆಯಲಿವೆ. ದೇಗುಲ ಪ್ರವೇಶಿಸುವ ಭಕ್ತರನ್ನು ಥರ್ಮಲ್ ಸ್ಕ್ಯಾನರ್ ಮೂಲಕ ಪರೀಕ್ಷಿಸಲಾಗುತ್ತದೆ.
ದೇಗುಲಕ್ಕೆ ಆಗಮಿಸುವ ಭಕ್ತರ ಗಂಟಲು ದ್ರವವನ್ನು ಸ್ವಯಂಪ್ರೇರಿತವಾಗಿ ಯಾದೃಚ್ಛಿಕ ವಿಧಾನದಲ್ಲಿ ಪಡೆದು ಕೋವಿಡ್ ಪರೀಕ್ಷೆಗೆ ಕಳುಹಿಸಲು ಉದ್ದೇಶಿಸಲಾಗಿದೆ.
ಶನಿವಾರದಂದು ದೇಗುಲ ತೆರೆದರೂ ಆರಂಭದಲ್ಲಿ ಟಿಟಿಡಿ ಸಿಬಂದಿಗೆ ಮಾತ್ರ ದೇಗುಲಕ್ಕೆ ಪ್ರವೇಶವಿರಲಿದೆ. ಈ ವೇಳೆ ಕೈಗೊಳ್ಳುವ ಸುರಕ್ಷತಾ ಕ್ರಮಗಳ ಬಗ್ಗೆ ಪ್ರಾಯೋಗಿಕವಾಗಿ ಪರಿಶೀಲನೆ ನಡೆಯಲಿದೆ. ಜೂ.8 ಮತ್ತು 9ರಂದು ತಿರುಪತಿ ನಿವಾಸಿಗಳಿಗೆ ಮಾತ್ರ ಅವಕಾಶ ಇರಲಿದೆ. ಜೂ.11ರ ಬಳಿಕ ರಾಜ್ಯದ ಭಕ್ತರಿಗೆ ಅವಕಾಶವಿರಲಿದೆ.
ಜೂ.8ರಿಂದ 10ರವರೆಗೆ ಜನಸಂದಣಿ ಸೇರುವಾಗ ಹೇಗಿರುತ್ತದೆ ಎಂಬುದನ್ನು ದೇಗುಲ ಆಡಳಿತ ಗಮನಿಸಲಿದೆ. ಇದರೊಂದಿಗೆ ಹುಂಡಿ ಸಲ್ಲಿಕೆ, ಲಡ್ಡು ಪ್ರಸಾದ ವಿತರಣೆಯಲ್ಲಿನ ವ್ಯವಸ್ಥೆಯ ಬಗ್ಗೆಯೂ ಗಮನವಿಡಲಾಗುವುದು ಎಂದು ದೇಗುಲ ಆಡಳಿತ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ