2019ರ ಚುನಾವಣೆ ಗೆಲ್ಲಲು ಬಿಜೆಪಿಗೆ ಶ್ರೀರಾಮ ನೆರವಾಗಲಾರ: ಫಾರೂಕ್
Team Udayavani, Nov 1, 2018, 4:09 PM IST
ಹೊಸದಿಲ್ಲಿ : ಅಯೋಧ್ಯೆಯಲ್ಲಿ ರಾಮ ಮಂದಿ ನಿರ್ಮಿಸುವ ಕುರಿತಾದ ವಿವಾದ ಸಾಗುತ್ತಿರುವ ನಡುವೆಯೇ ಬಿಜೆಪಿ ವಿರುದ್ಧ ವಾಕ್ ದಾಳಿ ನಡೆಸಿರುವ ನ್ಯಾಶನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲ ಅವರು “2019ರ ಲೋಕಸಭಾ ಚುನಾವಣೆಯನ್ನು ಗೆಲ್ಲುವುದಕ್ಕೆ ಬಿಜೆಪಿಗೆ ಶ್ರೀರಾಮನು ಸಹಾಯ ಮಾಡುವುದಿಲ್ಲ’ ಎಂದು ಟೀಕಿಸಿದ್ದಾರೆ.
2019ರ ಲೋಕಸಭಾ ಚುನಾವಣೆಗೆ ಮುನ್ನ ದೇಶವನ್ನು ರಾಮ ಮಂದಿರ – ಬಾಬರಿ ಮಸೀದಿ ವಿಷಯದಲ್ಲಿ ವಿಭಜಿಸುವ ಹುನ್ನಾರವನ್ನು ಬಿಜೆಪಿ ಮಾಡುತ್ತಿದೆ ಎಂದು ಅನೇಕ ವಿರೋಧ ಪಕ್ಷಗಳು ಆರೋಪಿಸುತ್ತಿರುವ ನಡುವೆಯೇ ಫಾರೂಕ್ ಅಬ್ದುಲ್ಲ ಅವರು ಈ ಮಾತನ್ನು ಆಡಿರುವುದು ಗಮನಾರ್ಹವಾಗಿದೆ.
“ಚುನಾವಣೆಯಲ್ಲಿ ಮತ ಚಲಾಯಿಸುವವರು ಜನರೇ ವಿನಾ ಭಗವಾನ್ ರಾಮ ಅಥವಾ ಅಲ್ಲಾಹು ಅಲ್ಲ; ಅಂತೆಯೇ ಬಿಜೆಪಿಗೆ ಚುನಾವಣೆಯನ್ನು ಗೆಲ್ಲುವುದಕ್ಕೆ ಶ್ರೀರಾಮ ನೆರವಾಗುವುದಿಲ್ಲ’ ಎಂದು ಫಾರೂಕ್ ಹೇಳಿದರು.
ಕಳೆದ ವಾರ ಸುಪ್ರೀಂ ಕೋರ್ಟ್ ರಾಮಜನ್ಮ ಭೂಮಿ – ಬಾಬರಿ ಮಸೀದಿ ಪ್ರಕರಣದ ವಿಚಾರಣೆಯನ್ನು 2019ರ ಜನವರಿಗೆ ಮುಂದೂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
MUST WATCH
ಹೊಸ ಸೇರ್ಪಡೆ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ