ಬೆಲೆ ಏರಿಕೆ ಬಿಸಿ..: 50 ರೂ. ಏರಿಕೆ ಕಂಡ ಎಲ್ ಪಿಜಿ ಸಿಲಿಂಡರ್ ಬೆಲೆ!
Team Udayavani, Mar 22, 2022, 9:53 AM IST
ಹೊಸದಿಲ್ಲಿ: ಕಳೆದ ವರ್ಷದ ಅಕ್ಟೋಬರ್ ಆರಂಭದ ನಂತರ ಮೊದಲ ಬಾರಿಗೆ ಗೃಹ ಅಡುಗೆ ಅನಿಲ (ಎಲ್ಪಿಜಿ) ಬೆಲೆಯನ್ನು ಮಂಗಳವಾರ ಪ್ರತಿ ಸಿಲಿಂಡರ್ ಗೆ 50 ರೂ. ಹೆಚ್ಚಿಸಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ.
ಕಳೆದ ಬಾರಿ ಅಕ್ಟೋಬರ್ 6 ರಂದು ಎಲ್ಪಿಜಿ ಸಿಲಿಂಡರ್ ಗಳ ಬೆಲೆಯನ್ನು ಹೆಚ್ಚಿಸಲಾಗಿತ್ತು. ಸರ್ಕಾರಿ ತೈಲ ಕಂಪನಿಗಳು ಮಂಗಳವಾರ ಎಲ್ಪಿಜಿ ಸಿಲಿಂಡರ್ಗಳ ಹೊಸ ದರಗಳನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ 50 ರೂಪಾಯಿ ಏರಿಕೆಯಾಗಿದೆ.
ಮಾರ್ಚ್ 22ರಂದು ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ನ ಬೆಲೆಯು ಲಕ್ನೋದಲ್ಲಿ ರೂ 938 ರಿಂದ ರೂ 987.5 ಕ್ಕೆ ಏರಿಕೆಯಾಗಿದೆ. ದೆಹಲಿಯಲ್ಲಿ 14 ಕೆಜಿ ಗ್ಯಾಸ್ ಸಿಲಿಂಡರ್ 949.5 ರೂಪಾಯಿಗೆ ಏರಿಕೆ ಆಗಿದೆ. ಈ ಹಿಂದೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಒಂದು ಸಿಲಿಂಡರ್ ಬೆಲೆ 899.50 ರೂ ಆಗಿತ್ತು.
ದೆಹಲಿ ಹೊರತುಪಡಿಸಿ, ಇತರ ಮೆಟ್ರೋ ನಗರಗಳಲ್ಲಿ ಎಲ್ಪಿಜಿ ಬೆಲೆಗಳು ಬದಲಾಗಿವೆ. ಕೋಲ್ಕತ್ತಾದಲ್ಲಿ ಎಲ್ಪಿಜಿ ಸಿಲಿಂಡರ್ ಬೆಲೆ 926 ರಿಂದ 976 ರೂಪಾಯಿಗೆ ಏರಿಕೆಯಾಗಿದೆ. ಲಕ್ನೋದಲ್ಲಿ ಈಗ ಗೃಹೋಪಯೋಗಿ ಗ್ಯಾಸ್ ಸಿಲಿಂಡರ್ 987.5 ರೂ.ಗೆ ಏರಿಕೆ ಕಂಡಿದೆ.
ಇದನ್ನೂ ಓದಿ:ಬೆಂಗಳೂರಿನ 9 ಕಡೆ ಎಸಿಬಿ ದಾಳಿ; ಬಿಡಿಎ ಮಧ್ಯವರ್ತಿಗಳ ಮನೆ ಮೇಲೆ ಅಧಿಕಾರಿಗಳ ರೇಡ್!
ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ ಮಾತ್ರವಲ್ಲದೆ 5 ಕೆಜಿ ಮತ್ತು 10 ಕೆಜಿ ಸಿಲಿಂಡರ್ ಗಳ ಬೆಲೆಯನ್ನು ಹೆಚ್ಚಿಸಲಾಗಿದೆ. 5 ಕೆಜಿ ಎಲ್ಪಿಜಿ ಸಿಲಿಂಡರ್ 349 ರೂ.ಗೆ ಮತ್ತು 10 ಕೆಜಿ 669 ರೂ.ಗೆ ಏರಿಕೆಯಾಗಿದೆ. 19 ಕೆಜಿಯ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯೂ 2,003.50 ರೂ.ಗೆ ತಲುಪಿದೆ.
ಇದಲ್ಲದೆ ಪೆಟ್ರೋಲ್ ಮತ್ತು ಡೀಸಲ್ ಬೆಲೆಯಲ್ಲೂ ಏರಿಕೆಯಾಗಿದೆ. ಪೆಟ್ರೋಲ್ ಮತ್ತು ಡೀಸಲ್ ಬೆಲೆಯಲ್ಲಿ 80 ಪೈಸೆ ಏರಿಕೆಯಾಗಿದೆ. ಮಂಗಳವಾರ, ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 96.21 ಇದ್ದರೆ ಡೀಸೆಲ್ ದರವು ಲೀಟರ್ಗೆ 87.47 ರೂ. ಆಗಿದೆ. ಮುಂಬೈಯಲ್ಲಿ ಪೆಟ್ರೋಲ್ ಬೆಲೆ 110.82 ರೂ, ಚೆನ್ನೈನಲ್ಲಿ 102.16 ರೂ ಇದೆ.
ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದ ಬೆಲೆಗಳಿಂದ ಜನತೆಗೆ ಪರಿಹಾರ ನೀಡಲು ಕೇಂದ್ರವು ನವೆಂಬರ್ 4 ರಂದು ಅಬಕಾರಿ ಸುಂಕವನ್ನು ಕಡಿತಗೊಳಿಸಿತು. ಸರ್ಕಾರವು ಪ್ರತಿ ಲೀಟರ್ ಪೆಟ್ರೋಲ್ ಮೇಲಿನ ಸುಂಕವನ್ನು 5 ರೂ. ಮತ್ತು ಡೀಸೆಲ್ಗೆ 10 ರೂ. ರಷ್ಟು ಕಡಿತಗೊಳಿಸಿದ್ದು, ಇಂಧನ ಬೆಲೆಯಲ್ಲಿ ಗಣನೀಯ ಇಳಿಕೆಗೆ ಕಾರಣವಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ