ಬಡವರಿಗೆ ನೀಡುವ ಗ್ಯಾಸ್ ಸಬ್ಸಿಡಿ ರದ್ದಾಗಲ್ಲ: ಕೇಂದ್ರ
Team Udayavani, Aug 8, 2017, 6:20 AM IST
ಅಗರ್ತಲಾ: ಬಡ ಕುಟುಂಬಗಳಿಗೆ ನೀಡಲಾಗುವ ಎಲ್ಪಿಜಿ ಸಬ್ಸಿಡಿಯನ್ನು ರದ್ದು ಮಾಡುವುದಿಲ್ಲ, ಅದು ಈಗಿರುವಂತೆಯೇ ಮುಂದುವರಿಯುತ್ತದೆ ಎಂದು ಕೇಂದ್ರ ತೈಲ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.
ಇತ್ತೀಚೆಗೆ ಲೋಕಸಭೆಯಲ್ಲಿ, ಅಡುಗೆ ಅನಿಲ ಸಿಲಿಂಡರ್ ದರವನ್ನು ತಿಂಗಳಿಗೆ 4 ರೂ.ಗಳಂತೆ ಏರಿಸುತ್ತಾ ಸಾಗಿ, ಕ್ರಮೇಣ ಮಾರ್ಚ್ ವೇಳೆಗೆ ಸಂಪೂರ್ಣ ಸಬ್ಸಿಡಿ ರದ್ದು ಮಾಡುವಂತೆ ತೈಲ ಕಂಪನಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದ್ದ ಸಚಿವ ಪ್ರಧಾನ್ ಇದೀಗ ಉಲ್ಟಾ ಹೊಡೆದಿದ್ದಾರೆ.
ಎಲ್ಪಿಜಿ ಸಬ್ಸಿಡಿ ರದ್ದು ವಿಚಾರಕ್ಕೆ ಸಂಬಂಧಿಸಿ ದೇಶಾದ್ಯಂತ ಭಾರೀ ವಿರೋಧ ವ್ಯಕ್ತವಾದ ಬೆನ್ನಲ್ಲೇ ಪ್ರಧಾನ್ರಿಂದ ಈ ಪ್ರತಿಕ್ರಿಯೆ ಹೊರಬಿದ್ದಿದೆ. “ಅಡುಗೆ ಅನಿಲಕ್ಕೆ ಬಳಸುವ ಎಲ್ಪಿಜಿ ಸಿಲಿಂಡರ್ನ ಸಬ್ಸಿಡಿ ರದ್ದು ಮಾಡುವ ಯಾವುದೇ ಯೋಜನೆಯನ್ನು ಹಾಕಿಕೊಂಡಿಲ್ಲ. ಬಡವರು ಮತ್ತು ಜನಸಾಮಾನ್ಯರಿಗೆ ನೀಡಲಾಗುವ ಎಲ್ಪಿಜಿ ಮತ್ತು ಸೀಮೆಎಣ್ಣೆ ಮೇಲಿನ ಸಬ್ಸಿಡಿ ಮುಂದುವರಿಯುತ್ತದೆ,’ ಎಂದು ಪ್ರಧಾನ್ ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ