ಭೂಸೇನೆಗೆ ಎಂಜಿನಿಯರ್‌ ಮುಖ್ಯಸ್ಥ; ಮೊದಲ ಬಾರಿಗೆ ತಾಂತ್ರಿಕ ಹಿನ್ನೆಲೆಯುಳ್ಳ ಅಧಿಕಾರಿ ನೇಮಕ

ಮಾಸಾಂತ್ಯಕ್ಕೆ ಹಾಲಿ ಮುಖ್ಯಸ್ಥ ಮೇ.ಜ.ನರವಾಣೆ ನಿವೃತ್ತಿ

Team Udayavani, Apr 19, 2022, 7:30 AM IST

thumb 1

ನವದೆಹಲಿ: ಭೂಸೇನೆಯ 29ನೇ ಮುಖ್ಯಸ್ಥರಾಗಿ ಲೆ.ಜ.ಮನೋಜ್‌ ಪಾಂಡೆ ನೇಮಕಗೊಳ್ಳಲಿದ್ದಾರೆ. ಇದೇ ಮೊದಲ ಬಾರಿಗೆ ಕಾರ್ಪ್ಸ್ ಆಫ್ ಎಂಜಿನಿಯರ್ಸ್‌ನ ಹಿರಿಯ ಅಧಿಕಾರಿ ಭೂಸೇನೆಯ ಮುಖ್ಯಸ್ಥರಾಗಲಿದ್ದಾರೆ.

ಮಾಸಾಂತ್ಯಕ್ಕೆ ಭೂಸೇನೆಯ ಹಾಲಿ ಮುಖ್ಯಸ್ಥ ಜ.ಮನೋಜ್‌ ಮುಕುಂದ್‌ ನರವಾಣೆ ನಿವೃತ್ತಿಯಾಗಲಿದ್ದಾರೆ.

ಹೀಗಾಗಿ, ಹೊಸ ಮುಖ್ಯಸ್ಥರ ಆಯ್ಕೆಯನ್ನು ಮಾಡಲಾಗಿದೆ ಎಂದು ರಕ್ಷಣಾ ಸಚಿವಾಲಯ ಸೋಮವಾರ ತಿಳಿಸಿದೆ.

39 ವರ್ಷಗಳ ಕಾಲ ಭೂಸೇನೆಯ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಅವರಿಗೆ ಇದೆ. ದೇಶದ ಪಶ್ಚಿಮ ಭಾಗದಲ್ಲಿ ಎಂಜಿನಿಯರ್‌ ಬ್ರಿಗೇಡ್‌, ಎಲ್‌ಒಸಿಯಲ್ಲಿ ಯೋಧರ ತುಕಡಿಯನ್ನು ನಿರ್ವಹಿಸಿದ ಹೆಗ್ಗಳಿಕೆ ಅವರದ್ದು. ಜತೆಗೆ ಲಡಾಖ್‌ನಲ್ಲಿ ಮತ್ತು ಈಶಾನ್ಯ ಭಾಗದಲ್ಲಿ ಯೋಧರ ಜತೆಗೆ ಹಲವು ಕಾರ್ಯಾಚರಣೆಗಳನ್ನು ನಡೆಸಿದ್ದಾರೆ.

ನ್ಯಾಷನಲ್‌ ಡಿಫೆನ್ಸ್‌ ಅಕಾಡೆಮಿಯ ಹಳೆ ವಿದ್ಯಾರ್ಥಿಯಾಗಿರುವ ಅವರು, 1982ರಲ್ಲಿ ಕಾರ್ಪ್ಸ್ ಆಫ್ ಎಂಜಿನಿಯರ್ಸ್‌ಗೆ ಸೇರ್ಪಡೆಯಾದರು.

ಇದನ್ನೂ ಓದಿ:ಛತ್ತೀಸ್‌ಗಢ: ನಕ್ಸಲರ ದಾಳಿಯಲ್ಲಿ ನಾಲ್ವರು ಪೊಲೀಸ್‌ ಸಿಬ್ಬಂದಿಗೆ ಗಾಯ

2001ರ ಡಿಸೆಂಬರ್‌ನಲ್ಲಿ ಸಂಸತ್‌ ಭವನದ ಮೇಲೆ ಪಾಕಿಸ್ತಾನದ ಉಗ್ರರು ದಾಳಿ ನಡೆಸಿದ ಬಳಿಕ ಎಲ್‌ಒಸಿಯ ಪಲ್ಲನ್‌ವಾಲಾ ಎಂಬಲ್ಲಿ ನಡೆಸಲಾಗಿದ್ದ “ಆಪರೇಷನ್‌ ಪರಾಕ್ರಮ್‌’ನ ನೇತೃತ್ವ ವಹಿಸಿದ್ದರು. ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪ ಸಮೂಹದ ಸೇನಾ ಘಟಕದ ಕಮಾಂಡರ್‌ ಕೂಡ ಆಗಿದ್ದರು.

ಏನಿದು ಕಾರ್ಪ್ಸ್ಆಫ್ ಎಂಜಿನಿಯರ್ಸ್‌?
– ಇದು ಭೂಸೇನೆಯ ಹಳೆಯ ಭಾಗ
– ಸೇನಾಪಡೆಗಳಿಗೆ ಮೂಲ ಸೌಕರ್ಯ ನಿರ್ಮಾಣ ಇದರ ಕೆಲಸ
– ಪ್ರಾಕೃತಿಕ ವಿಪತ್ತುಗಳ ಸಂದರ್ಭದಲ್ಲಿ ನೆರವು
– ಯುದ್ಧ, ಸೇನಾ ಕಾರ್ಯಾಚರಣೆಗಳ ಸಂದರ್ಭದಲ್ಲಿ ಹೆಲಿಪ್ಯಾಡ್‌, ತುರ್ತು ಸೇತುವೆ, ರಸ್ತೆಗಳ ನಿರ್ಮಾಣ

ಟಾಪ್ ನ್ಯೂಸ್

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.