ಹತ್ಯೆಯಾದ ಸಹೋದ್ಯೋಗಿ ವಕೀಲನ ಶವವನ್ನು ಕೋರ್ಟ್ ಹಾಲ್ ನೊಳಗೆ ತಂದು ಪ್ರತಿಭಟನೆ!
ಐದು ಮಂದಿ ದುಷ್ಕರ್ಮಿಗಳು ಕಲ್ಲು, ಕಬ್ಬಿಣದ ಸಲಾಕೆಯಿಂದ ಹೊಡೆದು 32 ವರ್ಷದ ವಕೀಲ ಶಿಶಿರ್ ತ್ರಿಪಾಠಿಯನ್ನು ಹತ್ಯೆಗೈದಿದ್ದರು
Team Udayavani, Jan 8, 2020, 7:28 PM IST
ಲಕ್ನೋ: 32ರ ಹರೆಯದ ಯುವ ವಕೀಲರೊಬ್ಬರನ್ನು ಮಂಗಳವಾರ ರಾತ್ರಿ ಹತ್ಯೆಗೈದಿರುವ ಘಟನೆ ಖಂಡಿಸಿ ಉತ್ತರಪ್ರದೇಶದಲ್ಲಿ ವಕೀಲರು ತೀವ್ರ ಪ್ರತಿಭಟನೆ ನಡೆಸಿದ್ದರು. ಏತನ್ಮಧ್ಯೆ ಪ್ರತಿಭಟನಾನಿರತ ವಕೀಲರು ತಮ್ಮ ಸಹೋದ್ಯೋಗಿಯ ಶವವನ್ನು ಜಿಲ್ಲಾ ಮ್ಯಾಜಿಸ್ಟ್ರೇಟ್ ಕೋರ್ಟ್ ರೂಂನೊಳಗೆ ಕೊಂಡೊಯ್ದು ಪ್ರತಿಭಟಿಸಿದ ಪ್ರಸಂಗ ಬುಧವಾರ ನಡೆಯಿತು.
ಪ್ರತಿಭಟನಾ ನಿರತ ವಕೀಲರು ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿ ಸಮೀಪದ ರಸ್ತೆಯನ್ನು ಬಂದ್ ಮಾಡಿ, ಪೊಲೀಸರಿಗೆ ಧಿಕ್ಕಾರ ಎಂದು ಘೋಷಣೆ ಕೂಗಿದ್ದರು. ಮಂಗಳವಾರ ರಾತ್ರಿ ಸುಮಾರು ಐದು ಮಂದಿ ದುಷ್ಕರ್ಮಿಗಳು ಕಲ್ಲು, ಕಬ್ಬಿಣದ ಸಲಾಕೆಯಿಂದ ಹೊಡೆದು 32 ವರ್ಷದ ವಕೀಲ ಶಿಶಿರ್ ತ್ರಿಪಾಠಿಯನ್ನು ಹತ್ಯೆಗೈದಿರುವ ಘಟನೆ ಲಕ್ನೋ ಹೊರವಲಯದಲ್ಲಿ ನಡೆದಿತ್ತು.
ಘಟನೆಗೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಬಂಧಿಸಿದ್ದು, ಉಳಿದ ನಾಲ್ವರು ಪರಾರಿಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಬಂಧಿತ ಆರೋಪಿಯೂ ವಕೀಲನಾಗಿರುವುದಾಗಿ ಪೊಲೀಸ್ ಅಧೀಕಾರಿಗಳು ತಿಳಿಸಿದ್ದಾರೆ.
ಆಸ್ತಿ ವ್ಯವಹಾರಕ್ಕೆ ಸಂಬಂಧಿಸಿದ ವೈಯಕ್ತಿಕ ವಿಚಾರದಲ್ಲಿ ಈ ಕೊಲೆ ನಡೆದಿದೆ ಎಂದು ಪ್ರಾಥಮಿಕ ವಿಚಾರಣೆಯಲ್ಲಿ ತಿಳಿದು ಬಂದಿದೆ ಎಂದು ವರದಿ ವಿವರಿಸಿದೆ.
ಆಕ್ರೋಶಿತ ವಕೀಲರ ಪ್ರತಿಭಟನೆ, ಪರಿಸ್ಥಿತಿಯನ್ನು ತಿಳಿಗೊಳಿಸಲು ಪೊಲೀಸರು ಸುಮಾರು ಎರಡು ಗಂಟೆಗಳ ಕಾಲ ಹರಸಾಹಸ ಪಟ್ಟ ನಂತರ ಕೊನೆಗೂ ಶವದ ಅಂತ್ಯ ಸಂಸ್ಕಾರ ನಡೆಸಲು ಮನವೊಲಿಸಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ