ಗರ್ಭಿಣಿಯಾದ ಸಮಯದಲ್ಲಿ ಮಹಿಳೆ ಹೇಗೆ ಬಟ್ಟೆ ಧರಿಸಬೇಕು: ಹೊಸ ಕೋರ್ಸ್ ಆರಂಭಿಸಿದ ಲಕ್ನೋ ವಿವಿ

"ಗರ್ಭ ಸಂಸ್ಕಾರ" ಕುರಿತು ಪ್ರಮಾಣಪತ್ರ ಮತ್ತು ಡಿಪ್ಲೊಮಾ ತರಗತಿ

Team Udayavani, Feb 23, 2020, 9:07 AM IST

luckno

ಉತ್ತರಪ್ರದೇಶ: ಲಕ್ನೋ ವಿಶ್ವವಿದ್ಯಾಲಯವು ಈ ಶೈಕ್ಷಣಿಕ ವರ್ಷದಿಂದ  “ಗರ್ಭ ಸಂಸ್ಕಾರ” ಕುರಿತು ಪ್ರಮಾಣಪತ್ರ ಮತ್ತು ಡಿಪ್ಲೊಮಾ ತರಗತಿಯನ್ನು ಪ್ರಾರಂಭಿಸಿದ್ದು ಈ  ಕೋರ್ಸ್ ಆರಂಭಿಸಿದ ದೇಶದ ಮೊದಲ ವಿಶ್ವವಿದ್ಯಾಲಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಎನ್ ಡಿಟಿವಿ ವರದಿ ಮಾಡಿದೆ.

ಈ  ಕೋರ್ಸ್ ಅಡಿಯಲ್ಲಿ ವಿದ್ಯಾರ್ಥಿಗಳು, ಗರ್ಭಿಣಿ ಮಹಿಳೆ ಯಾವ ರೀತಿಯ ಬಟ್ಟೆ ಧರಿಸಬೇಕು ಮತ್ತು ಆಹಾರ ತಿನ್ನಬೇಕು, ಆಕೆ ಹೇಗೆ ವರ್ತಿಸಬೇಕು ಮತ್ತು ತನ್ನನ್ನು ತಾನು ಹೇಗೆ ಸದೃಢವಾಗಿರಿಸಿಕೊಳ್ಳಬೇಕು ಹಾಗೂ ಗರ್ಭಿಣಿಯಾದ ಸಮಯದಲ್ಲಿ ಯಾವ ರೀತಿಯ ಸಂಗೀತವನ್ನು ಕೇಳಬಹುದು ಸೇರಿದಂತೆ ವಿದ್ಯಾರ್ಥಿಗಳಿಗೆ ಮಾತೃತ್ವದ ಬಗ್ಗೆ ಕಲಿಸಲಾಗುತ್ತದೆ.

ಕೋರ್ಸ್ ಉದ್ಯೋಗವನ್ನು ಸೃಷ್ಟಿಸುವ ಮಾಧ್ಯಮವೆಂದೇ ಅಂದಾಜಿಸಲಾಗಿದೆ. ವಿಶ್ವವಿದ್ಯಾಲಯ ತನ್ನ ವರದಿಯಲ್ಲಿ ತಿಳಿಸಿರುವಂತೆಯೇ ಪುರುಷರು ಕೂಡ ಈ ಕೋರ್ಸ್ ಆನ್ನು ಆಯ್ದುಕೊಳ್ಳಬಹುದು.

ರಾಜ್ಯ ವಿಶ್ವವಿದ್ಯಾಲಯದ ಕುಲಪತಿಯೂ ಆದ ಉತ್ತರಪ್ರದೇಶ ರಾಜ್ಯಪಾಲೆ ಆನಂದಿಬೆನ್ ಪಟೇಲ್ ವಿದ್ಯಾರ್ಥಿಗಳಿಗೆ ಮಾತೃತ್ವದ ಕುರಿತು ತರಭೇತಿ ನೀಡುವಂತೆ ಪ್ರಸ್ತಾಪಿಸಿದ್ದರು ಎಂದು ಲಕ್ನೋ ವಿಶ್ವವಿದ್ಯಾಲಯದ ವಕ್ತಾರ ದುರ್ಗೇಶ್ ಶ್ರೀವಾತ್ಸವ  ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ.

ಆನಂದಿಬೆನ್ ಪಟೇಲ್ ಕಳೆದ ವಾರ್ಷಿಕ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಿರುವಾಗ, ತಾಯಿಯ ಗರ್ಭದಲ್ಲಿರುವಾಗಲೇ ಅಭಿಮನ್ಯು ಯುದ್ಧ ಕೌಶಲ್ಯಗಳಲ್ಲಿ ಪರಿಣಿತನಾದ. ಮಾತ್ರವಲ್ಲದೆ ಜರ್ಮನಿಯಲ್ಲೂ ಗರ್ಭ ಸಂಸ್ಕಾರದ ಕುರಿತು ಕೋರ್ಸ್ ಇರುವ ಬಗ್ಗೆ ಉಲ್ಲೇಖಿಸಿದ್ದರು.

ಈ ಕೋರ್ಸ್ ಗಾಗಿ ಮಾರ್ಗಸೂಚಿಯನ್ನು ಸಿದ್ಧಪಡಿಸಲಾಗಿದ್ದು,  ಇದರಲ್ಲಿ ವಿದ್ಯಾರ್ಥಿಗಳು 16 ಮೌಲ್ಯಗಳ ಬಗ್ಗೆ ಕಲಿಯುತ್ತಾರೆ. ಮುಖ್ಯವಾಗಿ ಕುಟುಂಬ ಯೋಜನೆ ಮತ್ತು ಗರ್ಭಿಣಿಯರು ತೆಗೆದುಕೊಳ್ಳಬೇಕಾದ ಸುರಕ್ಷತೆಯ ಮೌಲ್ಯವನ್ನು ಒತ್ತಿ ಹೇಳುತ್ತದೆ. ಈ ಹೊಸ ಕೋರ್ಸ್ ಅಡಿಯಲ್ಲಿ ವಿವಿಧ ಕಾರ್ಯಾಗಾರಗಳನ್ನು ಆಯೋಜಿಸಲಾಗುವುದು ಎಂದು ಶ್ರೀವಾಸ್ತವ ತಿಳಿಸಿದ್ದಾರೆ

ಹೊಸ ಕೋರ್ಸ್ ಅನ್ನು ವಿದ್ಯಾರ್ಥಿಗಳು ಕೂಡ ಸ್ವಾಗತಿಸಿದ್ದು, ವಿದ್ಯಾರ್ಥಿಗಳಿಗೆ ಮಾತೃತ್ವದ ಬಗ್ಗೆ ತರಬೇತಿ ನೀಡಿದರೆ, ಅದು ಆರೋಗ್ಯಕರ ಮಗುವನ್ನು ಹೊಂದಲು ದಂಪತಿಗಳಿಗೆ ಸಹಾಯ ಮಾಡುತ್ತದೆ … ಇದರರ್ಥ ನಮ್ಮ ದೇಶಕ್ಕೆ ಆರೋಗ್ಯಕರ ಭವಿಷ್ಯವಿದೆ “ಎಂದು ವಿದ್ಯಾರ್ಥಿಯಾದ ಸಂಜೀವ್ ಅಭಿಪ್ರಾಯಪಟ್ಟಿದ್ದಾರೆ.

ನಮ್ಮದೇಶವು ಶ್ರೀಮಂತ ಸಂಸ್ಕೃತಿ ಮತ್ತು ಮೌಲ್ಯಗಳನ್ನು ಹೊಂದಿದೆ. ಮಹಿಳೆಯ ಭಾವನೆಗಳು ಮತ್ತು ಆಲೋಚನೆಗಳು ತನ್ನ ಮಗುವಿನ ಮೇಲೆ ಪ್ರತಿಫಲಿಸುತ್ತವೆ. ಗರ್ಭಾವಸ್ಥೆಯಲ್ಲಿ ಮಹಿಳೆಯರ ಚಟುವಟಿಕೆಗಳು, ಆಹಾರ ಮತ್ತು ಮಾನಸಿಕ ಶಾಂತಿಯನ್ನು ನೋಡಿಕೊಳ್ಳುವ ಅವಶ್ಯಕತೆಯಿದೆ. ಈ ಕೋರ್ಸ್ ಮಹಿಳೆಯರು ಮತ್ತು ಮಕ್ಕಳ ಕಲ್ಯಾಣ ಕಾರ್ಯಕ್ರಮವನ್ನು ಬೆಂಬಲಿಸುತ್ತದೆ “ಎಂದು ಹಿರಿಯ ಸ್ತ್ರೀ ರೋಗ ತಜ್ಞೆ ಡಾ. ಮಧು ಗುಪ್ತಾ ತಿಳಿಸಿದ್ದಾರೆ.

ಟಾಪ್ ನ್ಯೂಸ್

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

1-wwewqe

Lok Sabha ಅಖಾಡಕ್ಕೆ ಲಾಲು ಪ್ರಸಾದ್‌ ಪುತ್ರಿ ಡಾ| ರೋಹಿಣಿ ಹೆಜ್ಜೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

8-wenlock

Wenlockನಲ್ಲಿ ಮೂಲಸೌಕರ್ಯ ಕೊರತೆ; ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಪೊಲೀಸ್‌ಗೆ ದೂರು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

7-mng

ಚೆಂಡೆ ಬಡಿಯುತ್ತ ಬಂದು ತಂಡದಿಂದ ಪ್ರಶ್ನೆ: ಚಕಮಕಿ, ದೂರು ದಾಖಲು

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

6-mng

Nandini Brand: 50 ಐಸ್‌ ಕ್ರೀಂ ಮಾರುಕಟ್ಟೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.