ಗರ್ಭಿಣಿಯಾದ ಸಮಯದಲ್ಲಿ ಮಹಿಳೆ ಹೇಗೆ ಬಟ್ಟೆ ಧರಿಸಬೇಕು: ಹೊಸ ಕೋರ್ಸ್ ಆರಂಭಿಸಿದ ಲಕ್ನೋ ವಿವಿ

"ಗರ್ಭ ಸಂಸ್ಕಾರ" ಕುರಿತು ಪ್ರಮಾಣಪತ್ರ ಮತ್ತು ಡಿಪ್ಲೊಮಾ ತರಗತಿ

Team Udayavani, Feb 23, 2020, 9:07 AM IST

luckno

ಉತ್ತರಪ್ರದೇಶ: ಲಕ್ನೋ ವಿಶ್ವವಿದ್ಯಾಲಯವು ಈ ಶೈಕ್ಷಣಿಕ ವರ್ಷದಿಂದ  “ಗರ್ಭ ಸಂಸ್ಕಾರ” ಕುರಿತು ಪ್ರಮಾಣಪತ್ರ ಮತ್ತು ಡಿಪ್ಲೊಮಾ ತರಗತಿಯನ್ನು ಪ್ರಾರಂಭಿಸಿದ್ದು ಈ  ಕೋರ್ಸ್ ಆರಂಭಿಸಿದ ದೇಶದ ಮೊದಲ ವಿಶ್ವವಿದ್ಯಾಲಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಎನ್ ಡಿಟಿವಿ ವರದಿ ಮಾಡಿದೆ.

ಈ  ಕೋರ್ಸ್ ಅಡಿಯಲ್ಲಿ ವಿದ್ಯಾರ್ಥಿಗಳು, ಗರ್ಭಿಣಿ ಮಹಿಳೆ ಯಾವ ರೀತಿಯ ಬಟ್ಟೆ ಧರಿಸಬೇಕು ಮತ್ತು ಆಹಾರ ತಿನ್ನಬೇಕು, ಆಕೆ ಹೇಗೆ ವರ್ತಿಸಬೇಕು ಮತ್ತು ತನ್ನನ್ನು ತಾನು ಹೇಗೆ ಸದೃಢವಾಗಿರಿಸಿಕೊಳ್ಳಬೇಕು ಹಾಗೂ ಗರ್ಭಿಣಿಯಾದ ಸಮಯದಲ್ಲಿ ಯಾವ ರೀತಿಯ ಸಂಗೀತವನ್ನು ಕೇಳಬಹುದು ಸೇರಿದಂತೆ ವಿದ್ಯಾರ್ಥಿಗಳಿಗೆ ಮಾತೃತ್ವದ ಬಗ್ಗೆ ಕಲಿಸಲಾಗುತ್ತದೆ.

ಕೋರ್ಸ್ ಉದ್ಯೋಗವನ್ನು ಸೃಷ್ಟಿಸುವ ಮಾಧ್ಯಮವೆಂದೇ ಅಂದಾಜಿಸಲಾಗಿದೆ. ವಿಶ್ವವಿದ್ಯಾಲಯ ತನ್ನ ವರದಿಯಲ್ಲಿ ತಿಳಿಸಿರುವಂತೆಯೇ ಪುರುಷರು ಕೂಡ ಈ ಕೋರ್ಸ್ ಆನ್ನು ಆಯ್ದುಕೊಳ್ಳಬಹುದು.

ರಾಜ್ಯ ವಿಶ್ವವಿದ್ಯಾಲಯದ ಕುಲಪತಿಯೂ ಆದ ಉತ್ತರಪ್ರದೇಶ ರಾಜ್ಯಪಾಲೆ ಆನಂದಿಬೆನ್ ಪಟೇಲ್ ವಿದ್ಯಾರ್ಥಿಗಳಿಗೆ ಮಾತೃತ್ವದ ಕುರಿತು ತರಭೇತಿ ನೀಡುವಂತೆ ಪ್ರಸ್ತಾಪಿಸಿದ್ದರು ಎಂದು ಲಕ್ನೋ ವಿಶ್ವವಿದ್ಯಾಲಯದ ವಕ್ತಾರ ದುರ್ಗೇಶ್ ಶ್ರೀವಾತ್ಸವ  ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ.

ಆನಂದಿಬೆನ್ ಪಟೇಲ್ ಕಳೆದ ವಾರ್ಷಿಕ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಿರುವಾಗ, ತಾಯಿಯ ಗರ್ಭದಲ್ಲಿರುವಾಗಲೇ ಅಭಿಮನ್ಯು ಯುದ್ಧ ಕೌಶಲ್ಯಗಳಲ್ಲಿ ಪರಿಣಿತನಾದ. ಮಾತ್ರವಲ್ಲದೆ ಜರ್ಮನಿಯಲ್ಲೂ ಗರ್ಭ ಸಂಸ್ಕಾರದ ಕುರಿತು ಕೋರ್ಸ್ ಇರುವ ಬಗ್ಗೆ ಉಲ್ಲೇಖಿಸಿದ್ದರು.

ಈ ಕೋರ್ಸ್ ಗಾಗಿ ಮಾರ್ಗಸೂಚಿಯನ್ನು ಸಿದ್ಧಪಡಿಸಲಾಗಿದ್ದು,  ಇದರಲ್ಲಿ ವಿದ್ಯಾರ್ಥಿಗಳು 16 ಮೌಲ್ಯಗಳ ಬಗ್ಗೆ ಕಲಿಯುತ್ತಾರೆ. ಮುಖ್ಯವಾಗಿ ಕುಟುಂಬ ಯೋಜನೆ ಮತ್ತು ಗರ್ಭಿಣಿಯರು ತೆಗೆದುಕೊಳ್ಳಬೇಕಾದ ಸುರಕ್ಷತೆಯ ಮೌಲ್ಯವನ್ನು ಒತ್ತಿ ಹೇಳುತ್ತದೆ. ಈ ಹೊಸ ಕೋರ್ಸ್ ಅಡಿಯಲ್ಲಿ ವಿವಿಧ ಕಾರ್ಯಾಗಾರಗಳನ್ನು ಆಯೋಜಿಸಲಾಗುವುದು ಎಂದು ಶ್ರೀವಾಸ್ತವ ತಿಳಿಸಿದ್ದಾರೆ

ಹೊಸ ಕೋರ್ಸ್ ಅನ್ನು ವಿದ್ಯಾರ್ಥಿಗಳು ಕೂಡ ಸ್ವಾಗತಿಸಿದ್ದು, ವಿದ್ಯಾರ್ಥಿಗಳಿಗೆ ಮಾತೃತ್ವದ ಬಗ್ಗೆ ತರಬೇತಿ ನೀಡಿದರೆ, ಅದು ಆರೋಗ್ಯಕರ ಮಗುವನ್ನು ಹೊಂದಲು ದಂಪತಿಗಳಿಗೆ ಸಹಾಯ ಮಾಡುತ್ತದೆ … ಇದರರ್ಥ ನಮ್ಮ ದೇಶಕ್ಕೆ ಆರೋಗ್ಯಕರ ಭವಿಷ್ಯವಿದೆ “ಎಂದು ವಿದ್ಯಾರ್ಥಿಯಾದ ಸಂಜೀವ್ ಅಭಿಪ್ರಾಯಪಟ್ಟಿದ್ದಾರೆ.

ನಮ್ಮದೇಶವು ಶ್ರೀಮಂತ ಸಂಸ್ಕೃತಿ ಮತ್ತು ಮೌಲ್ಯಗಳನ್ನು ಹೊಂದಿದೆ. ಮಹಿಳೆಯ ಭಾವನೆಗಳು ಮತ್ತು ಆಲೋಚನೆಗಳು ತನ್ನ ಮಗುವಿನ ಮೇಲೆ ಪ್ರತಿಫಲಿಸುತ್ತವೆ. ಗರ್ಭಾವಸ್ಥೆಯಲ್ಲಿ ಮಹಿಳೆಯರ ಚಟುವಟಿಕೆಗಳು, ಆಹಾರ ಮತ್ತು ಮಾನಸಿಕ ಶಾಂತಿಯನ್ನು ನೋಡಿಕೊಳ್ಳುವ ಅವಶ್ಯಕತೆಯಿದೆ. ಈ ಕೋರ್ಸ್ ಮಹಿಳೆಯರು ಮತ್ತು ಮಕ್ಕಳ ಕಲ್ಯಾಣ ಕಾರ್ಯಕ್ರಮವನ್ನು ಬೆಂಬಲಿಸುತ್ತದೆ “ಎಂದು ಹಿರಿಯ ಸ್ತ್ರೀ ರೋಗ ತಜ್ಞೆ ಡಾ. ಮಧು ಗುಪ್ತಾ ತಿಳಿಸಿದ್ದಾರೆ.

ಟಾಪ್ ನ್ಯೂಸ್

arvind kejriwal

Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

prashanth neel

KGF-3 ಸ್ಕ್ರಿಪ್ಟ್ ಸಿದ್ದವಿದೆ, ಆದರೆ….: ಬಿಗ್ ಅಪ್ಡೇಟ್ ನೀಡಿದ ಪ್ರಶಾಂತ್ ನೀಲ್

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, 3 ಮಂದಿ ಖುಲಾಸೆ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, ಮೂವರು ಖುಲಾಸೆ

Colin Munro Announced International Retirement

Retired; ಟಿ20 ವಿಶ್ವಕಪ್ ನಲ್ಲಿ ಸಿಗದ ಸ್ಥಾನ; ವೃತ್ತಿಜೀವನಕ್ಕೆ ತೆರೆಎಳೆದ ಕಿವೀಸ್ ಬ್ಯಾಟರ್

pralhad joshi

Hubli; ಕಾಂಗ್ರೆಸ್ ಅಧಿಕಾರಕ್ಕಾಗಿ ದೇಶವನ್ನು ಒಡೆಯಲೂ ಹೇಸುವುದಿಲ್ಲ: ಪ್ರಹ್ಲಾದ ಜೋಶಿ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Dandeli: ಮದುವೆಗೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ… 8 ಮಂದಿಗೆ ಗಾಯ

Dandeli: ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ.. ಮಕ್ಕಳು ಸೇರಿ 8 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arvind kejriwal

Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, 3 ಮಂದಿ ಖುಲಾಸೆ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, ಮೂವರು ಖುಲಾಸೆ

ಪಾಕ್‌ಗೆ ಗೌರವ ಕೊಡಿ… ಇಲ್ಲವಾದಲ್ಲಿ ಅಣುಬಾಂಬ್ ಹಾಕುತ್ತಾರೆ: ಮಣಿಶಂಕರ್ ಅಯ್ಯರ್ ಹೇಳಿಕೆ

Pak ಬಳಿ ಅಣುಬಾಂಬ್ ಇದೆ ಅವರಿಗೆ ಗೌರವ ಕೊಡಿ… ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ

Controversy: ಬಿಜೆಪಿ ನಾಯಕನ ಅಪ್ರಾಪ್ತ ಪುತ್ರನಿಂದ ಮತದಾನ; ವಿವಾದಿತ ವಿಡಿಯೋ ವೈರಲ್‌

Controversy: ಬಿಜೆಪಿ ನಾಯಕನ ಅಪ್ರಾಪ್ತ ಪುತ್ರನಿಂದ ಮತದಾನ; ವಿವಾದಿತ ವಿಡಿಯೋ ವೈರಲ್‌

police crime

Sandeshkhali ಪ್ರಕರಣಕ್ಕೆ ದಿಢೀರ್‌ ತಿರುವು : ಇಬ್ಬರು ಸಂತ್ರಸ್ತೆಯರಿಂದ ದೂರು ವಾಪಸ್‌!

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

arvind kejriwal

Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

7-kundapura

Rank: ಕುಂದಾಪುರ ತಾಲೂಕಿಗೆ ಪ್ರಥಮ ಹಾಗೂ ರಾಜ್ಯಕ್ಕೆ 5ನೇ ರ್‍ಯಾಂಕ್ ಪಡೆದ ಶುಕ್ತಿಜಾ

prashanth neel

KGF-3 ಸ್ಕ್ರಿಪ್ಟ್ ಸಿದ್ದವಿದೆ, ಆದರೆ….: ಬಿಗ್ ಅಪ್ಡೇಟ್ ನೀಡಿದ ಪ್ರಶಾಂತ್ ನೀಲ್

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, 3 ಮಂದಿ ಖುಲಾಸೆ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, ಮೂವರು ಖುಲಾಸೆ

Colin Munro Announced International Retirement

Retired; ಟಿ20 ವಿಶ್ವಕಪ್ ನಲ್ಲಿ ಸಿಗದ ಸ್ಥಾನ; ವೃತ್ತಿಜೀವನಕ್ಕೆ ತೆರೆಎಳೆದ ಕಿವೀಸ್ ಬ್ಯಾಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.