ಜೂನ್ 5-6ರಂದು ನಭೋ ಮಂಡಲದಲ್ಲಿ ಸ್ಟ್ರಾಬೆರಿ ಚಂದ್ರಗ್ರಹಣ…ಏನಿದರ ವಿಶೇಷತೆ?

ಸ್ಟ್ರಾಬೆರಿ ಚಂದ್ರಗ್ರಹಣ ಜೂನ್ 5ರಂದು ರಾತ್ರಿ 11.15ಕ್ಕೆ ಆರಂಭವಾಗಲಿದೆ...

Team Udayavani, Jun 4, 2020, 5:15 PM IST

ಜೂನ್ 5-6ರಂದು ನಭೋ ಮಂಡಲದಲ್ಲಿ ಸ್ಟ್ರಾಬೆರಿ ಚಂದ್ರಗ್ರಹಣ…ಏನಿದರ ವಿಶೇಷತೆ?

ನವದೆಹಲಿ:2020ರ ಅಪರೂಪದ ವಿದ್ಯಮಾನ ಎಂದು ಕರೆಯಲಾಗುವ ಎರಡನೇ ಚಂದ್ರಗ್ರಹಣ ಜೂನ್ 5ಹಾಗೂ 6ರ ರಾತ್ರಿ ಸಂಭವಿಸಲಿದ್ದು, ಈ ಬಾರಿಯದ್ದು ಸ್ಟ್ರಾಬೆರಿ ಚಂದ್ರಗ್ರಹಣವಾಗಿರುವುದು ವಿಶೇಷತೆಯಾಗಿದೆ.

ಈ ವರ್ಷದ ಜನವರಿ 10ರಂದು ಪ್ರಥಮ ಚಂದ್ರಗ್ರಹಣ ಸುಮಾರು 4ಗಂಟೆ ಐದು ನಿಮಿಷಗಳ ಕಾಲ ಭಾರತದಲ್ಲಿ ಗೋಚರಿಸಿತ್ತು. ಇದೀಗ ಎರಡನೇ ಸ್ಟ್ರಾಬೆರಿ ಚಂದ್ರಗ್ರಹಣ ಜೂನ್ 5ಮತ್ತು 6ರ ರಾತ್ರಿ ಸಂಭವಿಸಲಿದೆ ಎಂದು ವರದಿ ತಿಳಿಸಿದೆ.

ಈ ಬಾರಿಯ ಚಂದ್ರಗ್ರಹಣವನ್ನು Penumbral Eclipse ಎಂದು ಹೆಸರಿಸಲಾಗಿದೆ. ಈ ಖಗೋಳ ವಿಸ್ಮಯವು ಯುರೋಪ್, ಏಷ್ಯಾ, ಆಸ್ಟ್ರೇಲಿಯಾ, ಆಫ್ರಿಕಾ, ದಕ್ಷಿಣ ಅಮೆರಿಕ, ಫೆಸಿಫಿಕ್, ಅಟ್ಲಾಂಟಿಕ್, ಹಿಂದೂ ಮಹಾಸಾಗರ, ಅಂಟಾರ್ಟಿಕಾ ಭಾಗಗಳಲ್ಲಿ ಗೋಚರಿಸಲಿದೆ ಎಂದು ವರದಿ ವಿವರಿಸಿದ್ದು, ಭಾರತದಾದ್ಯಂತ ಈ ಚಂದ್ರಗ್ರಹಣ ಗೋಚರಿಸಲಿದೆ.

ಸ್ಟ್ರಾಬೆರಿ ಚಂದ್ರಗ್ರಹಣ ಜೂನ್ 5ರಂದು ರಾತ್ರಿ 11.15ಕ್ಕೆ ಆರಂಭವಾಗಲಿದ್ದು, ಜೂನ್ 6ರಂದು 12.54ಕ್ಕೆ ಪೂರ್ಣ ಪ್ರಮಾಣದಲ್ಲಿ ಗ್ರಹಣ ಗೋಚರಿಸಲಿದ್ದು, ಜೂನ್ 6ರ ಬೆಳಗ್ಗಿನ ಜಾವ 2.34ಕ್ಕೆ ಪೂರ್ಣಗೊಳ್ಳಲಿದೆ. ನಾಳೆ ಚಂದ್ರನ ಮೇಲ್ಮೈ ಶೇ.75ರಷ್ಟು ಭಾಗವು ಭೂಮಿಯಿಂದ ಭಾಗಶಃ ಮುಚ್ಚಿರುವುದರಿಂದ ಅದರ ಹೊರಭಾಗದ ನೆರಳು ಮಾತ್ರ ಗೋಚರಿಸಬಹುದು. ಈ ನಿಟ್ಟಿನಲ್ಲಿ ಗ್ರಹಣ ಪೂರ್ಣಪ್ರಮಾಣದಲ್ಲಿ ಗೋಚರವಾಗದಿರಬಹುದು ಎಂದು ವಿಜ್ಞಾನಿಗಳು
ತಿಳಿಸಿದ್ದಾರೆ.

ಏನಿದು ಸ್ಟ್ರಾಬೆರಿ ಚಂದ್ರಗ್ರಹಣ?
ಖಗ್ರಾಹ, ಖಂಡಗ್ರಾಸ, ತೋಳಚಂದ್ರಗ್ರಹಣ ಹೀಗೆ ಹಲವಾರು ರೀತಿಯ ಹೆಸರಿನ ಚಂದ್ರಗ್ರಹಣದ ಬಗ್ಗೆ ಓದಿದ್ದೀರಿ. ಈ ಬಾರಿಯದ್ದು ಸ್ಟ್ರಾಬೆರಿ ಚಂದ್ರಗ್ರಹಣ…ಏನಿದು? ಯಾಕೆಂದರೆ ಇದು ಸ್ಟ್ರಾಬೆರಿ ಹಣ್ಣುಗಳ ಸೀಸನ್ ಆಗಿದೆ. ಈ ನಿಟ್ಟಿನಲ್ಲಿ ಜೂನ್ ತಿಂಗಳಿನಲ್ಲಿ ಸಂಭವಿಸುತ್ತಿರುವ ಪೂರ್ಣ ಚಂದ್ರಗ್ರಹಣಕ್ಕೆ ಸ್ಟ್ರಾಬೆರಿ ಎಂದು ಹೆಸರಿಸಲಾಗಿದೆಯಂತೆ. ಅದೇ ರೀತಿ ರೋಸ್ ಮೂನ್, ಹಾಟ್ ಮೂನ್ ಇತ್ಯಾದಿ ಹೆಸರುಗಳನ್ನು ಈಗಾಗಲೇ ಇಡಲಾಗಿದೆ. ಸ್ಟ್ರಾಬೆರಿ ಚಂದ್ರಗ್ರಹಣ ಮೂರು ಗಂಟೆ 18 ನಿಮಿಷಗಳ ಕಾಲದ್ದಾಗಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.