ಆರೋಪಿ ಪತ್ತೆಗೆ ತೆರಳಿದ್ದ ಬಿಹಾರ್ ಎಸ್ ಐ ಬಂಗಾಳದಲ್ಲಿ ಹತ್ಯೆ, ಆಘಾತದಿಂದ ತಾಯಿ ಸಾವು!
ಬಿಹಾರದ ಪುರ್ನಿಯಾ ಜಿಲ್ಲೆಯ ಹುಟ್ಟೂರಿನಲ್ಲಿ ಇಬ್ಬರ ಅಂತ್ಯಕ್ರಿಯೆ ಒಟ್ಟಿಗೆ ನೆರವೇರಿಸಲಾಗಿದೆ
Team Udayavani, Apr 12, 2021, 11:40 AM IST
ಲಕ್ನೋ: ಆರೋಪಿ ಪತ್ತೆಗಾಗಿ ಪಶ್ಚಿಮಬಂಗಾಳದ ಉತ್ತರ್ ದಿನಾಜ್ ಪುರ್ ಗೆ ತೆರಳಿದ್ದ ಬಿಹಾರ ಪೊಲೀಸ್ ಅಧಿಕಾರಿಯನ್ನು ಗುಂಪೊಂದು ಮಾರಣಾಂತಿಕವಾಗಿ ಥಳಿಸಿ ಹತ್ಯೆಗೈದಿದ್ದು, ಮಗನ ದಾರುಣ ಸಾವಿನ ವಿಷಯ ಕೇಳಿ ತಾಯಿಯೂ ಆಘಾತದಿಂದ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ವರದಿಯಾಗಿದೆ.
ಏಪ್ರಿಲ್ 10ರಂದು ಪಶ್ಚಿಮಬಂಗಾಳದ ಉತ್ತರ್ ದಿನಾಜ್ ಪುರ್ ಗ್ರಾಮಕ್ಕೆ ತೆರಳಿದ್ದ ಕಿಶನ್ ಗಂಜ್ ಪೊಲೀಸ್ ಠಾಣೆಯ ಠಾಣಾಧಿಕಾರಿ ಅಶ್ವಿನಿ ಕುಮಾರ್ ಅವರನ್ನು ಸ್ಥಳೀಯರು ಥಳಿಸಿ ಹತ್ಯೆಗೈದಿದ್ದರು. ಮಗ ಅಶ್ವಿನಿ ಕುಮಾರ್ ಸಾವಿನ ಸುದ್ದಿ ಕೇಳಿ ತಾಯಿಯೂ ಆಘಾತದಿಂದ ಸಾವನ್ನಪ್ಪಿದ್ದು, ಬಿಹಾರದ ಪುರ್ನಿಯಾ ಜಿಲ್ಲೆಯ ಹುಟ್ಟೂರಿನಲ್ಲಿ ಇಬ್ಬರ ಅಂತ್ಯಕ್ರಿಯೆ ಒಟ್ಟಿಗೆ ನೆರವೇರಿಸಲಾಗಿದೆ ಎಂದು ವರದಿ ವಿವರಿಸಿದೆ.
ಪಿಟಿಐ ವರದಿ ಪ್ರಕಾರ, ಮೋಟಾರ್ ಸೈಕಲ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗಾಗಿ ಎಸ್ ಎಚ್ ಒ ಅಶ್ವಿನಿ ಕುಮಾರ್ ಅವರ ಜತೆ ಏಳು ಮಂದಿ ಪೊಲೀಸ್ ಕಾನ್ಸ್ ಟೇಬಲ್ ಪಶ್ಚಿಮಬಂಗಾಳಕ್ಕೆ ತೆರಳುವಂತೆ ಪುರ್ನಿಯಾ ವಲಯ ಡೆಪ್ಯುಟಿ ಇನ್ಸ್ ಪೆಕ್ಟರ್ ಜನರಲ್ ಸುರೇಶ್ ಚೌಧರಿ ನಿರ್ದೇಶನ ನೀಡಿದ್ದರು. ಆದರೆ ಗುಂಪು ಹಲ್ಲೆ ನಡೆಸುತ್ತಿದ್ದಂತೆಯೇ ಪೊಲೀಸರು ಓಡಿಹೋಗಿದ್ದು, ಕರ್ತವ್ಯಲೋಪ ಎಸಗಿದ ಏಳು ಮಂದಿ ಪೊಲೀಸರನ್ನು ಅಮಾನತು ಮಾಡಲಾಗಿದೆ ಎಂದು ವರದಿ ತಿಳಿಸಿದೆ.
ಏನಿದು ಘಟನೆ:
ಮೋಟಾರ್ ಸೈಕಲ್ ಕಳ್ಳತನ ಪ್ರಕರಣದ ಆರೋಪಿಗಳ ಪತ್ತೆಗಾಗಿ ಅಶ್ವಿನಿ ಕುಮಾರ್ ಅವರು ತಮ್ಮ ಸಹೋದ್ಯೋಗಿಗಳ ಜತೆ ಬಂಗಾಳದ ಪಂಜಿಪಾರಾ ಪೊಲೀಸ್ ಠಾಣೆ ಪ್ರದೇಶಕ್ಕೆ ತೆರಳಿದ್ದರು. ನಂತರ ಗೋಲಾಪೋಖಾರ್ ಪೊಲೀಸ್ ಠಾಣಾ ವ್ಯಾಪ್ತಿಯ ಪಂಟಪಾಡಾ ಗ್ರಾಮದಲ್ಲಿ ಅಶ್ವಿನಿ ಕುಮಾರ್ ತಂಡ ಮಧ್ಯರಾತ್ರಿ ದಾಳಿ ನಡೆಸಿತ್ತು. ಬಳಿಕ ಉತ್ತರ್ ದಿನಾಜ್ ಪುರ್ ಗ್ರಾಮ ತಲುಪಿದಾಗ ಗ್ರಾಮಸ್ಥರು ಅಶ್ವಿನಿ ಕುಮಾರ್ ಅವರ ಮೇಲೆ ದೊಣ್ಣೆ ಮತ್ತು ಕಲ್ಲುಗಳಿಂದ ಹಲ್ಲೆ ನಡೆಸಿದ್ದರು.
ಗಂಭೀರವಾಗಿ ಗಾಯಗೊಂಡಿದ್ದ ಠಾಣಾಧಿಕಾರಿ ಅಶ್ವಿನಿ ಕುಮಾರ್ ಅವರನ್ನು ಇಸ್ಲಾಮ್ ಪುರ್ ಸದಾರ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ದಾರಿಮಧ್ಯೆಯೇ ಅವರು ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದ್ದರು.
ಬಂಗಾಳದ ಸ್ಥಳೀಯ ಪೊಲೀಸರು ನೆರವು ನೀಡದ ಪರಿಣಾಮದಿಂದಲೇ ಅಶ್ವಿನಿ ಕುಮಾರ್ ಅವರು ಸಾವನ್ನಪ್ಪುವಂತಾಗಿದೆ ಎಂದು ಬಿಹಾರ್ ಪೊಲೀಸ್ ಅಸೋಸಿಯೇಶನ್ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ಆರೋಪಿಸಿದೆ. ಆರೋಪಿಗಳ ಪತ್ತೆಯ ವೇಳೆ ಸ್ಥಳೀಯ ಪೊಲೀಸರು ನೆರವು ನೀಡುವಂತೆ ಅಶ್ವಿನಿ ಕುಮಾರ್ ಅವರು ಬಂಗಾಳ ಪೊಲೀಸರಲ್ಲಿ ಮನವಿ ಮಾಡಿಕೊಂಡಿದ್ದರು. ಆದರೆ ಅಶ್ವಿನಿ ಕುಮಾರ್ ಮತ್ತು ಸಹೋದ್ಯೋಗಿಗಳು ತೆರಳಿದ ವೇಳೆ ಸ್ಥಳೀಯ ಪೊಲೀಸರ ನೆರವು ದೊರಕಿಲ್ಲವಾಗಿತ್ತು ಎಂದು ಬಿಹಾರ ಪೊಲೀಸ್ ಅಧಿಕಾರಿಗಳು ದೂರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ