ಮಗನ ಮದುವೆಗೆ ಮದನಿಗೆ ಅವಕಾಶ
Team Udayavani, Aug 1, 2017, 11:33 AM IST
ನವದೆಹಲಿ: 2008ರ ಬೆಂಗಳೂರು ಸರಣಿ ಸ್ಫೋಟದ ಆರೋಪಿ, ಕೇರಳದ ಪಿಡಿಪಿ ನಾಯಕ ಅಬ್ದುಲ್ ನಾಜಿರ್ ಮದನಿಗೆ ಪುತ್ರನ ವಿವಾಹಕ್ಕೆ ತೆರಳಲು ಸುಪ್ರೀಂಕೋರ್ಟ್ ಒಪ್ಪಿಗೆ ನೀಡಿದೆ. ಬೆಂಗಳೂರು ಪೊಲೀಸರ ಬೆಂಗಾವಲಿನಲ್ಲಿ ಕೇರಳಕ್ಕೆ ಹೋಗಿ ಬರಬಹುದು ಎಂದು ನ್ಯಾ. ಎಸ್.ಎ. ಬೊದ್ದೆ ಮತ್ತು ನ್ಯಾ. ಎಲ್. ನಾಗೇಶ್ವರ ರಾವ್ ಅವರಿದ್ದ ದ್ವಿಸದಸ್ಯ ಪೀಠ ಆದೇಶಿಸಿದೆ. ಜತೆಗೆ ಹೋಗಿ ಬರುವ ಖರ್ಚನ್ನು ಭರಿಸುವಂತೆ ಮದನಿಗೇ ಕೋರ್ಟ್ ಸೂಚಿಸಿದೆ.
ವಿಚಾರಣಾಧೀನ ಕೋರ್ಟ್ನ ಆದೇಶ ಪ್ರಶ್ನಿಸಿ ಕಳೆದ ಶುಕ್ರವಾರ ಮದನಿ ಸಲ್ಲಿಸಿದ್ದ ಅರ್ಜಿ ಸ್ವೀಕರಿಸಿದ್ದ ಕೋರ್ಟ್, ಸೋಮವಾರ ವಿಚಾರಣೆ ನಡೆಸುವುದಾಗಿ ಹೇಳಿತ್ತು. ಅದರಂತೆ ಅರ್ಜಿ ಕೈಗೆತ್ತಿಕೊಂಡ ಪೀಠ, ಪೊಲೀಸರ ಜತೆಯಲ್ಲೇ ಹೋಗಿ ಬರಲು ಅವಕಾಶ ನೀಡಿತು. ವಿಚಾರಣಾಧೀನ ಕೋರ್ಟ್ ಮುಂದೆ ಆ.8 ರಿಂದ ಆ.20ರ ವರೆಗೆ ವಿವಾಹ ಕಾರ್ಯಕ್ರಮ ನಡೆಯಲಿದ್ದು, ಹೋಗಲು ಒಪ್ಪಿಗೆ ನೀಡುವಂತೆ ಮನವಿ ಮಾಡಿದ್ದ.
ಇದನ್ನು ತಿರಸ್ಕರಿಸಿದ್ದ ಕೋರ್ಟ್, ಅನಾರೋಗ್ಯ ಪೀಡಿತರಾಗಿರುವ ತಾಯಿಯನ್ನು ನೋಡಿ ಬರಲು ಆ.1 ರಿಂದ ಆ.7ರ ವರೆಗೆ ಹೋಗಿ ಬರಬಹುದು ಎಂದು ಹೇಳಿತ್ತು. 2014ರ ಜುಲೈನಲ್ಲೇ ಮದನಿಗೆ ಜಾಮೀನು ಸಿಕ್ಕಿದ್ದರೂ, ಕೋರ್ಟ್ನ ಅನುಮತಿ ಇಲ್ಲದೇ ಬೆಂಗಳೂರು ಬಿಟ್ಟು ಹೊರಹೋಗದಂತೆ ಸೂಚನೆ ನೀಡಿತ್ತು. ಇದರಿಂದಾಗಿ ಮದನಿ, ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ