ನಾಯರ್‌ ಬಿಜೆಪಿ ಸೇರ್ಪಡೆ


Team Udayavani, Oct 29, 2018, 8:29 AM IST

nayar.jpg

ತಿರುವನಂತಪುರಂ: ಶಬರಿಮಲೆ ಪ್ರಕರಣದಲ್ಲಿ ಭಕ್ತರ ಪರ ಹೆಬ್ಬಂಡೆಯಂತೆ ನಿಲ್ಲುವ ಮಹತ್ವದ ನಿರ್ಧಾರ ಕೈಗೊಂಡು ಕೇರಳದ ಎಡಪಕ್ಷಗಳ ನೇತೃತ್ವದ ಸರಕಾರದ ವಿರುದ್ಧ ಹೋರಾಟ ನಡೆಸುತ್ತಿರುವ ಬಿಜೆಪಿ, ಈಗ ಗಣ್ಯರನ್ನು ಪಕ್ಷಕ್ಕೆ ಸೆಳೆಯುತ್ತಿದೆ. ಇಸ್ರೋ ಮಾಜಿ ನಿರ್ದೇಶಕ ಜಿ.ಮಾಧವನ್‌ ನಾಯರ್‌ ಹಾಗೂ ನಾಲ್ವರು ರವಿವಾರ ತಿರುವನಂತಪುರದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಬಿಜೆಪಿ ಸೇರಿದ ನಾಲ್ವರ ಪೈಕಿ ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಮಾಜಿ ಅಧ್ಯಕ್ಷ ಹಾಗೂ ಮಾಜಿ ಕಾಂಗ್ರೆಸ್ಸಿಗ ಜಿ. ರಾಮನ್‌ ನಾಯರ್‌, ಮಲಂಕಾರ ಚರ್ಚ್‌ನ ಥಾಮಸ್‌ ಜಾನ್‌ ಕೂಡ ಸೇರಿದ್ದಾರೆ. ಶಬರಿಮಲೆ ವಿಚಾರ ದಲ್ಲಿ ಸರಕಾರದ ನಿಲುವನ್ನು ವಿರೋಧಿಸಿ, ಬಿಜೆಪಿ ಶನಿವಾರ ನಡೆಸಿದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರಿಂದ ರಾಮನ್‌ ನಾಯರ್‌ರನ್ನು ಕಾಂಗ್ರೆಸ್‌ನಿಂದ ಅಮಾನತು ಮಾಡಲಾಗಿತ್ತು. ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಸಮ್ಮುಖದಲ್ಲಿ ರವಿವಾರ ಇವರು ಬಿಜೆಪಿಗೆ ಸೇರ್ಪಡೆಗೊಂಡಿದ್ದು, ಪಕ್ಷಕ್ಕೆ ಇದು ಮಹತ್ವದ ಇಮೇಜ್‌ ತಂದುಕೊಡುವ ಸಾಧ್ಯತೆಯಿದೆ ಎನ್ನಲಾಗಿದೆ.

ರಾಹುಲ್‌ ಈಶ್ವರ್‌ ಬಂಧನ: ಶಬರಿಮಲೆಗೆ ಮಹಿಳೆಯರ ಪ್ರವೇಶ ವಿರೋಧಿಸಿ ಹೋರಾಡುತ್ತಿರುವ ಅಯ್ಯಪ್ಪ ಧರ್ಮ ಸೇನಾ ಸಂಘಟನೆ ಅಧ್ಯಕ್ಷ ರಾಹುಲ್‌ ಈಶ್ವರ್‌ರನ್ನು ರವಿವಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಚೋದನಾಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಇವರನ್ನು ಬಂಧಿಸಲಾಗಿದೆ. ಯಾವುದಾದರೂ ಮಹಿಳೆ ದೇಗುಲವನ್ನು ತಲುಪಲು ಯತ್ನಿಸಿದರೆ ದೇಗುಲದ ಬಳಿ ರಕ್ತ ಚೆಲ್ಲಿ ದೇಗುಲ ಮುಚ್ಚಲೂ ಸಿದ್ಧವಿದ್ದೇವೆ ಎಂದು ರಾಹುಲ್‌ ಸುದ್ದಿಗೋಷ್ಠಿಯಲ್ಲಿ ಹೇಳಿದ್ದರು ಎನ್ನಲಾಗಿದೆ.

ಶಾಗೆ ಸರಕಾರ‌ದ ತಿರುಗೇಟು: ಇನ್ನೂ ಉದ್ಘಾಟನೆಯಾಗದ ಕಣ್ಣೂರು ವಿಮಾನ ನಿಲ್ದಾಣಕ್ಕೆ ಬಂದಿಳಿಯಲು ಅಮಿತ್‌ ಶಾಗೆ ನಾವು ಅವಕಾಶ ನೀಡಿರುವುದು ನಮ್ಮ ಸರಕಾರವು ಅತಿಥಿಗಳಿಗೆ ನೀಡುವ ಸತ್ಕಾರವನ್ನು ತೋರಿಸುತ್ತದೆ. ಈ ಅನುಕೂಲ ಬಳಸಿಕೊಂಡ ಶಾ, ಎಲ್‌ಡಿಎಫ್ ಸರಕಾರವನ್ನು ಉರುಳಿಸುವ ಬೆದರಿಕೆ ಒಡ್ಡುತ್ತಾರೆ ಎಂದು ಹಣಕಾಸು ಸಚಿವ ಟಿ.ಎಂ.ಥಾಮಸ್‌ ಹೇಳಿದ್ದಾರೆ.

ಶಾ ಹೇಳಿಕೆ ಪ್ರಚೋದನಾಕಾರಿ: ಕಾಂಗ್ರೆಸ್‌, ಬಿಎಸ್‌ಪಿ
ಸುಪ್ರೀಂಕೋರ್ಟ್‌ ನೀಡಿದ ಹಲವು ತೀರ್ಪುಗಳನ್ನು ಸರಕಾರಗಳು ಅನುಷ್ಠಾನಕ್ಕೆ ತಂದಿಲ್ಲ. ಆದರೆ ಶಬರಿಮಲೆ ಪ್ರಕರಣವನ್ನು ಉತ್ಸಾಹದಿಂದ ಕೇರಳ ಸರಕಾರ ಜಾರಿಗೊಳಿಸಲು ನಿರ್ಧರಿಸಿದೆ ಎಂದು ಶನಿವಾರ ಅಮಿತ್‌ ಶಾ ಹೇಳಿರುವುದನ್ನು ಬಿಎಸ್‌ಪಿ ಹಾಗೂ ಕಾಂಗ್ರೆಸ್‌ ಖಂಡಿಸಿವೆ. ಅಲ್ಲದೆ ಇದು ಪ್ರಚೋದನಾಕಾರಿ ಹೇಳಿಕೆ ಎಂದು ಟೀಕಿಸಿವೆ. ಸಂಸ್ಥೆಗಳ ಗೌರವ ಹಾಳು ಮಾಡುವುದು ಹಾಗೂ ಅವುಗಳನ್ನು ಮುಚ್ಚುವುದೇ ಬಿಜೆಪಿಯ ಗುರಿ. ಸಿಬಿಐ, ಇಸಿ, ಸಿವಿಸಿ ಹಾಗೂ ಸಿಐಸಿ ವಿಚಾರದಲ್ಲೂ ಹೀಗೆಯೇ ನಡೆದಿದೆ ಎಂದು ಕಾಂಗ್ರೆಸ್‌ ವಕ್ತಾರ ಅಭಿಷೇಕ್‌ ಮನು ಹೇಳಿದ್ದಾರೆ. ದೇಶದ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎನ್ನುವುದಕ್ಕೆ ಅಮಿತ್‌ ಶಾ ಅವರ ಹೇಳಿಕೆಯೇ ಸಾಕ್ಷಿ ಎಂದು ಬಿಎಸ್‌ಪಿ ನಾಯಕಿ ಮಾಯಾವತಿ ಕಿಡಿಕಾರಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.