ಸಂತ್ರಸ್ತೆಗೆ ರಾಖಿ ಕಟ್ಟಿ ಕಾಣಿಕೆ ಕೊಡಲು ಲೈಂಗಿಕ ದೌರ್ಜನ್ಯ ಆರೋಪಿಗೆ ಕೋರ್ಟ್ ಆದೇಶ
Team Udayavani, Aug 4, 2020, 7:09 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಭೋಪಾಲ್: ‘ನಿನ್ನ ವಿರುದ್ಧ ಲೈಂಗಿಕ ದೌರ್ಜನ್ಯ ಯತ್ನ ಅಪಾದನೆ ಮಾಡಿರುವ ಮಹಿಳೆಯ ಮನೆಗೆ ತೆರಳಿ ರಾಖಿ ಕಟ್ಟಿ, ಜೀವನಪೂರ್ತಿ ಆಕೆಯನ್ನು ಸಹೋದರನಂತೆ ನೋಡಿಕೊಳ್ಳುವುದಾಗಿ ಅಭಯ ನೀಡಬೇಕು’ ಎಂದು ನ್ಯಾಯಾಲಯ ತಾಕೀತು ಮಾಡಿದೆ.
ಮಧ್ಯಪ್ರದೇಶ ಹೈಕೋರ್ಟ್ನ ಇಂದೋರ್ ಪೀಠವು, ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲು ಯತ್ನಿಸಿದ ಆಪಾದನೆ ಮೇರೆಗೆ ಜೈಲು ಸೇರಿರುವ ಆರೋಪಿಗೆ ಈ ರೀತಿ ಷರತ್ತುಬದ್ಧ ಜಾಮೀನು ನೀಡಿದೆ.
‘ನೀನು ಆ.3ರಂದು ನಿನ್ನ ಪತ್ನಿಯ ಜತೆಗೆ ಸಿಹಿ ತಿನಿಸು ಬಾಕ್ಸ್ನೊಂದಿಗೆ ಆ ‘ಸಂತ್ರಸ್ತೆ’ ಮನೆಗೆ ಹೋಗಿ ರಾಖಿ ಕಟ್ಟಬೇಕು. ಅಲ್ಲದೇ ಆಕೆಗೆ 11 ಸಾವಿರ ರೂ. ರಾಖಿ ಕಾಣಿಕೆ ನೀಡಿ ಆಶೀರ್ವಾದ ಪಡೆಯಬೇಕು. ಜತೆಗೆ ಮಹಿಳೆಯ ಪುತ್ರನಿಗೆ ಬಟ್ಟೆ, ಸಿಹಿತಿಂಡಿ ಖರೀದಿಸಲು 5 ಸಾವಿರ ರೂ. ನೀಡಬೇಕು ಎಂದು ಸೂಚನೆ ನೀಡಿದೆ.
ಕಳೆದ ಎಪ್ರಿಲ್ನಲ್ಲಿ ಉಜ್ಜೈನಿಯಲ್ಲಿ ವಿಕ್ರಂ ಬಾಗ್ರಿ ಎಂಬಾತ ಮಹಿಳೆಯ ಮೇಲೆ ಲೈಂಗಿಕ ಹಲ್ಲೆ ನಡೆಸಲು ಯತ್ನಿಸಿದ್ದನು. ಘಟನೆ ಸಂಬಂಧ ಈತನ ವಿರುದ್ಧ ಮಹಿಳೆ ದೂರು ದಾಖಲಿಸಿದ್ದಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್