Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

ರಾಜ್ಯದ ಒಬಿಸಿ ಸಮುದಾಯವೇ ನಿರ್ಣಾಯಕ

Team Udayavani, Apr 18, 2024, 11:50 AM IST

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

ಹಿಂದಿ ಭಾಷಿಕ ರಾಜ್ಯಗಳಲ್ಲಿ ಪ್ರಧಾನವಾಗಿರುವ ರಾಜ್ಯವೇ ಮಧ್ಯಪ್ರದೇಶ. ಬರೋಬ್ಬರಿ 2003ರಿಂದ 2018ರವರೆಗೆ, 2020 ಮಾ.3ರಿಂದ ಮತ್ತೆ ಬಿಜೆಪಿ ಆಡಳಿತವೇ ಇದೆ. ಹೀಗಾಗಿ, ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಯಾವ ಪಕ್ಷಕ್ಕೆ ಹೆಚ್ಚಿನ ಸ್ಥಾನ ಸಿಗಲಿದೆ ಎನ್ನುವುದು ಕುತೂಹಲ ಕಾರಿಯಾಗಿರುವ ಅಂಶವೇ ಆಗಿದೆ. 2023ರ ಡಿಸೆಂಬರ್‌ನಲ್ಲಿ ನಡೆದಿದ್ದ ವಿಧಾನಸಭೆ ಚುನಾವಣೆಯಲ್ಲಿ ಎಲ್ಲರ ನಿರೀಕ್ಷೆಯನ್ನೂ ಮೀರಿಸಿ ಬಿಜೆಪಿಯೇ 230 ಕ್ಷೇತ್ರಗಳ ಪೈಕಿ 160 ಕ್ಷೇತ್ರಗಳಲ್ಲಿ ಗೆದ್ದು ಅಧಿಕಾರ ಉಳಿಸಿಕೊಂಡು ದಾಖಲೆಯನ್ನೇ ನಿರ್ಮಿಸಿದೆ.

ಸಾಮಾನ್ಯವಾಗಿ ಆಯಾ ರಾಜ್ಯದಲ್ಲಿ ಇರುವ ಪಕ್ಷದ ಅಭ್ಯರ್ಥಿಗಳನ್ನೇ ಲೋಕಸಭೆ ಚುನಾವಣೆಯಲ್ಲಿ ಜನರು ಆಯ್ಕೆ ಮಾಡುತ್ತಾರೆ ಎಂಬ ನಂಬಿಕೆ ಇರುತ್ತದೆ. ಮಧ್ಯಪ್ರದೇಶ ವಿಚಾರಕ್ಕೆ ಬಂದರೆ ಆ ಅಂಶ ನಿಜವೂ ಆಗಿದೆ. 2014ರ ಲೋಕ ಸಭೆ ಚುನಾವಣೆಯಲ್ಲಿ ಒಟ್ಟು 29 ಕ್ಷೇತ್ರಗಳ ಪೈಕಿ 27 ಕ್ಷೇತ್ರಗಳಲ್ಲಿ ಬಿಜೆಪಿಯೇ ಗೆದ್ದಿದೆ. ಛಿಂದ್ವಾರಾ ಕ್ಷೇತ್ರದಿಂದ ಮಾಜಿ ಸಿಎಂ
ಕಮಲ್‌ನಾಥ್‌, ಗುಣಾದಿಂದ ಆಗ ಕಾಂಗ್ರೆಸ್‌ನಲ್ಲಿದ್ದ ಜ್ಯೋತಿರಾಧಿತ್ಯ ಸಿಂಧಿಯಾ ಗೆದ್ದಿದ್ದರು. 2019ರ ಚುನಾವಣೆಯಲ್ಲಿ ಛಿಂದ್ವಾರಾ ಕ್ಷೇತ್ರ ಹೊರತುಪಡಿಸಿ ಉಳಿದ ಎಲ್ಲಾ 28 ಕ್ಷೇತ್ರಗಳಲ್ಲಿ ಬಿಜೆಪಿ ಹುರಿಯಾಳುಗಳೇ ಗೆದ್ದಿದ್ದಾರೆ.

ಗುಣಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿದ್ದ ಡಾ.ಕೆ.ಪಿ.ಯಾದವ್‌ ಆಗ ಕಾಂಗ್ರೆಸ್‌ನಲ್ಲಿದ್ದ ಜ್ಯೋತಿರಾಧಿತ್ಯ ಸಿಂಧಿಯಾರನ್ನು ಸೋಲಿಸಿದ್ದರು. ಲೋಕಸಭೆ ಚುನಾವಣೆ ಘೋಷಣೆಯಾಗುವುದಕ್ಕಿಂತ ಮೊದಲು ಪ್ರಕಟವಾಗಿರುವ ಕೆಲವು ಸುದ್ದಿ ವಾಹಿನಿಗಳ ಸಮೀಕ್ಷೆ ಪ್ರಕಾರ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಎಲ್ಲಾ 29 ಕ್ಷೇತ್ರಗಳಲ್ಲಿಯೂ ಬಿಜೆಪಿ ಜಯಗಳಿಸುವ ಸಾಧ್ಯತೆಗಳಿವೆ. 2019ರ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಶೇ.35.8 ಮತ ಪ್ರಾಪ್ತಿಯಾಗಿದ್ದರೆ, ಬಿಜೆಪಿಗೆ ಅದ್ಧೂರಿ ಎಂಬಂತೆ ಶೇ.61.2 ಮತಗಳು ಬಗಲಿಗೆ ಬಿದ್ದಿವೆ.

ಕಮಲ್‌ನಾಥ್‌ ಪ್ರಭಾವ: ಒಂದು ಹಂತದಲ್ಲಿ ಮಾಜಿ ಸಿಎಂ ಕಮಲ್‌ನಾಥ್‌ ಅವರು ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಲಿದ್ದಾರೆ ಎಂಬ ಅಂಶ ದೇಶಾದ್ಯಂತ ಕುತೂಹಲಕ್ಕೆ ಕಾರಣ ವಾಗಿತ್ತು. ಅದಕ್ಕೆ ಸಂಬಂಧಿಸಿದಂತೆ ಹಲವು ವ್ಯಾಖ್ಯಾನಗಳೂ ಮಾಧ್ಯಮಗಳಲ್ಲಿ ಪ್ರಕಟವಾದವು. ನಂತರ ಕಮಲ್‌ನಾಥ್‌
ಅವರೇ ಅದನ್ನು ತಿಳಿಸಿಗೊಳಿಸಿದರು.

ಕಾಂಗ್ರೆಸ್‌ ವರ್ಸಸ್‌ ಬಿಜೆಪಿ: ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ಇದೆ. ಕಾಂಗ್ರೆಸ್‌ ಇಂಡಿಯಾ ಒಕ್ಕೂಟದ ಪಾಲುದಾರ ಪಕ್ಷಗಳಿಗಾಗಲಿ, ಬಿಜೆಪಿ ಎನ್‌ಡಿಎಯ ಮಿತ್ರಪಕ್ಷಗಳಿಗಾಗಲಿ ಸ್ಥಾನ ಬಿಟ್ಟುಕೊಡ
ಬೇಕಾಗಿರುವ ಅನಿವಾರ್ಯ ಸ್ಥಿತಿ 2 ಪಕ್ಷಗಳಿಗೂ ಇಲ್ಲ.

ಪ್ರಮುಖ ವಿಚಾರಗಳು: ಶಿವರಾಜ್‌ ಸಿಂಗ್‌ ಚೌಹಾಣ್‌ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಬೆಳಕಿಗೆ ಬಂದ ವ್ಯಾಪಂ, ಭ್ರಷ್ಟಾಚಾರ
ಪ್ರಕರಣಗಳನ್ನು ಕಾಂಗ್ರೆಸ್‌ ನಾಯಕರು ಪ್ರಚಾರ ವೇಳೆ ಮಂಡಿಸುತ್ತಿದ್ದಾರೆ. ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಪದೇ ಪದೆ “ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ‌ ಜಾತಿ ಗಣತಿ ನಡೆಸುತ್ತೇವೆ’ ವಾಗ್ಧಾನ ಮಾಡುತ್ತಿದ್ದಾರೆ. ಈ ಅಂಶ ಒಂದು ಹಂತಕ್ಕೆ ಪ್ರಭಾವ ಬೀರಬಹುದು. ರಾಜ್ಯದಲ್ಲಿನ ರೈತರು ಉತ್ತಮ ಗುಣಮಟ್ಟದ ಬಿತ್ತನೆ ಬೀಜ, ಕಡಿಮೆ ದರದಲ್ಲಿ ರಸಗೊಬ್ಬರ ಸಿಗುತ್ತಿಲ್ಲ ಎಂಬ ಚಿಂತೆಯಲ್ಲಿದ್ದಾರೆ. ಕಾಂಗ್ರೆಸ್‌ ಕರ್ನಾಟಕ ಮಾದರಿಯ ಘೋಷಣೆಗಳನ್ನು ಜಾರಿ ಮಾಡುವ ಘೋಷಣೆ ಮಾಡಿದ್ದರೆ, ಬಿಜೆಪಿ ಪ್ರಧಾನಿಯವರ ಗ್ಯಾರಂಟಿಯನ್ನು ನೆಚ್ಚಿಕೊಂಡಿದೆ.

ಮಧ್ಯಪ್ರದೇಶದಲ್ಲಿನ ನಿರುದ್ಯೋಗ ಸಮಸ್ಯೆಯೂ ಚುನಾವಣಾ ವಿಚಾರವಾಗಿದೆ. ದಲಿತರು, ಬುಡಕಟ್ಟು ಸಮುದಾಯದವರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯದ ಪ್ರಕರಣಗಳೂ ಚುನಾವಣೆಯಲ್ಲಿ ಬಿಜೆಪಿಯನ್ನು ಹಣಿಯಲು ಕಾಂಗ್ರೆಸ್‌ ಬಳಸಿಕೊಳ್ಳುತ್ತಿದೆ.

ಜಾತಿ ಲೆಕ್ಕಾಚಾರ: 2011ರ ಜನಸಂಖ್ಯೆಯ ಪ್ರಕಾರ ಮಧ್ಯಪ್ರದೇಶದ ಒಟ್ಟು ಜನಸಂಖ್ಯೆ 7.27 ಕೋಟಿ. ಈ ಪೈಕಿ ಹಿಂದೂ ಸಮುದಾಯದ ಪ್ರಮಾಣ ಶೇ.91, ಮುಸ್ಲಿಂ ಸಮುದಾಯ ಶೇ.7, ಒಬಿಸಿ ಶೇ.42, ಎಸ್‌ಸಿ ಶೇ.15.2, ಎಸ್‌ಟಿ ಶೇ.21.9, ಇತರ ಸಾಮಾನ್ಯ ಜಾತಿಗಳ ಪ್ರಮಾಣ ಶೇ.20. ಹೀಗಾಗಿ, ಅಭ್ಯರ್ಥಿಗಳ ಆಯ್ಕೆಯ ಲೆಕ್ಕಾಚಾರದಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಈ ಸಮೀಕರಣವನ್ನು ಮುಂದಿಟ್ಟು ಕೊಂಡೇ ಅಭ್ಯರ್ಥಿಗಳ ಆಯ್ಕೆ ಮಾಡಿದೆ ಎನ್ನುವುದು ಸ್ಪಷ್ಟ. ಇನ್ನು ಆಡಳಿತಾರೂಢ ಬಿಜೆಪಿಯಂತೂ 12 ಕ್ಷೇತ್ರಗಳಲ್ಲಿ ವಿವಿಧ ಕಾರಣಗಳಿಗಾಗಿ ಹೊಸಬರಿಗೆ ಟಿಕೆಟ್‌ ನೀಡಿದೆ.

ಕೌಟುಂಬಿಕ ರಾಜಕಾರಣವೂ ಇದೆ: ಈ ರಾಜ್ಯದಲ್ಲಿ ಜಾತಿ ರಾಜಕಾರಣದ ಜತೆಗೆ ಕೌಟುಂಬಿಕ ರಾಜಕಾರಣವೂ ಇದೆ.
ಪ್ರಸಕ್ತ ಚುನಾವಣೆಯಲ್ಲಿ ಒಟ್ಟು 15 ಅಭ್ಯರ್ಥಿಗಳು ರಾಜಕೀಯ ಹಿನ್ನೆಲೆ ಇರುವವರು ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಈ
ಪ್ರಮುಖರಾದವರೆಂದರೆ ಕಾಂಗ್ರೆಸ್‌ನ ಹಿರಿಯ ನಾಯಕ ಕಮಲ್‌ನಾಥ್‌ ಪುತ್ರ ನಕುಲ್‌ನಾಥ್‌, ಗುಣಾದಿಂದ ಕಣಕ್ಕೆ ಇಳಿದಿರುವ ಜ್ಯೋತಿರಾಧಿತ್ಯ ಸಿಂಧಿಯಾ, ದಿಗ್ವಿಜಯ ಸಿಂಗ್‌, ಕಮಲೇಶ್ವರ ಪಟೇಲ್‌, ಗುಡ್ಡು ರಾಜಾ ಬುಂದೇಲಾ, ಅರುಣ್‌ ಶ್ರೀವಾಸ್ತವ. ಮಧ್ಯಪ್ರದೇಶಕ್ಕೆ ಸಂಬಂಧಿಸಿದಂತೆ ಕೌಟುಂಬಿಕ ಹಿನ್ನೆಲೆ ಇರುವ ನಾಯಕರ ಪೈಕಿ ಬಿಜೆಪಿ ವತಿಯಿಂದ 3 ಮಂದಿ ಇದ್ದರೆ, ಕಾಂಗ್ರೆಸ್‌ ವತಿಯಿಂದ 12 ಮಂದಿ ಇದ್ದಾರೆ!

*ಸದಾಶಿವ ಕೆ

ಟಾಪ್ ನ್ಯೂಸ್

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.