ಕಮಲನಾಥ್ ಸರಕಾರವನ್ನು ಬಿಜೆಪಿ ಬೀಳಿಸುವುದಿಲ್ಲ – ಅದಕ್ಕೆ ಇಲ್ಲಿದೆ ಕಾರಣ


Team Udayavani, Mar 11, 2020, 8:30 AM IST

ಕಮಲನಾಥ್ ಸರಕಾರವನ್ನು ಬಿಜೆಪಿ ಬೀಳಿಸುವುದಿಲ್ಲ – ಅದಕ್ಕೆ ಇಲ್ಲಿದೆ ಕಾರಣ

ಭೋಪಾಲ್: ಕಾಂಗ್ರೆಸ್ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಅವರು ತಮ್ಮ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಕಮಲನಾಥ್ ಸರಕಾರದಲ್ಲಿದ್ದ 20 ಜನ ಶಾಸಕರು ರಾಜೀನಾಮೆ ನೀಡಿರುವುದರಿಂದ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರಕಾರ ಅಲ್ಪಮತಕ್ಕೆ ಜಾರಿದೆ.

ಇನ್ನೊಂದೆಡೆ 20 ಜನ ಶಾಸಕರು ರಾಜೀನಾಮೆ ನೀಡಿರುವುದರಿಂದ ಸದನದ ಒಟ್ಟು ಸದಸ್ಯ ಬಲದಲ್ಲಿಯೂ ಕುಸಿತವಾಗಿದ್ದು ಇದೀಗ ಸರಳ ಬಹುಮತಕ್ಕೆ 105 ಸ್ಥಾನಗಳಷ್ಟೇ ಸಾಕಾಗಿರುವುದರಿಂದ ಸದ್ಯದ ಪರಿಸ್ಥಿತಿಯಲ್ಲಿ 107 ಶಾಸಕರನ್ನು ಹೊಂದಿರುವ ಬಿಜೆಪಿ ಸುಲಭವಾಗಿ ಅಧಿಕಾರಕ್ಕೇರಬಹುದಾಗಿದೆ.

ಆದರೆ ಹಿರಿಯ ಬಿಜೆಪಿ ನಾಯಕರೊಬ್ಬರು ‘ದಿ ಪ್ರಿಂಟ್’ಗೆ ನೀಡಿರುವ ಮಾಹಿತಿಯಂತೆ ಪ್ರಮುಖ ಪ್ರತಿಪಕ್ಷವಾಗಿರುವ ಬಿಜೆಪಿ ಕಮಲನಾಥ್ ಸರಕಾರ ವಿರುದ್ಧ ಅವಿಶ್ವಾಸಮತ ನಿರ್ಣಯವನ್ನು ಮಂಡಿಸುವ ಸಾಧ್ಯತೆಗಳಿಲ್ಲ. ಇದಕ್ಕೆ ಅವರು ನೀಡಿರುವ ಕಾರಣ ಸ್ವಾರಸ್ಯಕರವಾಗಿದೆ.

ಇದೇ ಮಾರ್ಚ್ 16ರಿಂದ ಮಧ್ಯಪ್ರದೇಶ ವಿಧಾನ ಸಭೆಯ ಬಜೆಟ್ ಅಧಿವೇಶನ ಪ್ರಾರಂಭವಾಗಲಿದೆ. ಈ ಸಂದರ್ಭದಲ್ಲಿ ಕಮಲನಾಥ್ ಸರಕಾರಕ್ಕೆ ಬಜೆಟ್ ಮಂಡಿಸುವ ಅವಕಾಶವನ್ನು ಬಿಜೆಪಿ ನಿಡಲಿದೆ. ಆದರೆ ಬಳಿಕ ಬಜೆಟ್ ಗೆ ಅನುಮೋದನೆಯನ್ನು ಪಡೆದುಕೊಳ್ಳುವ ಸಂದರ್ಭದಲ್ಲಿ ಕಮಲನಾಥ್ ಅವರು ನಿಜವಾದ ಸವಾಲನ್ನು ಎದುರಿಸಲಿದ್ದಾರೆ. ಯಾಕೆಂದರೆ ಆ ಸಂದರ್ಭದಲ್ಲಿ ಕಮಲನಾಥ್ ಬಳಿಯಲ್ಲಿ ಬಜೆಟ್ ಗೆ ಅನುಮೋದನೆ ಪಡೆದುಕೊಳ್ಳಲು ಬೇಕಾಗಿರುವಷ್ಟು ಶಾಸಕರ ಬೆಂಬಲ ಇರುವುದಿಲ್ಲ. ಹೀಗಾದಾಗ ಕಮಲನಾಥ್ ನೇತೃತ್ವದ ಕಾಂಗ್ರೆಸ್ ಸರಕಾರ ತನ್ನಿಂತಾನೇ ಸದನದಲ್ಲಿ ವಿಶ್ವಾಸಮತವನ್ನು ಕಳೆದುಕೊಳ್ಳಲಿದೆ ಮತ್ತು ಕಮಲನಾಥ್ ತಮ್ಮ ಮುಖ್ಯಮಂತ್ರಿ ಪದಕ್ಕೆ ರಾಜೀನಾಮೆ ನೀಡುವುದು ಅನಿವಾರ್ಯವಾಗಲಿದೆ.

ಈ ಕಾರ್ಯತಂತ್ರವನ್ನು ಅನುಸರಿಸುವ ಮೂಲಕ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಸರಕಾರವನ್ನು ಬೀಳಿಸಿದ ಅಪವಾದ ತನಗೆ ಬರದಂತೆ ನೋಡಿಕೊಳ್ಳುವ ಜಾಣ್ಮೆಯನ್ನು ಬಿಜೆಪಿ ಹೈಕಮಾಂಡ್ ತೋರಲಿದೆ ಎಂಬುದು ಅನಾಮಧೇಯ ಬಿಜೆಪಿ ಶಾಸಕರ ವಾದ.

ಇನ್ನು ಮಧ್ಯಪ್ರದೇಶದ ಹಿರಿಯ ಕಾಂಗ್ರೆಸ್ ಶಾಸಕರೊಬ್ಬರು ಅಭಿಪ್ರಾಯಪಟ್ಟಿರುವಂತೆ ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿಗೆ ಸೇರ್ಪಡೆಗೊಳ್ಳುವ ಕುರಿತಾಗಿ 2013ರಲ್ಲೇ ಮಾತುಕತೆಯಾಗಿತ್ತಂತೆ. ಅದು ಏಳು ವರ್ಷಗಳ ಬಳಿಕ ಇದೀಗ ಸಾಕಾರಗೊಂಡಿದೆ ಎನ್ನುತ್ತಾರೆ ಅವರು.

ಟಾಪ್ ನ್ಯೂಸ್

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.