ಮಧ್ಯಪ್ರದೇಶ: ಸೈಕೋಪಾತ್ ಕಿಲ್ಲರ್ ಎನ್ ಕೌಂಟರ್ ಗೆ ಬಲಿ, ಐವರು ಪೊಲೀಸರಿಗೆ ಗಾಯ
ಈತನ ವಿರುದ್ಧ ಹಲವಾರು ರಾಜ್ಯಗಳಲ್ಲಿ ಆರು ಕೊಲೆ ಪ್ರಕರಣ ದಾಖಲಾಗಿದೆ ಎಂದು ಮೂಲಗಳು ತಿಳಿಸಿವೆ.
Team Udayavani, Dec 4, 2020, 10:46 AM IST
ಭೋಪಾಲ್: ಸೈಕೋಪಾತ್ ಕಿಲ್ಲರ್ ಎನ್ ಕೌಂಟರ್ ಗೆ ಬಲಿಯಾಗಿರುವ ಘಟನೆ ಮಧ್ಯಪ್ರದೇಶದ ರತ್ಲಾಮ್ ನಲ್ಲಿ ನಡೆದಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಈ ಕಾರ್ಯಾಚರಣೆ ವೇಳೆ ಐವರು ಪೊಲೀಸರು ಗಾಯಗೊಂಡಿದ್ದಾರೆ.
ಸೈಕೋಪಾತ್ ಕಿಲ್ಲರ್ ಆರೋಪಿ ಗುಜರಾತ್ ನ ದಾಹೋದ್ ನಿವಾಸಿ ದಿಲೀಪ್ ದೇವಾಲ್ ಎನ್ ಕೌಂಟರ್ ಗೆ ಬಲಿಯಾಗಿದ್ದು, ಈತನ ವಿರುದ್ಧ ಹಲವಾರು ರಾಜ್ಯಗಳಲ್ಲಿ ಆರು ಕೊಲೆ ಪ್ರಕರಣ ದಾಖಲಾಗಿದೆ ಎಂದು ಮೂಲಗಳು ತಿಳಿಸಿವೆ.
ರತ್ಲಾಮ್ ನಲ್ಲಿ ನವೆಂಬರ್ 25ರಂದು ಚೋಟಿ ದೀಪಾವಳಿ ಆಚರಣೆಯ ಸಂಭ್ರಮದಲ್ಲಿ ಜನರು ಪಾಲ್ಗೊಂಡಿದ್ದ ವೇಳೆ ಇದೇ ಅವಕಾಶ ಬಳಸಿಕೊಂಡಿದ್ದ ನಟೋರಿಯಸ್ ಕಿಲ್ಲರ್ ದೇವಾಲ್, ಮನೆಯೊಂದಕ್ಕೆ ನುಗ್ಗಿ ಮೂವರನ್ನು (ಪತಿ, ಪತ್ನಿ ಮತ್ತು ಮಗಳು) ಗುಂಡಿಕ್ಕಿ ಹತ್ಯೆಗೈದಿರುವುದಾಗಿ ಪೊಲೀಸ್ ಅಧಿಕಾರಿಗಳು ವಿವರ ನೀಡಿದ್ದಾರೆ.
ಅಂದು ರಾತ್ರಿ ದೀಪಾವಳಿ ಪಟಾಕಿ ಶಬ್ದದ ಸಂದರ್ಭವನ್ನು ಉಪಯೋಗಿಸಿಕೊಂಡು ದೇವಾಲ್ ಮತ್ತು ಆತನ ಸಹಚರರು ವ್ಯವಸ್ಥಿತವಾಗಿ ದಾಳಿ ನಡೆಸಿದ್ದರು. ಅಷ್ಟೇ ಅಲ್ಲ ಜೂನ್ ತಿಂಗಳಿನಲ್ಲಿ ದೇವಾಲ್ ಮಹಿಳೆಯೊಬ್ಬರನ್ನು ಹತ್ಯೆಗೈದ ಆರೋಪ ಎದುರಿಸುತ್ತಿರುವುದಾಗಿಯೂ ವರದಿ ತಿಳಿಸಿದೆ.
ಇದನ್ನೂ ಓದಿ:ಶಿವಮೊಗ್ಗದಲ್ಲಿ ಮುಸಲ್ಮಾನ್ ಗೂಂಡಾಗಿರಿ ನಡೆಯಲ್ಲ: ಈಶ್ವರಪ್ಪ ಕೆಂಡಾಮಂಡಲ
ರತ್ಲಾಮ್ ನಲ್ಲಿ ಸಲೂನ್ ಅಂಗಡಿ ಇಟ್ಟುಕೊಂಡಿದ್ದ ವ್ಯಕ್ತಿ ತನಗೆ ಸೇರಿದ್ದ ಜಾಗವನ್ನು ಮಾರಾಟ ಮಾಡಿದ್ದು, ಆ ಹಣವನ್ನು ಮನೆಯಲ್ಲಿ ಇಟ್ಟುಕೊಂಡಿರುವ ಬಗ್ಗೆ ಕಿಲ್ಲರ್ ದೇವಾಲ್ ಮಾಹಿತಿ ಪಡೆದುಕೊಂಡು ಕುಟುಂಬದ ಮೂವರನ್ನು ಗುಂಡಿಕ್ಕಿ ಹತ್ಯೆಗೈದು ಹಣ ದೋಚಿ ಪರಾರಿಯಾಗಿದ್ದ ಎಂದು ವರದಿ ಹೇಳಿದೆ.
ಈ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇತರ ಆರೋಪಿಗಳಾದ ಅನುರಾಗ್ ಮೇಹಾರ್ (25ವರ್ಷ), ಗೌರವ್ ಬಿಲ್ವಾಲ್ (22ವರ್ಷ) ಮತ್ತು ಲಾಲಾ ಭಾಬೋರ್ (20ವರ್ಷ) ನನ್ನು ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ