ಜೂ. 8ರಂದು ಮೋದಿ ಗುರುವಾಯೂರಿಗೆ
Team Udayavani, Jun 2, 2019, 6:00 AM IST
ತಿರುವನಂತಪುರ: ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ವಾರ ಕೇರಳಕ್ಕೆ ಭೇಟಿ ನೀಡಲಿದ್ದು, ಜೂ. 8ರಂದು ಗುರುವಾಯೂರಿನ ಶ್ರೀ ಕೃಷ್ಣ ದೇವಾಲಯದಲ್ಲಿ ಪೂಜೆ ಸಲ್ಲಿಸಲಿದ್ದಾರೆ. ಸತತ ಎರಡನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ದಕ್ಷಿಣ ರಾಜ್ಯವೊಂದಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ದೇವಾಲಯದಲ್ಲಿ ಕನಿಷ್ಠ 45 ನಿಮಿಷಗಳ ಕಾಲ ಅವರು ಕಾಲ ಕಳೆಯಲಿದ್ದಾರೆ ಎಂದು ದೇಗುಲದ ಮೂಲಗಳು ತಿಳಿಸಿವೆ.
ನಮಗೆ ಬಂದ ಮಾಹಿತಿಯ ಪ್ರಕಾರ, ಜೂ.8ರಂದು ಮಧ್ಯಾಹ್ನದ ವೇಳೆಗೆ ಪ್ರಧಾನಿ ಮೋದಿ ಅವರು ಶ್ರೀ ಕೃಷ್ಣ ದೇವಾಲ ಯಕ್ಕೆ ತಲುಪಲಿದ್ದು, “ಉತ್ಛಪೂಜೆ’ಯಲ್ಲಿ ಪಾಲ್ಗೊಳ್ಳಲಿದ್ದಾರೆ. ಆದರೆ, ಅವರೊಂದಿಗೆ ಬೇರೆ ಸಚಿವರು ಆಗಮಿಸುತ್ತಾರಾ ಎಂಬ ಬಗ್ಗೆ ಮಾಹಿತಿಯಿಲ್ಲ ಎಂದು ಗುರುವಾಯೂರು ದೇವಸ್ವಂ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಧಾನಿ ಮೋದಿ ಅಂದು ಬೆಳಗ್ಗೆ 11.30ಕ್ಕೆ ಕೇರಳ ತಲುಪಲಿದ್ದು, ಸಂಜೆ 4ರ ವೇಳೆಗೆ ದೆಹಲಿಗೆ ವಾಪಸಾಗಲಿದ್ದಾರೆ. ದೇವಸ್ಥಾನ ಭೇಟಿ ಹೊರತುಪಡಿಸಿ ಬೇರೆ ಯಾವುದೇ ಅಧಿಕೃತ ಕಾರ್ಯಕ್ರಮ ನಿಯೋಜನೆಯಾಗಿಲ್ಲ ಎಂದೂ ಮೂಲಗಳು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Telangana: ಪಿಯು ಫಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…