ವಣ್ಣಿಯಾರ್ ಸಮುದಾಯದ ಶೇ. 10.5 ಮೀಸಲಾತಿ ರದ್ದು
Team Udayavani, Nov 1, 2021, 9:00 PM IST
ಚೆನ್ನೈ: ತಮಿಳುನಾಡಿನಲ್ಲಿ ಈ ಹಿಂದೆ ಅಧಿಕಾರದಲ್ಲಿದ್ದ ಎಐಎಡಿಎಂಕೆ ಸರ್ಕಾರ, ವಣ್ಣಿಯಾರ್ ಸಮುದಾಯಕ್ಕೆ ನೀಡಿದ್ದ ಶೇ. 10.5ರಷ್ಟು ಒಳ ಮೀಸಲಾತಿಯನ್ನು ಮದ್ರಾಸ್ ಹೈಕೋರ್ಟ್ನ ಮಧುರೈ ಪೀಠ ರದ್ದುಗೊಳಿಸಿದೆ.
ಕರ್ನಾಟಕದಲ್ಲಿ ಕೆಲವು ಸಮುದಾಯಗಳಿಗೆ ಒಳ ಮೀಸಲಾತಿ ಸೌಲಭ್ಯ ಕಲ್ಪಿಸುವ ಆಗ್ರಹಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಹಾಗೂ ಚುನಾವಣೆಯಂಥ ಸಂದರ್ಭಗಳಲ್ಲಿ ಜನರ ಮನಸ್ಸು ಗೆಲ್ಲಲು ಒಳ ಮೀಸಲಾತಿ ಕಲ್ಪಿಸುವ ಬಗ್ಗೆ ಕೈಗೊಳ್ಳುವ ನಿರ್ಧಾರ ಕೈಗೊಳ್ಳುವ ರಾಜಕೀಯ ಪಕ್ಷಗಳಿಗೆ ಇದೊಂದು ಎಚ್ಚರಿಕೆಯ ಗಂಟೆಯಾಗಿ ಪರಿಣಮಿಸಿದೆ.
ಏನಿದು ಪ್ರಕರಣ?:
2021ರ ತಮಿಳುನಾಡು ಚುನಾವಣೆಗೆ ಅಧಿಸೂಚನೆ ಹೊರಬೀಳುವ ಕೆಲವೇ ಗಂಟೆಗಳ ಮುನ್ನ ಸರ್ಕಾರ ಈ ಮೀಸಲಾತಿ ನಿರ್ಧಾರ ಪ್ರಕಟಿಸಿತ್ತು. ಚುನಾವಣೆ ನಂತರ ಅಧಿಕಾರಕ್ಕೆ ಬಂದ ಡಿಎಂಕೆ ಸರ್ಕಾರ ಇದನ್ನು ಜಾರಿಗೊಳಿಸಿತ್ತು. ಆದರೆ, ಆದೇಶದ ವಿರುದ್ಧ ಹಲವಾರು ಮೇಲ್ಮನವಿಗಳು ಸಲ್ಲಿಕೆಯಾಗಿದ್ದವು. ಅತಿ ಹಿಂದುಳಿದ ಜಾತಿಗಳಿಗೆ (ಎಂಬಿಸಿ) ಶೇ. 20ರಷ್ಟು ಮೀಸಲಾತಿಯಿದೆ. ಇನ್ನು, ಎಂಬಿಸಿಗಳಲ್ಲಿ ವಣ್ಣಿಯಾರ್ ಸಮುದಾಯದವರ ಪ್ರಮಾಣ ಶೇ. 20ರಷ್ಟಿದೆ. ಇಷ್ಟು ಸಣ್ಣ ಸಮುದಾಯಕ್ಕೆ ಶೇ. 10.5ರಷ್ಟು ಮೀಸಲಾತಿ ನೀಡಿದರೆ, ಎಂಬಿಸಿಯ ಉಳಿದ ಸಮುದಾಯಗಳಿಗೆ ಅನ್ಯಾಯವಾಗುತ್ತದೆ ಎಂದು ಅರ್ಜಿದಾರರು ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು