ಸೆ.20ರ ವರೆಗೆ ತ.ನಾ.ವಿಶ್ವಾಸ ಮತ ಇಲ್ಲ : ಮದ್ರಾಸ್ ಹೈಕೋರ್ಟ್
Team Udayavani, Sep 14, 2017, 4:03 PM IST
ಚೆನ್ನೈ : ಸೆಪ್ಟಂಬರ್ 20ರ ವರೆಗೆ ತಮಿಳು ನಾಡು ವಿಧಾನಸಭೆಯಲ್ಲಿ ಸದನ ಬಲಾಬಲ ಪರೀಕ್ಷೆ ಇಲ್ಲ ಎಂದು ಮದ್ರಾಸ್ ಹೈಕೋರ್ಟ್ ಇಂದು ಗುರುವಾರ ತೀರ್ಪು ನೀಡಿದೆ.
ತಮಿಳು ನಾಡಿನ ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಮತ್ತು ಅವರ ಉಪ ಮುಖ್ಯಮಂತ್ರಿ ಓ ಪನ್ನೀರಸೆಲ್ವಂ ಅವರಿಗೆ ಮದ್ರಾಸ್ ಹೈಕೋರ್ಟಿನ ಈ ತೀರ್ಪಿನಿಂದಾಗಿ ಭಾರೀ ದೊಡ್ಡ ರಿಲೀಫ್ ಸಿಕ್ಕಿದಂತಾಗಿದೆ ಎಂದು ಸಿಎನ್ಎನ್ ನ್ಯೂಸ್ 18 ವರದಿ ಮಾಡಿದೆ.
ಪಳನಿಸ್ವಾಮಿ ಅವರ ಸರಕಾರವನ್ನು ಹೇಗಾದರೂ ಉರುಳಿಸಬೇಕು ಎಂಬ ಹಠಕ್ಕೆ ಬಿದ್ದಿರುವ ಟಿಟಿವಿ ದಿನಕರನ್ ಗೆ ಮದ್ರಾಸ್ ಹೈಕೋರ್ಟಿನ ಈ ತೀರ್ಪಿನಿಂದಾಗಿ ಭಾರೀ ಹಿನ್ನಡೆ ಉಂಟಾಗಿದೆ.
ದಿನಕರನ್ ನಿನ್ನೆ ಬುಧವಾರವಷ್ಟೇ ತಾನು ಡಿಎಂಕೆ ಜತೆಗೆ ಹೋಗುವುದಿಲ್ಲ ಎಂದು ಖಡಾಖಂಡಿತವಾಗಿ ಹೇಳಿದ್ದರು. ಆ ಮೂಲಕ ಅವರು ಹಲವು ಊಹಾಪೋಹಗಳಿಗೆ ತೆರೆ ಎಳೆದಿದ್ದರು. ದಿನಕರನ್ ಅವರು ಪಳನಿಸ್ವಾಮಿ ಮತ್ತು ಓ ಪನ್ನೀರಸೆಲ್ವಂ ಅವರ ವಿಲಯನಗೊಂಡಿರುವ ಬಣದಿಂದ ಬೇರ್ಪಡುವರೆಂಬ ಊಹಾಪೋಹಗಳು ನಿನ್ನೆಯ ತನಕವೂ ದಟ್ಟವಾಗಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು