18 ಶಾಸಕರ ಅನರ್ಹತೆ ಮಾನ್ಯ
Team Udayavani, Oct 26, 2018, 10:00 AM IST
ಚೆನ್ನೈ: ತಮಿಳುನಾಡಿನ 18 ಶಾಸಕರ ಅನರ್ಹತೆಯನ್ನು ಮದ್ರಾಸ್ ಹೈಕೋರ್ಟ್ ಎತ್ತಿ ಹಿಡಿದಿದ್ದು, ಎಐಎಡಿಎಂಕೆ ಸರಕಾರ ನಿರಾಳವಾದಂತಾಗಿದೆ. ಈ ಹಿಂದೆ ಮದ್ರಾಸ್ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿತ್ತಾದರೂ ಜೂ.14ರಂದು ಆಗಿನ ಜಡ್ಜ್ ಇಂದಿರಾ ನೀಡಿದ ತೀರ್ಪನ್ನು ನ್ಯಾಯಪೀಠ ಈಗ ಎತ್ತಿ ಹಿಡಿದಿದೆ. ಜೂ.14ರಂದು ಮದ್ರಾಸ್ ಹೈಕೋರ್ಟ್ ದ್ವಂದ್ವ ತೀರ್ಪು ನೀಡಿತ್ತು. ಶಾಸಕರ ಅನರ್ಹತೆಗೊಳಿಸಿದ ಸ್ಪೀಕರ್ ಧನಪಾಲ್ ನಿರ್ಧಾರವನ್ನು ನ್ಯಾ| ಬ್ಯಾನರ್ಜಿ ಅನುಮೋದಿಸಿದ್ದರೆ, ನ್ಯಾ| ಎಂ.ಸುಂದರ್ ವ್ಯತಿರಿಕ್ತ ತೀರ್ಪು ನೀಡಿದ್ದರು. ಇದರಿಂದಾಗಿ ನ್ಯಾ| ಎಂ. ಸತ್ಯ ನಾರಾಯಣನ್ರನ್ನು ನೇಮಿಸಲಾಗಿತ್ತು. ಈಗ ತೀರ್ಪು ನೀಡಿರುವ ಅವರು, ನ್ಯಾ| ಬ್ಯಾನರ್ಜಿ ನೀಡಿದ ತೀರ್ಪನ್ನು ಎತ್ತಿ ಹಿಡಿದಿದ್ದಾರೆ.
ಕಳೆದ ವರ್ಷ ಸೆ.18ರಂದು 18 ಎಐಎಡಿಎಂಕೆ ಶಾಸಕರನ್ನು ಪಕ್ಷಾಂತರ ನಿಷೇಧ ಕಾಯ್ದೆ ಅಡಿ ಅನರ್ಹಗೊಳಿಸಲಾಗಿತ್ತು. ಈ ಶಾಸಕರು ಎಐಎಡಿಎಂಕೆಯ ಇನ್ನೊಂದು ಬಣದ ಮುಖಂಡ ಟಿಟಿವಿ ದಿನಕರನ್ಗೆ ಬೆಂಬಲ ಸೂಚಿಸಿ, ಸಿಎಂ ಪಳನಿಸ್ವಾಮಿ ವಿರುದ್ಧ ಅವಿಶ್ವಾಸಮತ ಕೋರುವಂತೆ ರಾಜ್ಯಪಾಲರನ್ನು ಭೇಟಿಯಾಗಿ ವಿನಂತಿಸಿದ್ದರು. ಈ ಹಿನ್ನೆಲೆಯಲ್ಲಿ ಇವರನ್ನು ಅನರ್ಹಗೊಳಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
MUST WATCH
ಹೊಸ ಸೇರ್ಪಡೆ
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್